Homeಕರ್ನಾಟಕ'ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..'; ಅಮಿತ್ ಶಾ ಮುಂದೆ...

‘ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..’; ಅಮಿತ್ ಶಾ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟ ಸಿಎಂ

- Advertisement -
- Advertisement -

ಲೋಕಸಭಾ ಚುನಾವಣಾ ತಯಾರಿಗಾಗಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬರ ಪರಿಹಾರದ ಕುರಿತು ಸರಣಿ ಪ್ರಶ್ನೆಗಳನ್ನಿಟ್ಟಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಗೃಹ ಸಚಿವರಾದ ಅಮಿತ್ ಶಾ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ’ ಎಂದು ಹೇಳಿದ್ದಾರೆ.

‘ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್‌ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ ಯಾಕೆ’ ಎಂದಿದ್ದಾರೆ.

‘ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾರ್‌ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?
ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತ್‌ನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ’ ಎಂದು ಅವರು ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಗೃಹ ಸಚಿವ ಅಮಿತ್ ಶಹಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ. ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಉತ್ತರ ಕೊಡಿ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಯ ಆಧಾರದಲ್ಲಿ ಮತಕೇಳುವ ವಿಶ್ವಾಸ ನಿಮಗೆ ಇಲ್ಲ. ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಸಹೃದಯತೆಯೂ ನಿಮಗೆ ಇಲ್ಲ. ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಬಾರದೆಂಬ ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ. ನೀವು ನೀಡಿರುವ ಸಲಹೆಯಂತೆಯೇ ತಾವು ಗಲಭೆ ನಡೆಸುತ್ತಿರುವುದಾಗಿ ಮೈಸೂರಿನ ಮಾಜಿ ಸಂಸದನೊಬ್ಬ ಬಹಿರಂಗ ಹೇಳಿಕೆ ನೀಡಿದ್ದಾನೆ. ನೀವು ಹೋದಲ್ಲಿ ಬಂದಲ್ಲಿ ಗಲಭೆ ನಡೆದು ಶಾಂತಿ ಭಂಗವಾಗುತ್ತಿರುವುದಕ್ಕೆ ಇದೇ ಕಾರಣವೇ” ಎಂದು ಪ್ರಶ್ನಿಸಿದ್ದಾರೆ.

‘ಮಾನ್ಯ ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ. ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು. ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...