Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...