Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...