Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...