Homeಮುಖಪುಟ3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ...

3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ.. ಅಂದಿನಿಂದ ಊರಿಗೆ ಹೋಗಿಲ್ಲ ಅನ್ನುತ್ತಾರೆ ಸಂದೀಪ್ ಸಿಂಗ್..

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ 86 ದಿನಗಳಿಂದ ಹಗಲು ರಾತ್ರಿ ಎನ್ನದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ ದೆಹಲಿ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಹೇಳಲು ಬಹಳಷ್ಟು ವಿಷಯಗಳಿವೆ, ಆದರೆ ಸಮಯ ಕಡಿಮೆಯಿದೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ 84 ದಿನಗಳಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಅಂದಿನಿಂದ ಒಮ್ಮೆಯೂ ರಜೆ ತೆಗೆದುಕೊಂಡಿಲ್ಲ ಮಾತ್ರವಲ್ಲ ನಾನು ಊರಿಗೆ ಹೋಗಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...