Homeಮುಖಪುಟ3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ...

3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ.. ಅಂದಿನಿಂದ ಊರಿಗೆ ಹೋಗಿಲ್ಲ ಅನ್ನುತ್ತಾರೆ ಸಂದೀಪ್ ಸಿಂಗ್..

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ 86 ದಿನಗಳಿಂದ ಹಗಲು ರಾತ್ರಿ ಎನ್ನದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ ದೆಹಲಿ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಹೇಳಲು ಬಹಳಷ್ಟು ವಿಷಯಗಳಿವೆ, ಆದರೆ ಸಮಯ ಕಡಿಮೆಯಿದೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ 84 ದಿನಗಳಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಅಂದಿನಿಂದ ಒಮ್ಮೆಯೂ ರಜೆ ತೆಗೆದುಕೊಂಡಿಲ್ಲ ಮಾತ್ರವಲ್ಲ ನಾನು ಊರಿಗೆ ಹೋಗಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...