Homeಮುಖಪುಟಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

- Advertisement -
- Advertisement -

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ.

ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ವರದಿಗಳ ಪ್ರಕಾರ, ಇಂದೋರ್‌ನ ವೇಗವಾಗಿ ಬೆಳೆಯುತ್ತಿರುವ ಖಜರಾನಾ ಪ್ರದೇಶದ ಸುಮಾರು 3 ಲಕ್ಷ ಜನಸಂಖ್ಯೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲು 23 ಜೂನ್ 2020ರಂದು ಮಧ್ಯ ಪ್ರದೇಶ ಸರ್ಕಾರವು ಈ 100 ಬೆಡ್‌ಗಳ ಆಸ್ಪತ್ರೆಯನ್ನು ಮಂಜೂರು ಮಾಡಿತ್ತು. 

ಈ ಆಸ್ಪತ್ರೆಗೆ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ದಾದಿಯರು (ನರ್ಸ್‌ಗಳು), ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಫಾರ್ಮಾಸಿಸ್ಟ್‌ಗಳು ಸೇರಿದಂತೆ ಒಟ್ಟು 87 ಸರ್ಕಾರಿ ಹುದ್ದೆಗಳನ್ನು ಅನುಮೋದಿಸಲಾಗಿದೆ.

ಕಾಗದದ ಮೇಲಿನ ಆಸ್ಪತ್ರೆ

ಆಶ್ಚರ್ಯಕರ ಸಂಗತಿಯೆಂದರೆ, ಆಸ್ಪತ್ರೆ ಘೋಷಣೆಯಾಗಿ 6 ವರ್ಷ ಕಳೆದರೂ, ಕಟ್ಟಡ ನಿರ್ಮಾಣಕ್ಕೆ ಇಂದಿಗೂ ಭೂಮಿ ಮಂಜೂರಾಗಿಲ್ಲ ಮತ್ತು ಒಂದು ಇಟ್ಟಿಗೆಯನ್ನೂ ಇಟ್ಟಿಲ್ಲ.

ಭೌತಿಕವಾಗಿ ಆಸ್ಪತ್ರೆಯೇ ಇಲ್ಲದಿದ್ದರೂ, ಸರ್ಕಾರಿ ಪೋರ್ಟಲ್‌ನಲ್ಲಿ ಈ ಆಸ್ಪತ್ರೆಯ ಹೆಸರಿನಲ್ಲಿ ಸಿಬ್ಬಂದಿಗಳ ನೇಮಕಾತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿವೆ. ಇತ್ತೀಚೆಗೆ ಜೂನ್ 2026ರಲ್ಲೂ ಒಬ್ಬ ಲ್ಯಾಬ್ ಟೆಕ್ನಿಷಿಯನ್‌ನನ್ನು ಇದೇ ಆಸ್ಪತ್ರೆಗೆ ನೇಮಕ ಮಾಡಲಾಗಿದೆ.

ಸಿಬ್ಬಂದಿ ಎಲ್ಲಿದ್ದಾರೆ?

ವರದಿಗಳ ಪ್ರಕಾರ, ಈ ಆಸ್ಪತ್ರೆಯ ಹೆಸರಿನಲ್ಲಿ ವೇತನ ಪಡೆಯುತ್ತಿರುವ 87 ಸಿಬ್ಬಂದಿಯನ್ನು ಇಂದೋರ್‌ನ ಪಿಸಿ ಸೇಠಿ ಆಸ್ಪತ್ರೆ, ಹುಕುಂಚಂದ್ ಆಸ್ಪತ್ರೆ ಮತ್ತು ಸಂಜೀವಿನಿ ಕ್ಲಿನಿಕ್‌ಗಳಂತಹ ಇತರ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ.

ಸರ್ಕಾರದ ಸಮರ್ಥನೆ ಮತ್ತು ವಿರೋಧ ಪಕ್ಷಗಳ ಆಕ್ರೋಶ

ಆಸ್ಪತ್ರೆ ನಿರ್ಮಾಣಕ್ಕೆ ನಗರ ಪ್ರದೇಶದಲ್ಲಿ ಸೂಕ್ತ ಸರ್ಕಾರಿ ಜಾಗ ಸಿಗದ ಕಾರಣ ಯೋಜನೆ ವಿಳಂಬವಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ ಸಮರ್ಥಿಸಿಕೊಂಡಿದ್ದಾರೆ. ಜಾಗದ ವಿವಾದ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಅಸ್ತಿತ್ವದಲ್ಲೇ ಇಲ್ಲದ ಆಸ್ಪತ್ರೆಗೆ ಹುದ್ದೆ ಸೃಷ್ಟಿಸಿ, ವರ್ಗಾವಣೆ ದಂಧೆ ನಡೆಸುತ್ತಿರುವುದು ವ್ಯವಸ್ಥೆಯ ದೊಡ್ಡ ಹಗರಣ ಮತ್ತು ಆಡಳಿತಾತ್ಮಕ ವೈಫಲ್ಯ ಎಂದು ಕಾಂಗ್ರೆಸ್ ಮುಖಂಡರು ದೂರಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.

ಅಸ್ತಿತ್ವದಲ್ಲೇ ಇಲ್ಲದ ಆಸ್ಪತ್ರೆಗಾಗಿ ಹಲವು ವರ್ಷಗಳಿಂದ ನೇಮಕಾತಿ ಮತ್ತು ವರ್ಗಾವಣೆಗಳನ್ನು ಹೇಗೆ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಸಜ್ಜನ್ ಸಿಂಗ್ ವರ್ಮಾ ಪ್ರಶ್ನಿಸಿದ್ದಾರೆ.

“ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುತ್ತೇವೆ. ಸರ್ಕಾರದಿಂದ ಸಮಗ್ರ ಉತ್ತರಗಳನ್ನು ಕೋರುತ್ತೇವೆ. ಅಲ್ಲದೆ, ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ವರ್ಮಾ ಆಗ್ರಹಿಸಿದ್ದಾರೆ.

ಉಪಮುಖ್ಯಮಂತ್ರಿ ವಿವರಣೆ

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಯೋಜನೆಯ ಹಿನ್ನೆಲೆಯನ್ನು ವಿವರಿಸಿದ್ದಾರೆ.

“ಆರಂಭದಲ್ಲಿ ಈ ಪ್ರದೇಶದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿತ್ತು. ಬಳಿಕ ಅದನ್ನು 50 ಹಾಸಿಗೆಗಳ ನಾಗರಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಯಿತು. ನಂತರ 100 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಯಿತು. ಆದರೆ, ಸೂಕ್ತ ಸರ್ಕಾರಿ ಭೂಮಿ ಲಭ್ಯವಾಗದ ಕಾರಣ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲು ಸಾಧ್ಯವಾಗಿಲ್ಲ. ಆಸ್ಪತ್ರೆ ಕಟ್ಟಡ ನಿರ್ಮಾಣವಾಗುವವರೆಗೆ ಮಂಜೂರಾದ ಸಿಬ್ಬಂದಿಯನ್ನು ಇತರ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಿಗೆ ನಿಯೋಜಿಸಲಾಗಿದೆ. ಭೂಮಿಯ ಹುಡುಕಾಟ ಪ್ರಕ್ರಿಯೆ ಇನ್ನೂ ಮುಂದುವರಿದಿದೆ” ಎಂದು ಅವರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...