Homeಮುಖಪುಟಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಗೆ ಸಂಬಂಧಿಸಿದಂತೆ ಇತ್ತೀಚಿನ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 3) ನಿರಾಕರಿಸಿದೆ. ಪ್ರತಿ ಮತಾಂತರಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ತಿಳಿಸಿರಬೇಕು ಎಂದು ಹೇಳಿದ ಕಾಯಿದೆಯ ನಿಬಂಧನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

“ಎಲ್ಲಾ ಮತಾಂತರಗಳು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಹೇಳಿದೆ ಎಂದು ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನವೆಂಬರ್ 2022ರಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ಸೂಚನೆ ನೀಡಿತ್ತು. “ಮತಾಂತರಕ್ಕೂ ಮುನ್ನವೇ ಕಡ್ಡಾಯ ಘೋಷಣೆ ಮಾಡಬೇಕೆಂಬ ನಿಬಂಧನೆಗೆ ಬದ್ಧವಾಗಿರಲು ವಿಫಲರಾದ ಯಾರ ವಿರುದ್ಧವೂ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಸೂಚಿಸಿತ್ತು.

“ಮತಾಂತರವನ್ನು ಬಯಸುವ ನಾಗರಿಕನು ಈ ವಿಷಯದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಘೋಷಣೆಯನ್ನು ನೀಡಬೇಕಿರುವುದು ಕಡ್ಡಾಯಗೊಳಿಸುತ್ತದೆ ಎಂದು ಕಾನೂನಿನ ಪರಿಚ್ಛೇದ 10 ಹೇಳುತ್ತದೆ. ಇದು ನಮ್ಮ ಅಭಿಪ್ರಾಯದಲ್ಲಿ ಅಸಾಂವಿಧಾನಿಕವಾಗಿದೆ. 21ರ ಕಾಯಿದೆಯ ಸೆಕ್ಷನ್ 10ರ ಉಲ್ಲಂಘನೆಗಾಗಿ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡದೆ ತಮ್ಮ ಧರ್ಮವನ್ನು ಮತಾಂತರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಹೈಕೋರ್ಟ್ ತಡೆದಿದ್ದನ್ನು ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಂಡಿದೆ.

ಕಾಯಿದೆಯ ಸೆಕ್ಷನ್ 10ರ ಪ್ರಕಾರ, “ಬೇರೆಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು, ಅವರು ಯಾವುದೇ ಬಲ, ಬಲವಂತ, ಅನಗತ್ಯ ಪ್ರಭಾವ ಅಥವಾ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿರಬೇಕು.”

ನಿಬಂಧನೆಯನ್ನು ಪಾಲಿಸದವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ವಿಧಿಸಲಾಗುವುದೆಂದು ಕಾನೂನು ಹೇಳಿದೆ.

ಮಂಗಳವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪದೇ ಪದೇ ಮನವಿ ಮಾಡಿದರು ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ಇದಕ್ಕೆ ಸುಪ್ರೀಂ ಕೋರ್ಟ್, “ಎಲ್ಲಾ ಧಾರ್ಮಿಕ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಮದುವೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಲಾಗುತ್ತದೆ. ಇದನ್ನು ನೋಡುತ್ತಾ ನಾವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಮೆಹ್ತಾ ವಾದಿಸಿದ್ದಾರೆ.

ನ್ಯಾಯಪೀಠವು ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಜಾರಿಗೊಳಿಸಿತು. ಇದೀಗ ನ್ಯಾಯಾಲಯವು ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ತಪ್ಪು ನಿರೂಪಣೆ, ಬಲಪ್ರಯೋಗ, ಅನಗತ್ಯ ಪ್ರಭಾವ, ಬಲಾತ್ಕಾರ, ಯಾವುದೇ ಇತರ ಮೋಸದ ವಿಧಾನ, ಆಮಿಷ ಅಥವಾ ಮದುವೆಯ ಭರವಸೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಬಾರದು ಎಂದು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ಹೇಳುತ್ತದೆ.

ಬಲಪಂಥೀಯರ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್’ (ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳನ್ನು ಮದುವೆಯಾಗಿ ಮತಾಂತರ ಮಾಡುತ್ತಾರೆಂಬ ವಾದ) ಪ್ರಸ್ತಾಪವನ್ನು ಬಿಜೆಪಿ ನಾಯಕರು ಆಗಾಗ್ಗೆ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೇಂದ್ರ ಗೃಹ ಸಚಿವಾಲಯವು ಲವ್ ಜಿಹಾದ್‌ನಂತಹ ಯಾವುದೇ ಪ್ರಕರಣಗಳ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಆದರೂ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳು ‘ಲವ್ ಜಿಹಾದ್’ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The right answer for love ziyad , if BJP people’s have the strong dum & thakat(guts) is love pankthi (bhojana)for all Hindus with together(poor&rich) in all over India……

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...