Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....