Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...