Homeಚಳವಳಿಆರೇ ಅರಣ್ಯದಲ್ಲಿ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ

ಆರೇ ಅರಣ್ಯದಲ್ಲಿ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಮುಂಬೈನ ಆರೇ ಅರಣ್ಯ ಪ್ರದೇಶದಲ್ಲಿ ಮೆಟ್ರೊ ಕಾರ್‌ ಶೆಡ್‌ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆದೇಶಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈ ಮೆಟ್ರೋ ಕಾಮಗಾರಿ ಎಂದಿನಂತೆ ಮುಂದುವರೆಯುತ್ತದೆ ಆದರೆ ಕಾರ್ ಶೆಡ್ ನಿರ್ಮಾಣವನ್ನು ಸಂಬಂಧಪಟ್ಟ ಇಲಾಖೆಯಿಂದ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಆರೇ ಅರಣ್ಯವು ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿದೆ ಮತ್ತು ಐದು ಲಕ್ಷ ಮರಗಳನ್ನು ಹೊಂದಿದೆ. ಈ ಪ್ರದೇಶದಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಿಸಲು ಸುಮಾರು 2100 ಮರಗಳನ್ನು ಎಂಎಂಆರ್‌ಸಿಎಲ್ ಕತ್ತರಿಸಿತ್ತು. ನಂತರ ಯಾವುದೇ ಮರಗಳನ್ನು ಕಡಿಯಬಾರದೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಕಾರ್ ಶೆಡ್ ಕಾಮಗಾರಿಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರಲಿಲ್ಲ.

ಇದನ್ನೂ ಓದಿ: ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

“ಮುಂದಿನ ಸೂಚನೆ ಬರುವವರೆಗೂ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲಾಗುವುದಿಲ್ಲ” ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಆದರೆ ಮಾಜಿ ಸಿಎಂ ಫಡ್ನವಿಸ್‌ ಉದ್ಧವ್‌ ಠಾಕ್ರೆಯವರ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಇದರ ದುಷ್ಪರಿಣಾಮವನ್ನು ಎದುರಿಸಬೇಕಾಗುವುದು ಸಾಮಾನ್ಯ ಮುಂಬೈ  ನಿವಾಸಿ ಎಂದು ಅವರು ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆಯವರ ಈ ನಿರ್ಧಾರವನ್ನು ಬಹಳಷ್ಟು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದಾರೆ. ಗುರುವಾರ ಉದ್ಧವ್‌ ಠಾಕ್ರೆಯವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿಯೂ ಸಹ ಬಹಳಷ್ಟು ಆರೇ ಕಾರ್ಯಕರ್ತರು ಭಾಗವಹಿಸಿದ್ದರು. ಜೊತೆಗೆ ಸೇವ್‌ ಆರೆ ಎಂಬ ನಾಮಫಲಕ ಮತ್ತು ಬ್ಯಾನರ್‌ ಪ್ರದರ್ಶಿಸುವ ಮೂಲಕ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಯನ್ನು ನೆನಪಿಸುವ ಕೆಲಸ ಮಾಡಿದ್ದರು.

ಅವರು ಸಿಎಂ ಆಗಿ ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ಆರೆ ಫಾರೆಸ್ಟ್‌ನಲ್ಲಿ ಮೆಟ್ರೋ ಕಾರ್ ಶೆಡ್ ಕೆಲಸವನ್ನು ನಿಲ್ಲಿಸುವುದು.

ಎಲ್ಲಾ ಇತರ ಮೆಟ್ರೊ ಕಾರ್ಯಗಳು ಮುಂದುವರಿಯುತ್ತವೆ, ಕೇವಲ ಆರೆ ಫಾರೆಸ್ಟ್‌ನಲ್ಲಿ ಅಲ್ಲ, ಅಮೂಲ್ಯ ಮರಗಳ ವೆಚ್ಚದಲ್ಲಿ ಅಲ್ಲ. ಧನ್ಯವಾದಗಳು ಉದ್ಧವ್ ಠಾಕ್ರೆ! ಎಂದು ಖ್ಯಾತ ರಾಜಕೀಯ ವಿಶ್ಲೇಷಕ ಧೃವ್‌ ರಾಠೀ ಅಭಿನಂದನೆ ಸಲ್ಲಿಸಿದ್ದಾರೆ.

“ನಾನು ಸಿಎಂ ಆಗಿದ್ದೇನೆ ಎಂದು ನನಗೆ ಇನ್ನೂ ಅನಿಸುತ್ತಿಲ್ಲ. ಆ ಭಾವನೆ ಬರಲು ಸಮಯ ತೆಗೆದುಕೊಳ್ಳುತ್ತದೆ. ನಾನು ಇನ್ನೂ ವಿಧಾನಸಭಾ ಭವನವನ್ನು ನೋಡಿಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸಿಎಂ ಹುದ್ದೆ ಅನಿರೀಕ್ಷಿತವಾಗಿದೆ. “ನಾನು ಅನಿರೀಕ್ಷಿತವಾಗಿ ಸಿಎಂ ಆಗಿದ್ದೇನೆ, ಆದರೆ ಈ ಜವಾಬ್ದಾರಿಯಿಂದ ಓಡಿಹೋಗಲು ನಾನು ಬಯಸುವುದಿಲ್ಲ” ಎಂದು ಠಾಕ್ರೆ ಹೇಳಿದರು.

ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸೇರಿ ಹೊಸದಾಗಿ ರಚಿಸಿದ ಮಹಾರಾಷ್ಟ್ರ ವಿಕಾಸ್ ಅಘಾಡಿ ಹೆಸರಿನ ರಾಜ್ಯ ಸರ್ಕಾರವನ್ನು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮುನ್ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...