Homeಮುಖಪುಟಯಾರಿಗೂ ಹೆದರುವುದಿಲ್ಲ, 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಅಭ್ಯರ್ಥಿಗಳ ನಿರ್ಧಾರ: ಕಾಂಗ್ರೆಸ್

ಯಾರಿಗೂ ಹೆದರುವುದಿಲ್ಲ, 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಅಭ್ಯರ್ಥಿಗಳ ನಿರ್ಧಾರ: ಕಾಂಗ್ರೆಸ್

- Advertisement -
- Advertisement -

ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ಉತ್ತರ ಪ್ರದೇಶದ ಪ್ರತಿಷ್ಠಿತ ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಇದ್ದ ಕುತೂಹಲಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಸಜ್ಜಾಗಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದ್ದು, 24 ಗಂಟೆಗಳ ಒಳಗೆ ಅದನ್ನು ಪ್ರಕಟಿಸಲಾಗುವುದು ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

‘ಯಾರೂ ಹೆದರುವುದಿಲ್ಲ, ಯಾರೂ ಓಡಿಹೋಗುವುದಿಲ್ಲ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಮಂಗಳವಾರ ಬಿಡುಗಡೆಯಾದ ಲೋಕಸಭೆ ಚುನಾವಣೆಯ ಇತ್ತೀಚಿನ ಹೆಸರುಗಳ ಪಟ್ಟಿಯಲ್ಲಿ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸದೆ ಕಾಂಗ್ರೆಸ್ ಕುತೂಹಲ ಉಳಿಸಿಕೊಂಡಿದೆ. ಘೋಷಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಅಮೇಥಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಪಕ್ಷದ ಕಚೇರಿಯ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಕಾರ್ಯಕರ್ತರು “ಅಮೇಥಿ ಮಾಂಗೆ ಗಾಂಧಿ ಪರಿವಾರ (ಅಮೇಥಿ ಗಾಂಧಿ ಕುಟುಂಬವನ್ನು ಒತ್ತಾಯಿಸುತ್ತದೆ)” ಎಂಬ ಘೋಷಣೆಗಳನ್ನು ಎತ್ತಿದರು.

2019 ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಆಘಾತಕಾರಿ ಸೋಲಿನಲ್ಲಿ ಕುಟುಂಬದ ಭದ್ರಕೋಟೆಯನ್ನು ಕಳೆದುಕೊಂಡಿರುವ ಪಕ್ಷವು ತನ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಮತ್ತೆ ಅಮೇಥಿಯಿಂದ ಕಣಕ್ಕಿಳಿಸುತ್ತದೆ. ಅವರು ಅಮೇಥಿ ಮತ್ತು ಕೇರಳದ ವಯನಾಡ್‌ನಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಡಿವೆ.

2004 ರಿಂದ ಸೋನಿಯಾ ಗಾಂಧಿಯವರ ಕೈಯಲ್ಲಿದ್ದ ರಾಯ್‌ಬರೇಲಿಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರು ಕೇಳಿಬರುತ್ತಿದೆ. ಅವರ ಚುನಾವಣಾ ಚೊಚ್ಚಲ ಪ್ರವೇಶವು ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ನಿರೀಕ್ಷೆಯಿದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುರಿತಾದ ಗದ್ದಲದ ಕುರಿತು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು ಸಿಇಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. “ಗಾಂಧಿ ಕುಟುಂಬವು ಅತ್ಯಂತ ಜನಪ್ರಿಯವಾಗಿದೆ ಮತ್ತು ಅವರ ಸಾರ್ವಜನಿಕ ಸಭೆಗಳಿಗೆ ಲಕ್ಷಾಂತರ ಜನರು ಬರುತ್ತಿದ್ದಾರೆ; ನಿರ್ಧಾರವನ್ನು ಈಗ ಸಿಇಸಿಗೆ ಬಿಡಲಾಗಿದೆ” ಎಂದು ಹೇಳಿದರು.

ಎರಡೂ ಸ್ಥಾನಗಳಿಗೆ ಐದನೇ ಹಂತವಾದ ಮೇ 20 ರಂದು ಚುನಾವಣೆ ನಡೆಯಲಿದೆ. ಯುಪಿಯ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 17 ರಲ್ಲಿ ಸ್ಪರ್ಧಿಸಲಿದೆ, ಉಳಿದ 63 ಇಂಡಿಯಾ ಬ್ಲಾಕ್ ಮಿತ್ರ ಸಮಾಜವಾದಿ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಹೋಗಲಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದು, ಸತತ ಎರಡನೇ ಅವಧಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ದೇಶ ತೊರೆಯುವುದನ್ನು ಪ್ರಧಾನಿ ಮೋದಿ ತಡೆದಿಲ್ಲ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...