Homeಮುಖಪುಟಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಗೆ ಸಂಬಂಧಿಸಿದಂತೆ ಇತ್ತೀಚಿನ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 3) ನಿರಾಕರಿಸಿದೆ. ಪ್ರತಿ ಮತಾಂತರಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ತಿಳಿಸಿರಬೇಕು ಎಂದು ಹೇಳಿದ ಕಾಯಿದೆಯ ನಿಬಂಧನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

“ಎಲ್ಲಾ ಮತಾಂತರಗಳು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಹೇಳಿದೆ ಎಂದು ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನವೆಂಬರ್ 2022ರಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ಸೂಚನೆ ನೀಡಿತ್ತು. “ಮತಾಂತರಕ್ಕೂ ಮುನ್ನವೇ ಕಡ್ಡಾಯ ಘೋಷಣೆ ಮಾಡಬೇಕೆಂಬ ನಿಬಂಧನೆಗೆ ಬದ್ಧವಾಗಿರಲು ವಿಫಲರಾದ ಯಾರ ವಿರುದ್ಧವೂ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಸೂಚಿಸಿತ್ತು.

“ಮತಾಂತರವನ್ನು ಬಯಸುವ ನಾಗರಿಕನು ಈ ವಿಷಯದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಘೋಷಣೆಯನ್ನು ನೀಡಬೇಕಿರುವುದು ಕಡ್ಡಾಯಗೊಳಿಸುತ್ತದೆ ಎಂದು ಕಾನೂನಿನ ಪರಿಚ್ಛೇದ 10 ಹೇಳುತ್ತದೆ. ಇದು ನಮ್ಮ ಅಭಿಪ್ರಾಯದಲ್ಲಿ ಅಸಾಂವಿಧಾನಿಕವಾಗಿದೆ. 21ರ ಕಾಯಿದೆಯ ಸೆಕ್ಷನ್ 10ರ ಉಲ್ಲಂಘನೆಗಾಗಿ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡದೆ ತಮ್ಮ ಧರ್ಮವನ್ನು ಮತಾಂತರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಹೈಕೋರ್ಟ್ ತಡೆದಿದ್ದನ್ನು ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಂಡಿದೆ.

ಕಾಯಿದೆಯ ಸೆಕ್ಷನ್ 10ರ ಪ್ರಕಾರ, “ಬೇರೆಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು, ಅವರು ಯಾವುದೇ ಬಲ, ಬಲವಂತ, ಅನಗತ್ಯ ಪ್ರಭಾವ ಅಥವಾ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿರಬೇಕು.”

ನಿಬಂಧನೆಯನ್ನು ಪಾಲಿಸದವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ವಿಧಿಸಲಾಗುವುದೆಂದು ಕಾನೂನು ಹೇಳಿದೆ.

ಮಂಗಳವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪದೇ ಪದೇ ಮನವಿ ಮಾಡಿದರು ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ಇದಕ್ಕೆ ಸುಪ್ರೀಂ ಕೋರ್ಟ್, “ಎಲ್ಲಾ ಧಾರ್ಮಿಕ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಮದುವೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಲಾಗುತ್ತದೆ. ಇದನ್ನು ನೋಡುತ್ತಾ ನಾವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಮೆಹ್ತಾ ವಾದಿಸಿದ್ದಾರೆ.

ನ್ಯಾಯಪೀಠವು ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಜಾರಿಗೊಳಿಸಿತು. ಇದೀಗ ನ್ಯಾಯಾಲಯವು ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ತಪ್ಪು ನಿರೂಪಣೆ, ಬಲಪ್ರಯೋಗ, ಅನಗತ್ಯ ಪ್ರಭಾವ, ಬಲಾತ್ಕಾರ, ಯಾವುದೇ ಇತರ ಮೋಸದ ವಿಧಾನ, ಆಮಿಷ ಅಥವಾ ಮದುವೆಯ ಭರವಸೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಬಾರದು ಎಂದು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ಹೇಳುತ್ತದೆ.

ಬಲಪಂಥೀಯರ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್’ (ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳನ್ನು ಮದುವೆಯಾಗಿ ಮತಾಂತರ ಮಾಡುತ್ತಾರೆಂಬ ವಾದ) ಪ್ರಸ್ತಾಪವನ್ನು ಬಿಜೆಪಿ ನಾಯಕರು ಆಗಾಗ್ಗೆ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೇಂದ್ರ ಗೃಹ ಸಚಿವಾಲಯವು ಲವ್ ಜಿಹಾದ್‌ನಂತಹ ಯಾವುದೇ ಪ್ರಕರಣಗಳ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಆದರೂ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳು ‘ಲವ್ ಜಿಹಾದ್’ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The right answer for love ziyad , if BJP people’s have the strong dum & thakat(guts) is love pankthi (bhojana)for all Hindus with together(poor&rich) in all over India……

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...