Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...