Homeಕರ್ನಾಟಕಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗ

- Advertisement -
- Advertisement -

ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆಯ ಭಾಗವಾಗಿ ನೀಡುವ ಮೊಟ್ಟೆ ವಿತರಣೆ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದವೇರ್ಪಟ್ಟಿತ್ತು. ರಾಜಕೀಯ ಮತ್ತು ಧಾರ್ಮಿಕ ಮುಖಂಡರಿಂದ ತೀವ್ರ ವಿವಾದಕ್ಕೊಳಗಾಗಿದ್ದ ವಿಚಾರವನ್ನು ರಾಜ್ಯದ ಮಕ್ಕಳೆ ಸ್ಪಷ್ಟಪಡಿಸಿದ್ದು, ಮಧ್ಯಾಹ್ನದ ಊಟದ ವೇಳೆಯಲ್ಲಿ ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದಾರೆ. 80% ದಷ್ಟು ಶಾಲಾ ಮಕ್ಕಳು ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದು, ಉಳಿದ ಮಕ್ಕಳು ಬಾಳೆಹಣ್ಣುಗಳು ಮತ್ತು ಚಿಕ್ಕಿಗಳನ್ನು ಆಯ್ಕೆ ಮಾಡಿದ್ದಾರೆ.

ಡಿಸೆಂಬರ್ 14 ರ ವೇಳೆಗೆ 1 ರಿಂದ 8 ನೇ ತರಗತಿಯ ಸರ್ಕಾರಿ ಶಾಲೆಗಳ 47.97 ಲಕ್ಷ ವಿದ್ಯಾರ್ಥಿಗಳ ಪೈಕಿ 38.37 ಲಕ್ಷ ವಿದ್ಯಾರ್ಥಿಗಳು ಮೊಟ್ಟೆಗೆ ಆದ್ಯತೆ ನೀಡಿದರೆ, 3.37 ಲಕ್ಷ ಮಕ್ಕಳು ಬಾಳೆಹಣ್ಣು ಮತ್ತು 2.27 ಲಕ್ಷ ಮಕ್ಕಳು ಚಿಕ್ಕಿಗೆ ಆದ್ಯತೆ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗಪಡಿದೆ. ಈ ಅವಧಿಯಲ್ಲಿ ಉಳಿದ ಮಕ್ಕಳು ಗೈರುಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ಜುಲೈ ವೇಳೆಗೆ ಮಕ್ಕಳ ಆಹಾರದ ಭಾಗವಾಗಿ ಮೊಟ್ಟೆಗಳನ್ನು ಸೇರಿಸಿದ ನಂತರ ಒಳ್ಳೆಯ ಫಲಿತಾಂಶಗಳನ್ನು ಕಂಡು ಬಂದಿದೆ ಎಂದು ಪ್ರಾಯೋಗಿಕ ಅಧ್ಯಯನಗಳು ತಿಳಿಸಿದೆ. ಇದರ ನಂತರ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು 1 ರಿಂದ 8 ನೇ ತರಗತಿಯ ಮಕ್ಕಳು ಬಿಸಿಯೂಟದ ಜೊತೆಗೆ ಪೂರಕ ಪೋಷಣೆ ಕಾರ್ಯಕ್ರಮದ ಅಡಿಯಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು ಎಂದು ಘೋಷಿಸಿತು.

ಈ ಪೂರಕ ಪೌಷ್ಟಿಕಾಂಶ ಆಹಾರವನ್ನು ಪ್ರಸ್ತುತ ಶೈಕ್ಷಣಿಕ ವರ್ಷ 2022- 23ರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷಕ್ಕೆ 46 ದಿನಗಳವರೆಗೆ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ..

ರಾಜ್ಯಾದ್ಯಂತ ಮೊಟ್ಟೆ ಆಯ್ಕೆ ಮಾಡಿದ 38.37 ಲಕ್ಷ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು (15.67 ಲಕ್ಷ) ವಿದ್ಯಾರ್ಥಿಗಳು ಬೆಳಗಾವಿ ವಿಭಾಗದವರಾಗಿದ್ದಾರೆ. ನಂತರದ ಸ್ಥಾನದಲ್ಲಿ ಬೆಂಗಳೂರು ವಿಭಾಗ (8.65 ಲಕ್ಷ), ಕಲಬುರ್ಗಿ ವಿಭಾಗ (8.33 ಲಕ್ಷ), ಮೈಸೂರು ವಿಭಾಗ (5.70 ಲಕ್ಷ) ಇದೆ.

ಸಂಡೇ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಅಪೌಷ್ಟಿಕತೆಯು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ವಿಸ್ತರಿಸಿದ್ದೇವೆ. ಆಹಾರವು ಚರ್ಚಾಸ್ಪದ ವಿಷಯವಾಗಿದೆ ಮತ್ತು ಪ್ರತಿಯೊಬ್ಬರೂ ಅದರ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಆದಾಗ್ಯೂ, ಪ್ರಾಯೋಗಿಕ ಅನುಷ್ಠಾನದ ನಂತರ ಕಲ್ಯಾಣ-ಕರ್ನಾಟಕ ಪ್ರದೇಶದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದ ನಂತರ, ಇತರ ಜಿಲ್ಲೆಗಳಲ್ಲಿಯೂ ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಬಿಸಿಯೂಟದಲ್ಲಿ ಮೊಟ್ಟೆಗಳನ್ನು ಸೇರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 2021 ಮತ್ತು ಮಾರ್ಚ್ 2022 ರ ನಡುವೆ, ರಾಜ್ಯ ಸರ್ಕಾರವು ಬೀದರ್, ಕಲ್ಬುರ್ಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ-ಕರ್ನಾಟಕ ಪ್ರದೇಶದಲ್ಲಿ ಮಧ್ಯಾಹ್ನದ ಊಟ ಯೋಜನೆಯಡಿ ಮೊಟ್ಟೆಗಳನ್ನು ನೀಡಿ ಪ್ರಾಯೋಗಿಕ ಅಧ್ಯಯನವನ್ನು ನಡೆಸಿತು.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....