Homeಚಳವಳಿಆರೇ ಅರಣ್ಯದಲ್ಲಿ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ

ಆರೇ ಅರಣ್ಯದಲ್ಲಿ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಮುಂಬೈನ ಆರೇ ಅರಣ್ಯ ಪ್ರದೇಶದಲ್ಲಿ ಮೆಟ್ರೊ ಕಾರ್‌ ಶೆಡ್‌ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆದೇಶಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈ ಮೆಟ್ರೋ ಕಾಮಗಾರಿ ಎಂದಿನಂತೆ ಮುಂದುವರೆಯುತ್ತದೆ ಆದರೆ ಕಾರ್ ಶೆಡ್ ನಿರ್ಮಾಣವನ್ನು ಸಂಬಂಧಪಟ್ಟ ಇಲಾಖೆಯಿಂದ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಆರೇ ಅರಣ್ಯವು ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿದೆ ಮತ್ತು ಐದು ಲಕ್ಷ ಮರಗಳನ್ನು ಹೊಂದಿದೆ. ಈ ಪ್ರದೇಶದಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಿಸಲು ಸುಮಾರು 2100 ಮರಗಳನ್ನು ಎಂಎಂಆರ್‌ಸಿಎಲ್ ಕತ್ತರಿಸಿತ್ತು. ನಂತರ ಯಾವುದೇ ಮರಗಳನ್ನು ಕಡಿಯಬಾರದೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಕಾರ್ ಶೆಡ್ ಕಾಮಗಾರಿಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರಲಿಲ್ಲ.

ಇದನ್ನೂ ಓದಿ: ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

“ಮುಂದಿನ ಸೂಚನೆ ಬರುವವರೆಗೂ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲಾಗುವುದಿಲ್ಲ” ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಆದರೆ ಮಾಜಿ ಸಿಎಂ ಫಡ್ನವಿಸ್‌ ಉದ್ಧವ್‌ ಠಾಕ್ರೆಯವರ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಇದರ ದುಷ್ಪರಿಣಾಮವನ್ನು ಎದುರಿಸಬೇಕಾಗುವುದು ಸಾಮಾನ್ಯ ಮುಂಬೈ  ನಿವಾಸಿ ಎಂದು ಅವರು ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆಯವರ ಈ ನಿರ್ಧಾರವನ್ನು ಬಹಳಷ್ಟು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದಾರೆ. ಗುರುವಾರ ಉದ್ಧವ್‌ ಠಾಕ್ರೆಯವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿಯೂ ಸಹ ಬಹಳಷ್ಟು ಆರೇ ಕಾರ್ಯಕರ್ತರು ಭಾಗವಹಿಸಿದ್ದರು. ಜೊತೆಗೆ ಸೇವ್‌ ಆರೆ ಎಂಬ ನಾಮಫಲಕ ಮತ್ತು ಬ್ಯಾನರ್‌ ಪ್ರದರ್ಶಿಸುವ ಮೂಲಕ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಯನ್ನು ನೆನಪಿಸುವ ಕೆಲಸ ಮಾಡಿದ್ದರು.

ಅವರು ಸಿಎಂ ಆಗಿ ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ಆರೆ ಫಾರೆಸ್ಟ್‌ನಲ್ಲಿ ಮೆಟ್ರೋ ಕಾರ್ ಶೆಡ್ ಕೆಲಸವನ್ನು ನಿಲ್ಲಿಸುವುದು.

ಎಲ್ಲಾ ಇತರ ಮೆಟ್ರೊ ಕಾರ್ಯಗಳು ಮುಂದುವರಿಯುತ್ತವೆ, ಕೇವಲ ಆರೆ ಫಾರೆಸ್ಟ್‌ನಲ್ಲಿ ಅಲ್ಲ, ಅಮೂಲ್ಯ ಮರಗಳ ವೆಚ್ಚದಲ್ಲಿ ಅಲ್ಲ. ಧನ್ಯವಾದಗಳು ಉದ್ಧವ್ ಠಾಕ್ರೆ! ಎಂದು ಖ್ಯಾತ ರಾಜಕೀಯ ವಿಶ್ಲೇಷಕ ಧೃವ್‌ ರಾಠೀ ಅಭಿನಂದನೆ ಸಲ್ಲಿಸಿದ್ದಾರೆ.

“ನಾನು ಸಿಎಂ ಆಗಿದ್ದೇನೆ ಎಂದು ನನಗೆ ಇನ್ನೂ ಅನಿಸುತ್ತಿಲ್ಲ. ಆ ಭಾವನೆ ಬರಲು ಸಮಯ ತೆಗೆದುಕೊಳ್ಳುತ್ತದೆ. ನಾನು ಇನ್ನೂ ವಿಧಾನಸಭಾ ಭವನವನ್ನು ನೋಡಿಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸಿಎಂ ಹುದ್ದೆ ಅನಿರೀಕ್ಷಿತವಾಗಿದೆ. “ನಾನು ಅನಿರೀಕ್ಷಿತವಾಗಿ ಸಿಎಂ ಆಗಿದ್ದೇನೆ, ಆದರೆ ಈ ಜವಾಬ್ದಾರಿಯಿಂದ ಓಡಿಹೋಗಲು ನಾನು ಬಯಸುವುದಿಲ್ಲ” ಎಂದು ಠಾಕ್ರೆ ಹೇಳಿದರು.

ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸೇರಿ ಹೊಸದಾಗಿ ರಚಿಸಿದ ಮಹಾರಾಷ್ಟ್ರ ವಿಕಾಸ್ ಅಘಾಡಿ ಹೆಸರಿನ ರಾಜ್ಯ ಸರ್ಕಾರವನ್ನು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮುನ್ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...