Homeಕರ್ನಾಟಕಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗ

- Advertisement -
- Advertisement -

ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆಯ ಭಾಗವಾಗಿ ನೀಡುವ ಮೊಟ್ಟೆ ವಿತರಣೆ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದವೇರ್ಪಟ್ಟಿತ್ತು. ರಾಜಕೀಯ ಮತ್ತು ಧಾರ್ಮಿಕ ಮುಖಂಡರಿಂದ ತೀವ್ರ ವಿವಾದಕ್ಕೊಳಗಾಗಿದ್ದ ವಿಚಾರವನ್ನು ರಾಜ್ಯದ ಮಕ್ಕಳೆ ಸ್ಪಷ್ಟಪಡಿಸಿದ್ದು, ಮಧ್ಯಾಹ್ನದ ಊಟದ ವೇಳೆಯಲ್ಲಿ ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದಾರೆ. 80% ದಷ್ಟು ಶಾಲಾ ಮಕ್ಕಳು ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದು, ಉಳಿದ ಮಕ್ಕಳು ಬಾಳೆಹಣ್ಣುಗಳು ಮತ್ತು ಚಿಕ್ಕಿಗಳನ್ನು ಆಯ್ಕೆ ಮಾಡಿದ್ದಾರೆ.

ಡಿಸೆಂಬರ್ 14 ರ ವೇಳೆಗೆ 1 ರಿಂದ 8 ನೇ ತರಗತಿಯ ಸರ್ಕಾರಿ ಶಾಲೆಗಳ 47.97 ಲಕ್ಷ ವಿದ್ಯಾರ್ಥಿಗಳ ಪೈಕಿ 38.37 ಲಕ್ಷ ವಿದ್ಯಾರ್ಥಿಗಳು ಮೊಟ್ಟೆಗೆ ಆದ್ಯತೆ ನೀಡಿದರೆ, 3.37 ಲಕ್ಷ ಮಕ್ಕಳು ಬಾಳೆಹಣ್ಣು ಮತ್ತು 2.27 ಲಕ್ಷ ಮಕ್ಕಳು ಚಿಕ್ಕಿಗೆ ಆದ್ಯತೆ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗಪಡಿದೆ. ಈ ಅವಧಿಯಲ್ಲಿ ಉಳಿದ ಮಕ್ಕಳು ಗೈರುಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ಜುಲೈ ವೇಳೆಗೆ ಮಕ್ಕಳ ಆಹಾರದ ಭಾಗವಾಗಿ ಮೊಟ್ಟೆಗಳನ್ನು ಸೇರಿಸಿದ ನಂತರ ಒಳ್ಳೆಯ ಫಲಿತಾಂಶಗಳನ್ನು ಕಂಡು ಬಂದಿದೆ ಎಂದು ಪ್ರಾಯೋಗಿಕ ಅಧ್ಯಯನಗಳು ತಿಳಿಸಿದೆ. ಇದರ ನಂತರ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು 1 ರಿಂದ 8 ನೇ ತರಗತಿಯ ಮಕ್ಕಳು ಬಿಸಿಯೂಟದ ಜೊತೆಗೆ ಪೂರಕ ಪೋಷಣೆ ಕಾರ್ಯಕ್ರಮದ ಅಡಿಯಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು ಎಂದು ಘೋಷಿಸಿತು.

ಈ ಪೂರಕ ಪೌಷ್ಟಿಕಾಂಶ ಆಹಾರವನ್ನು ಪ್ರಸ್ತುತ ಶೈಕ್ಷಣಿಕ ವರ್ಷ 2022- 23ರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷಕ್ಕೆ 46 ದಿನಗಳವರೆಗೆ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ..

ರಾಜ್ಯಾದ್ಯಂತ ಮೊಟ್ಟೆ ಆಯ್ಕೆ ಮಾಡಿದ 38.37 ಲಕ್ಷ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು (15.67 ಲಕ್ಷ) ವಿದ್ಯಾರ್ಥಿಗಳು ಬೆಳಗಾವಿ ವಿಭಾಗದವರಾಗಿದ್ದಾರೆ. ನಂತರದ ಸ್ಥಾನದಲ್ಲಿ ಬೆಂಗಳೂರು ವಿಭಾಗ (8.65 ಲಕ್ಷ), ಕಲಬುರ್ಗಿ ವಿಭಾಗ (8.33 ಲಕ್ಷ), ಮೈಸೂರು ವಿಭಾಗ (5.70 ಲಕ್ಷ) ಇದೆ.

ಸಂಡೇ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಅಪೌಷ್ಟಿಕತೆಯು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ವಿಸ್ತರಿಸಿದ್ದೇವೆ. ಆಹಾರವು ಚರ್ಚಾಸ್ಪದ ವಿಷಯವಾಗಿದೆ ಮತ್ತು ಪ್ರತಿಯೊಬ್ಬರೂ ಅದರ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಆದಾಗ್ಯೂ, ಪ್ರಾಯೋಗಿಕ ಅನುಷ್ಠಾನದ ನಂತರ ಕಲ್ಯಾಣ-ಕರ್ನಾಟಕ ಪ್ರದೇಶದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದ ನಂತರ, ಇತರ ಜಿಲ್ಲೆಗಳಲ್ಲಿಯೂ ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಬಿಸಿಯೂಟದಲ್ಲಿ ಮೊಟ್ಟೆಗಳನ್ನು ಸೇರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 2021 ಮತ್ತು ಮಾರ್ಚ್ 2022 ರ ನಡುವೆ, ರಾಜ್ಯ ಸರ್ಕಾರವು ಬೀದರ್, ಕಲ್ಬುರ್ಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ-ಕರ್ನಾಟಕ ಪ್ರದೇಶದಲ್ಲಿ ಮಧ್ಯಾಹ್ನದ ಊಟ ಯೋಜನೆಯಡಿ ಮೊಟ್ಟೆಗಳನ್ನು ನೀಡಿ ಪ್ರಾಯೋಗಿಕ ಅಧ್ಯಯನವನ್ನು ನಡೆಸಿತು.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...