Homeಮುಖಪುಟ3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ...

3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ.. ಅಂದಿನಿಂದ ಊರಿಗೆ ಹೋಗಿಲ್ಲ ಅನ್ನುತ್ತಾರೆ ಸಂದೀಪ್ ಸಿಂಗ್..

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ 86 ದಿನಗಳಿಂದ ಹಗಲು ರಾತ್ರಿ ಎನ್ನದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ ದೆಹಲಿ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಹೇಳಲು ಬಹಳಷ್ಟು ವಿಷಯಗಳಿವೆ, ಆದರೆ ಸಮಯ ಕಡಿಮೆಯಿದೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ 84 ದಿನಗಳಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಅಂದಿನಿಂದ ಒಮ್ಮೆಯೂ ರಜೆ ತೆಗೆದುಕೊಂಡಿಲ್ಲ ಮಾತ್ರವಲ್ಲ ನಾನು ಊರಿಗೆ ಹೋಗಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...