Homeಕರ್ನಾಟಕದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ...

ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಶ್ರೀಧರ್‌ರವರು ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾರೆ.

- Advertisement -
- Advertisement -

ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು? ಹೀಗಾಗಿಯೇ ನಾವು ಸರ್ವೀಸ್ ರಸ್ತೆ ಪೂರ್ಣ ಮಾಡಿಲ್ಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿ.ಟಿ ಶ್ರೀಧರ್ ತಿಳಿಸಿದ್ದಾರೆ.

ರಾಮನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ನಾನು ಯಾವತ್ತು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯನ್ನು ದಶಪಥ ರಸ್ತೆ ಎಂದು ಹೇಳಿಲ್ಲ. ನೀವು ಮಾಧ್ಯಮಗಳು ಹಾಗೆ ಬರೆದರೆ ನಾನೇನು ಮಾಡಲಿ? ಕೇಂದ್ರ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಆರು ಪಥ ಎಂದೇ ಅನುಮೋದನೆಗೊಂಡಿದೆ” ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಯವರು ಸೇರಿದಂತೆ ಎಲ್ಲಾ ಬಿಜೆಪಿಗರು ಇದು ದಶಪಥ ರಸ್ತೆ ಎಂತಲೇ ಪ್ರಚಾರ ಮಾಡಿದ್ದರು. ಆದರೆ ಅಲ್ಲಿರುವ ಕೇವಲ ಆರು ಪಥದ ರಸ್ತೆ. ಇನ್ನ ಸರ್ವೀಸ್ ರಸ್ತೆ ಸಹ ಪೂರ್ಣ ಇಲ್ಲ ಎಂಬ ಉತ್ತರವನ್ನು ಇದೀಗ ಯೋಜನಾ ನಿರ್ದೇಶಕರೆ ನೀಡಿದ್ದಾರೆ.

ರೈಲ್ವೆ ಟ್ಯ್ರಾಕ್ ಬಳಿ ಏಕೆ ಸರ್ವೀಸ್ ರಸ್ತೆ ಕಂಟಿನ್ಯೂಟಿ ಕೊಟ್ಟಿಲ್ಲ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ದೊಡ್ಡ ಸೇತುವೆಗಳು ಮತ್ತು ರೈಲ್ವೆ ಟ್ರ್ಯಾಕ್‌ಗಳಿಗೆ ಕಂಟಿನ್ಯೂಟಿ ಕೊಡಬಾರದೆಂದು ಕಾನೂನಿನಲ್ಲಿದೆ. ಹಾಗೆ ಕೊಟ್ಟಲ್ಲಿ ಎಲ್ಲರೂ ಸರ್ವೀಸ್ ರಸ್ತೆಯಲ್ಲಿ ಹೋದರೆ ಇಲ್ಲಿ ಟೋಲ್ ಕಟ್ಟುವವರು ಯಾರು? ಇಲ್ಲಿ ಸರ್ಕಾರಿ ಹಣದಲ್ಲಿ ಕಟ್ಟಿದ್ದೇವೆ. ಕೆಲವೆಡೆ ಖಾಸಗೀ ಸರ್ಕಾರಿ ಸಹಭಾಗಿತ್ವದಲ್ಲಿ ರಸ್ತೆ ಕಟ್ಟಿದಾಗ ಲಾಭ ಬರುವುದನ್ನು ನಾವು ನೋಡಬೇಕಲ್ಲವೆ?” ಎಂದರು.

ಈ ಹೊಸ ರಸ್ತೆಯಲ್ಲಿ ಅಪಘಾತಗಳಾಗುತ್ತಿವೆ. ಹಿಂದೆ ಮಳೆ ನೀರು ತುಂಬಿಕೊಂಡಿತ್ತು. ಕಳ್ಳತನ ನಡೆದಾಗ ಸಹಾಯ ಕೇಳಿದರೂ ಹೆದ್ದಾರಿ ಪ್ರಾಧಿಕಾರ ನೆರವಿಗೆ ಬಂದಿಲ್ಲ ಎಂಬ ಪ್ರಶ್ನೆಗೆ “180 ಮಿ.ಮೀ ಮಳೆಯಾದರೆ ನಾನು ಹೊಣೆಯೇ? ಇನ್ನು ಪ್ರತಿಯೊಬ್ಬ ಪ್ರಯಾಣಿಕರಿಗೂ ಅವನದೇ ಆದ ಜವಾಬ್ದಾರಿ ಇರಬೇಕು. ಅವರವರ ಜವಾಬ್ದಾರಿ ಅರಿತುಕೊಂಡು ಹೋಗಬೇಕೆ ಹೊರತು ಯಾರೂ ಸಹಾಯಕ್ಕೆ ಬರುವುದಿಲ್ಲ” ಎಂದರು.

ಕಳಪೆ ಕಾಮಗಾರಿಯ ಬಗ್ಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ, ಓರಿಸ್ಸಾದ ಅಧಿಕಾರಿಗಳು ಬಂದು ಪರೀಕ್ಷಿಸಿ ಉತ್ತಮವಾಗಿದೆ ಎಂದು ಪ್ರಮಾಣ ಪತ್ರ ನೀಡಿದ್ದಾರೆ. ನೀವು ಒಂದು ಮನೆ ಕಟ್ಟುತ್ತೀರಿ ಎಂದಿಟ್ಟುಕೊಳ್ಳಿ. ಅದು ಶೇ.ನೂರರಷ್ಟು ಕ್ವಾಲಿಟಿ ಇರುತ್ತದೆಯೇ? ಒಂದೇ ದಿನಕ್ಕೆ ಸರಿ ಹೋಗುತ್ತದೆಯೇ ಎಂಬ ಹಾರಿಕೆಯ ಉತ್ತರ ನೀಡಿದರು.

ಯಾಕಿಷ್ಟು ಬೇಜವಾಬ್ದಾರಿ ಉತ್ತರ ನೀಡುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಅವರು ಸುದ್ದಿಗೋಷ್ಠಿಯಿಂದಲೇ ಹೊರನಡೆದರು.

ಇದನ್ನೂ ಓದಿ; 2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...