Homeಮುಖಪುಟಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಗೆ ಸಂಬಂಧಿಸಿದಂತೆ ಇತ್ತೀಚಿನ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 3) ನಿರಾಕರಿಸಿದೆ. ಪ್ರತಿ ಮತಾಂತರಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ತಿಳಿಸಿರಬೇಕು ಎಂದು ಹೇಳಿದ ಕಾಯಿದೆಯ ನಿಬಂಧನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

“ಎಲ್ಲಾ ಮತಾಂತರಗಳು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಹೇಳಿದೆ ಎಂದು ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನವೆಂಬರ್ 2022ರಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ಸೂಚನೆ ನೀಡಿತ್ತು. “ಮತಾಂತರಕ್ಕೂ ಮುನ್ನವೇ ಕಡ್ಡಾಯ ಘೋಷಣೆ ಮಾಡಬೇಕೆಂಬ ನಿಬಂಧನೆಗೆ ಬದ್ಧವಾಗಿರಲು ವಿಫಲರಾದ ಯಾರ ವಿರುದ್ಧವೂ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಸೂಚಿಸಿತ್ತು.

“ಮತಾಂತರವನ್ನು ಬಯಸುವ ನಾಗರಿಕನು ಈ ವಿಷಯದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಘೋಷಣೆಯನ್ನು ನೀಡಬೇಕಿರುವುದು ಕಡ್ಡಾಯಗೊಳಿಸುತ್ತದೆ ಎಂದು ಕಾನೂನಿನ ಪರಿಚ್ಛೇದ 10 ಹೇಳುತ್ತದೆ. ಇದು ನಮ್ಮ ಅಭಿಪ್ರಾಯದಲ್ಲಿ ಅಸಾಂವಿಧಾನಿಕವಾಗಿದೆ. 21ರ ಕಾಯಿದೆಯ ಸೆಕ್ಷನ್ 10ರ ಉಲ್ಲಂಘನೆಗಾಗಿ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡದೆ ತಮ್ಮ ಧರ್ಮವನ್ನು ಮತಾಂತರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಹೈಕೋರ್ಟ್ ತಡೆದಿದ್ದನ್ನು ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಂಡಿದೆ.

ಕಾಯಿದೆಯ ಸೆಕ್ಷನ್ 10ರ ಪ್ರಕಾರ, “ಬೇರೆಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು, ಅವರು ಯಾವುದೇ ಬಲ, ಬಲವಂತ, ಅನಗತ್ಯ ಪ್ರಭಾವ ಅಥವಾ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿರಬೇಕು.”

ನಿಬಂಧನೆಯನ್ನು ಪಾಲಿಸದವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ವಿಧಿಸಲಾಗುವುದೆಂದು ಕಾನೂನು ಹೇಳಿದೆ.

ಮಂಗಳವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪದೇ ಪದೇ ಮನವಿ ಮಾಡಿದರು ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ಇದಕ್ಕೆ ಸುಪ್ರೀಂ ಕೋರ್ಟ್, “ಎಲ್ಲಾ ಧಾರ್ಮಿಕ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಮದುವೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಲಾಗುತ್ತದೆ. ಇದನ್ನು ನೋಡುತ್ತಾ ನಾವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಮೆಹ್ತಾ ವಾದಿಸಿದ್ದಾರೆ.

ನ್ಯಾಯಪೀಠವು ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಜಾರಿಗೊಳಿಸಿತು. ಇದೀಗ ನ್ಯಾಯಾಲಯವು ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ತಪ್ಪು ನಿರೂಪಣೆ, ಬಲಪ್ರಯೋಗ, ಅನಗತ್ಯ ಪ್ರಭಾವ, ಬಲಾತ್ಕಾರ, ಯಾವುದೇ ಇತರ ಮೋಸದ ವಿಧಾನ, ಆಮಿಷ ಅಥವಾ ಮದುವೆಯ ಭರವಸೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಬಾರದು ಎಂದು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ಹೇಳುತ್ತದೆ.

ಬಲಪಂಥೀಯರ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್’ (ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳನ್ನು ಮದುವೆಯಾಗಿ ಮತಾಂತರ ಮಾಡುತ್ತಾರೆಂಬ ವಾದ) ಪ್ರಸ್ತಾಪವನ್ನು ಬಿಜೆಪಿ ನಾಯಕರು ಆಗಾಗ್ಗೆ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೇಂದ್ರ ಗೃಹ ಸಚಿವಾಲಯವು ಲವ್ ಜಿಹಾದ್‌ನಂತಹ ಯಾವುದೇ ಪ್ರಕರಣಗಳ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಆದರೂ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳು ‘ಲವ್ ಜಿಹಾದ್’ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The right answer for love ziyad , if BJP people’s have the strong dum & thakat(guts) is love pankthi (bhojana)for all Hindus with together(poor&rich) in all over India……

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...