Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...