Homeಕರ್ನಾಟಕ'ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..'; ಅಮಿತ್ ಶಾ ಮುಂದೆ...

‘ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..’; ಅಮಿತ್ ಶಾ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟ ಸಿಎಂ

- Advertisement -
- Advertisement -

ಲೋಕಸಭಾ ಚುನಾವಣಾ ತಯಾರಿಗಾಗಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬರ ಪರಿಹಾರದ ಕುರಿತು ಸರಣಿ ಪ್ರಶ್ನೆಗಳನ್ನಿಟ್ಟಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಗೃಹ ಸಚಿವರಾದ ಅಮಿತ್ ಶಾ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ’ ಎಂದು ಹೇಳಿದ್ದಾರೆ.

‘ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್‌ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ ಯಾಕೆ’ ಎಂದಿದ್ದಾರೆ.

‘ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾರ್‌ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?
ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತ್‌ನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ’ ಎಂದು ಅವರು ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಗೃಹ ಸಚಿವ ಅಮಿತ್ ಶಹಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ. ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಉತ್ತರ ಕೊಡಿ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಯ ಆಧಾರದಲ್ಲಿ ಮತಕೇಳುವ ವಿಶ್ವಾಸ ನಿಮಗೆ ಇಲ್ಲ. ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಸಹೃದಯತೆಯೂ ನಿಮಗೆ ಇಲ್ಲ. ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಬಾರದೆಂಬ ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ. ನೀವು ನೀಡಿರುವ ಸಲಹೆಯಂತೆಯೇ ತಾವು ಗಲಭೆ ನಡೆಸುತ್ತಿರುವುದಾಗಿ ಮೈಸೂರಿನ ಮಾಜಿ ಸಂಸದನೊಬ್ಬ ಬಹಿರಂಗ ಹೇಳಿಕೆ ನೀಡಿದ್ದಾನೆ. ನೀವು ಹೋದಲ್ಲಿ ಬಂದಲ್ಲಿ ಗಲಭೆ ನಡೆದು ಶಾಂತಿ ಭಂಗವಾಗುತ್ತಿರುವುದಕ್ಕೆ ಇದೇ ಕಾರಣವೇ” ಎಂದು ಪ್ರಶ್ನಿಸಿದ್ದಾರೆ.

‘ಮಾನ್ಯ ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ. ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು. ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...