Homeಮುಖಪುಟಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

“ಖಾಸಗೀಕರಣಗೊಳ್ಳುವ ಬ್ಯಾಂಕುಗಳಲ್ಲಿ ನೌಕರರ ಹಿತಾಸಕ್ತಿಗಳನ್ನು ಕಾಪಾಡಲಾಗುತ್ತದೆ” ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬ್ಯಾಂಕುಗಳನ್ನು ಖಾಸಗೀಕರಣ ಮಾಡುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬ್ಯಾಂಕ್ ನೌಕರರು ಎರಡು ದಿನಗಳ ಕಾಲ ಮುಷ್ಕರ ಹಮ್ಮಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾಧ್ಯಗಳೊಟ್ಟಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, “ಎಲ್ಲಾ ಬ್ಯಾಂಕುಗಳನ್ನೂ ಖಾಸಗೀಕರಣಗೊಳಿಸುವುದಿಲ್ಲ. ಅದಾಗ್ಯೂ ಖಾಸಗೀಕರಣಗೊಳ್ಳುವ ಬ್ಯಾಂಕುಗಳು, ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರ ಹಿತಾಸಕ್ತಿ ಕಾಪಾಡುತ್ತದೆ” ಎಂದು ಆಶ್ವಾಸನೆ ನೀಡಿದ್ದಾರೆ.

ಬ್ಯಾಂಕ್ ನೌಕರರ ಯೂನಿಯನ್‌ಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಮಾ.4, 9 ಮತ್ತು 10ರಂದು ನಡೆದಿದ್ದ ಸಂಧಾನ ಮಾತುಕತೆಗಳು ವಿಫಲಗೊಂಡಿದ್ದವು. ಹಾಗಾಗಿ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮಾ.15 ಮತ್ತು 16ರಂದು ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ವು ಹೇಳಿತ್ತು.

ಇದನ್ನೂ ಓದಿ: ಅರ್ನಾಬ್ ವಾಟ್ಸಾಪ್ ಚಾಟ್: ಕೇಂದ್ರಕ್ಕೆ ಯಾವುದೇ ಮಾಹಿತಿಯಿಲ್ಲ ಎಂದ ಸಚಿವ ಜಿ.ಕಿಶನ್ ರೆಡ್ಡಿ

ಇಷ್ಟು ದಿನ ಬ್ಯಾಂಕುಗಳ ವಿಲೀನದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರ ಈಗ ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಾಡಲು ಮುಂದಾಗಿದೆ. ಈ ಕುರಿತು ನೀತಿ ಆಯೋಗವು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದು, ಸರ್ಕಾರಿ ಸಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಯೋಜನೆ ಸಿದ್ದವಾಗುತ್ತಿದೆ ಎನ್ನಲಾಗುತ್ತಿದೆ. ಜೊತೆಗೆ ರೈಲ್ವೇ ವಿಭಾಗವನ್ನು ಖಾಸಗೀಕರಣಗೊಳಿಸುವ ಯೋಜನೆಯನ್ನೂ ಕೇಂದ್ರ ಸರ್ಕಾರ ಆರಂಭಿಸಿತ್ತು.

ಅದರೆ ಇಂದು ರೈಲ್ವೇ ಖಾಸಗೀಕರಣದ ಕುರಿತು ಹೇಳಿಕೆ ನೀಡಿರುವ ರೈಲ್ವೆ ಸಚಿವ ಪೀಯೂಷ್‌ ಗೋಯಲ್, “ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ. ರೈಲ್ವೆಯು ಪ್ರತಿಯೊಬ್ಬ ಭಾರತೀಯನ ಸ್ವತ್ತು. ಅದು ಹಾಗೆಯೇ ಇರಲಿದೆ. ಭಾರತ ಸರ್ಕಾರದ ಒಡೆತನದಲ್ಲಿಯೇ ಇರಲಿದೆ. 2019–20ನೇ ಹಣಕಾಸು ವರ್ಷದಲ್ಲಿ ರೈಲ್ವೆಗೆ ₹ 1.5 ಲಕ್ಷ ಕೋಟಿ ಅನುದಾನ ಒದಗಿಸಲಾಗಿತ್ತು. 2021–22ನೇ ಹಣಕಾಸು ವರ್ಷದಲ್ಲಿ ₹ 2.15 ಲಕ್ಷ ಕೋಟಿ ಅನುದಾನ ತೆಗೆದಿರಿಸಲಾಗಿದೆ. ರೈಲು ಅಪಘಾತಗಳಿಂದಾಗಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪ್ರಯಾಣಿಕರ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಪ್ರಬಂಧ; ನನಗೆ ದೆವ್ವ ಬಿಡಿಸಿದ ಕಥೆ: ಪ್ರತಾಪ್ ಹುಣಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...