Homeಕರ್ನಾಟಕದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ...

ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಶ್ರೀಧರ್‌ರವರು ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾರೆ.

- Advertisement -
- Advertisement -

ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು? ಹೀಗಾಗಿಯೇ ನಾವು ಸರ್ವೀಸ್ ರಸ್ತೆ ಪೂರ್ಣ ಮಾಡಿಲ್ಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿ.ಟಿ ಶ್ರೀಧರ್ ತಿಳಿಸಿದ್ದಾರೆ.

ರಾಮನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ನಾನು ಯಾವತ್ತು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯನ್ನು ದಶಪಥ ರಸ್ತೆ ಎಂದು ಹೇಳಿಲ್ಲ. ನೀವು ಮಾಧ್ಯಮಗಳು ಹಾಗೆ ಬರೆದರೆ ನಾನೇನು ಮಾಡಲಿ? ಕೇಂದ್ರ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಆರು ಪಥ ಎಂದೇ ಅನುಮೋದನೆಗೊಂಡಿದೆ” ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಯವರು ಸೇರಿದಂತೆ ಎಲ್ಲಾ ಬಿಜೆಪಿಗರು ಇದು ದಶಪಥ ರಸ್ತೆ ಎಂತಲೇ ಪ್ರಚಾರ ಮಾಡಿದ್ದರು. ಆದರೆ ಅಲ್ಲಿರುವ ಕೇವಲ ಆರು ಪಥದ ರಸ್ತೆ. ಇನ್ನ ಸರ್ವೀಸ್ ರಸ್ತೆ ಸಹ ಪೂರ್ಣ ಇಲ್ಲ ಎಂಬ ಉತ್ತರವನ್ನು ಇದೀಗ ಯೋಜನಾ ನಿರ್ದೇಶಕರೆ ನೀಡಿದ್ದಾರೆ.

ರೈಲ್ವೆ ಟ್ಯ್ರಾಕ್ ಬಳಿ ಏಕೆ ಸರ್ವೀಸ್ ರಸ್ತೆ ಕಂಟಿನ್ಯೂಟಿ ಕೊಟ್ಟಿಲ್ಲ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ದೊಡ್ಡ ಸೇತುವೆಗಳು ಮತ್ತು ರೈಲ್ವೆ ಟ್ರ್ಯಾಕ್‌ಗಳಿಗೆ ಕಂಟಿನ್ಯೂಟಿ ಕೊಡಬಾರದೆಂದು ಕಾನೂನಿನಲ್ಲಿದೆ. ಹಾಗೆ ಕೊಟ್ಟಲ್ಲಿ ಎಲ್ಲರೂ ಸರ್ವೀಸ್ ರಸ್ತೆಯಲ್ಲಿ ಹೋದರೆ ಇಲ್ಲಿ ಟೋಲ್ ಕಟ್ಟುವವರು ಯಾರು? ಇಲ್ಲಿ ಸರ್ಕಾರಿ ಹಣದಲ್ಲಿ ಕಟ್ಟಿದ್ದೇವೆ. ಕೆಲವೆಡೆ ಖಾಸಗೀ ಸರ್ಕಾರಿ ಸಹಭಾಗಿತ್ವದಲ್ಲಿ ರಸ್ತೆ ಕಟ್ಟಿದಾಗ ಲಾಭ ಬರುವುದನ್ನು ನಾವು ನೋಡಬೇಕಲ್ಲವೆ?” ಎಂದರು.

ಈ ಹೊಸ ರಸ್ತೆಯಲ್ಲಿ ಅಪಘಾತಗಳಾಗುತ್ತಿವೆ. ಹಿಂದೆ ಮಳೆ ನೀರು ತುಂಬಿಕೊಂಡಿತ್ತು. ಕಳ್ಳತನ ನಡೆದಾಗ ಸಹಾಯ ಕೇಳಿದರೂ ಹೆದ್ದಾರಿ ಪ್ರಾಧಿಕಾರ ನೆರವಿಗೆ ಬಂದಿಲ್ಲ ಎಂಬ ಪ್ರಶ್ನೆಗೆ “180 ಮಿ.ಮೀ ಮಳೆಯಾದರೆ ನಾನು ಹೊಣೆಯೇ? ಇನ್ನು ಪ್ರತಿಯೊಬ್ಬ ಪ್ರಯಾಣಿಕರಿಗೂ ಅವನದೇ ಆದ ಜವಾಬ್ದಾರಿ ಇರಬೇಕು. ಅವರವರ ಜವಾಬ್ದಾರಿ ಅರಿತುಕೊಂಡು ಹೋಗಬೇಕೆ ಹೊರತು ಯಾರೂ ಸಹಾಯಕ್ಕೆ ಬರುವುದಿಲ್ಲ” ಎಂದರು.

ಕಳಪೆ ಕಾಮಗಾರಿಯ ಬಗ್ಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ, ಓರಿಸ್ಸಾದ ಅಧಿಕಾರಿಗಳು ಬಂದು ಪರೀಕ್ಷಿಸಿ ಉತ್ತಮವಾಗಿದೆ ಎಂದು ಪ್ರಮಾಣ ಪತ್ರ ನೀಡಿದ್ದಾರೆ. ನೀವು ಒಂದು ಮನೆ ಕಟ್ಟುತ್ತೀರಿ ಎಂದಿಟ್ಟುಕೊಳ್ಳಿ. ಅದು ಶೇ.ನೂರರಷ್ಟು ಕ್ವಾಲಿಟಿ ಇರುತ್ತದೆಯೇ? ಒಂದೇ ದಿನಕ್ಕೆ ಸರಿ ಹೋಗುತ್ತದೆಯೇ ಎಂಬ ಹಾರಿಕೆಯ ಉತ್ತರ ನೀಡಿದರು.

ಯಾಕಿಷ್ಟು ಬೇಜವಾಬ್ದಾರಿ ಉತ್ತರ ನೀಡುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಅವರು ಸುದ್ದಿಗೋಷ್ಠಿಯಿಂದಲೇ ಹೊರನಡೆದರು.

ಇದನ್ನೂ ಓದಿ; 2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...