Homeಕರ್ನಾಟಕಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗ

- Advertisement -
- Advertisement -

ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆಯ ಭಾಗವಾಗಿ ನೀಡುವ ಮೊಟ್ಟೆ ವಿತರಣೆ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದವೇರ್ಪಟ್ಟಿತ್ತು. ರಾಜಕೀಯ ಮತ್ತು ಧಾರ್ಮಿಕ ಮುಖಂಡರಿಂದ ತೀವ್ರ ವಿವಾದಕ್ಕೊಳಗಾಗಿದ್ದ ವಿಚಾರವನ್ನು ರಾಜ್ಯದ ಮಕ್ಕಳೆ ಸ್ಪಷ್ಟಪಡಿಸಿದ್ದು, ಮಧ್ಯಾಹ್ನದ ಊಟದ ವೇಳೆಯಲ್ಲಿ ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದಾರೆ. 80% ದಷ್ಟು ಶಾಲಾ ಮಕ್ಕಳು ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದು, ಉಳಿದ ಮಕ್ಕಳು ಬಾಳೆಹಣ್ಣುಗಳು ಮತ್ತು ಚಿಕ್ಕಿಗಳನ್ನು ಆಯ್ಕೆ ಮಾಡಿದ್ದಾರೆ.

ಡಿಸೆಂಬರ್ 14 ರ ವೇಳೆಗೆ 1 ರಿಂದ 8 ನೇ ತರಗತಿಯ ಸರ್ಕಾರಿ ಶಾಲೆಗಳ 47.97 ಲಕ್ಷ ವಿದ್ಯಾರ್ಥಿಗಳ ಪೈಕಿ 38.37 ಲಕ್ಷ ವಿದ್ಯಾರ್ಥಿಗಳು ಮೊಟ್ಟೆಗೆ ಆದ್ಯತೆ ನೀಡಿದರೆ, 3.37 ಲಕ್ಷ ಮಕ್ಕಳು ಬಾಳೆಹಣ್ಣು ಮತ್ತು 2.27 ಲಕ್ಷ ಮಕ್ಕಳು ಚಿಕ್ಕಿಗೆ ಆದ್ಯತೆ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗಪಡಿದೆ. ಈ ಅವಧಿಯಲ್ಲಿ ಉಳಿದ ಮಕ್ಕಳು ಗೈರುಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ಜುಲೈ ವೇಳೆಗೆ ಮಕ್ಕಳ ಆಹಾರದ ಭಾಗವಾಗಿ ಮೊಟ್ಟೆಗಳನ್ನು ಸೇರಿಸಿದ ನಂತರ ಒಳ್ಳೆಯ ಫಲಿತಾಂಶಗಳನ್ನು ಕಂಡು ಬಂದಿದೆ ಎಂದು ಪ್ರಾಯೋಗಿಕ ಅಧ್ಯಯನಗಳು ತಿಳಿಸಿದೆ. ಇದರ ನಂತರ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು 1 ರಿಂದ 8 ನೇ ತರಗತಿಯ ಮಕ್ಕಳು ಬಿಸಿಯೂಟದ ಜೊತೆಗೆ ಪೂರಕ ಪೋಷಣೆ ಕಾರ್ಯಕ್ರಮದ ಅಡಿಯಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು ಎಂದು ಘೋಷಿಸಿತು.

ಈ ಪೂರಕ ಪೌಷ್ಟಿಕಾಂಶ ಆಹಾರವನ್ನು ಪ್ರಸ್ತುತ ಶೈಕ್ಷಣಿಕ ವರ್ಷ 2022- 23ರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷಕ್ಕೆ 46 ದಿನಗಳವರೆಗೆ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ..

ರಾಜ್ಯಾದ್ಯಂತ ಮೊಟ್ಟೆ ಆಯ್ಕೆ ಮಾಡಿದ 38.37 ಲಕ್ಷ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು (15.67 ಲಕ್ಷ) ವಿದ್ಯಾರ್ಥಿಗಳು ಬೆಳಗಾವಿ ವಿಭಾಗದವರಾಗಿದ್ದಾರೆ. ನಂತರದ ಸ್ಥಾನದಲ್ಲಿ ಬೆಂಗಳೂರು ವಿಭಾಗ (8.65 ಲಕ್ಷ), ಕಲಬುರ್ಗಿ ವಿಭಾಗ (8.33 ಲಕ್ಷ), ಮೈಸೂರು ವಿಭಾಗ (5.70 ಲಕ್ಷ) ಇದೆ.

ಸಂಡೇ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಅಪೌಷ್ಟಿಕತೆಯು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ವಿಸ್ತರಿಸಿದ್ದೇವೆ. ಆಹಾರವು ಚರ್ಚಾಸ್ಪದ ವಿಷಯವಾಗಿದೆ ಮತ್ತು ಪ್ರತಿಯೊಬ್ಬರೂ ಅದರ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಆದಾಗ್ಯೂ, ಪ್ರಾಯೋಗಿಕ ಅನುಷ್ಠಾನದ ನಂತರ ಕಲ್ಯಾಣ-ಕರ್ನಾಟಕ ಪ್ರದೇಶದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದ ನಂತರ, ಇತರ ಜಿಲ್ಲೆಗಳಲ್ಲಿಯೂ ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಬಿಸಿಯೂಟದಲ್ಲಿ ಮೊಟ್ಟೆಗಳನ್ನು ಸೇರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 2021 ಮತ್ತು ಮಾರ್ಚ್ 2022 ರ ನಡುವೆ, ರಾಜ್ಯ ಸರ್ಕಾರವು ಬೀದರ್, ಕಲ್ಬುರ್ಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ-ಕರ್ನಾಟಕ ಪ್ರದೇಶದಲ್ಲಿ ಮಧ್ಯಾಹ್ನದ ಊಟ ಯೋಜನೆಯಡಿ ಮೊಟ್ಟೆಗಳನ್ನು ನೀಡಿ ಪ್ರಾಯೋಗಿಕ ಅಧ್ಯಯನವನ್ನು ನಡೆಸಿತು.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...