Homeಮುಖಪುಟ3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ...

3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ.. ಅಂದಿನಿಂದ ಊರಿಗೆ ಹೋಗಿಲ್ಲ ಅನ್ನುತ್ತಾರೆ ಸಂದೀಪ್ ಸಿಂಗ್..

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ 86 ದಿನಗಳಿಂದ ಹಗಲು ರಾತ್ರಿ ಎನ್ನದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ ದೆಹಲಿ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಹೇಳಲು ಬಹಳಷ್ಟು ವಿಷಯಗಳಿವೆ, ಆದರೆ ಸಮಯ ಕಡಿಮೆಯಿದೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ 84 ದಿನಗಳಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಅಂದಿನಿಂದ ಒಮ್ಮೆಯೂ ರಜೆ ತೆಗೆದುಕೊಂಡಿಲ್ಲ ಮಾತ್ರವಲ್ಲ ನಾನು ಊರಿಗೆ ಹೋಗಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...