Homeಮುಖಪುಟಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಗೆ ಸಂಬಂಧಿಸಿದಂತೆ ಇತ್ತೀಚಿನ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 3) ನಿರಾಕರಿಸಿದೆ. ಪ್ರತಿ ಮತಾಂತರಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ತಿಳಿಸಿರಬೇಕು ಎಂದು ಹೇಳಿದ ಕಾಯಿದೆಯ ನಿಬಂಧನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

“ಎಲ್ಲಾ ಮತಾಂತರಗಳು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಹೇಳಿದೆ ಎಂದು ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನವೆಂಬರ್ 2022ರಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ಸೂಚನೆ ನೀಡಿತ್ತು. “ಮತಾಂತರಕ್ಕೂ ಮುನ್ನವೇ ಕಡ್ಡಾಯ ಘೋಷಣೆ ಮಾಡಬೇಕೆಂಬ ನಿಬಂಧನೆಗೆ ಬದ್ಧವಾಗಿರಲು ವಿಫಲರಾದ ಯಾರ ವಿರುದ್ಧವೂ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಸೂಚಿಸಿತ್ತು.

“ಮತಾಂತರವನ್ನು ಬಯಸುವ ನಾಗರಿಕನು ಈ ವಿಷಯದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಘೋಷಣೆಯನ್ನು ನೀಡಬೇಕಿರುವುದು ಕಡ್ಡಾಯಗೊಳಿಸುತ್ತದೆ ಎಂದು ಕಾನೂನಿನ ಪರಿಚ್ಛೇದ 10 ಹೇಳುತ್ತದೆ. ಇದು ನಮ್ಮ ಅಭಿಪ್ರಾಯದಲ್ಲಿ ಅಸಾಂವಿಧಾನಿಕವಾಗಿದೆ. 21ರ ಕಾಯಿದೆಯ ಸೆಕ್ಷನ್ 10ರ ಉಲ್ಲಂಘನೆಗಾಗಿ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡದೆ ತಮ್ಮ ಧರ್ಮವನ್ನು ಮತಾಂತರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಹೈಕೋರ್ಟ್ ತಡೆದಿದ್ದನ್ನು ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಂಡಿದೆ.

ಕಾಯಿದೆಯ ಸೆಕ್ಷನ್ 10ರ ಪ್ರಕಾರ, “ಬೇರೆಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು, ಅವರು ಯಾವುದೇ ಬಲ, ಬಲವಂತ, ಅನಗತ್ಯ ಪ್ರಭಾವ ಅಥವಾ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿರಬೇಕು.”

ನಿಬಂಧನೆಯನ್ನು ಪಾಲಿಸದವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ವಿಧಿಸಲಾಗುವುದೆಂದು ಕಾನೂನು ಹೇಳಿದೆ.

ಮಂಗಳವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪದೇ ಪದೇ ಮನವಿ ಮಾಡಿದರು ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ಇದಕ್ಕೆ ಸುಪ್ರೀಂ ಕೋರ್ಟ್, “ಎಲ್ಲಾ ಧಾರ್ಮಿಕ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಮದುವೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಲಾಗುತ್ತದೆ. ಇದನ್ನು ನೋಡುತ್ತಾ ನಾವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಮೆಹ್ತಾ ವಾದಿಸಿದ್ದಾರೆ.

ನ್ಯಾಯಪೀಠವು ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಜಾರಿಗೊಳಿಸಿತು. ಇದೀಗ ನ್ಯಾಯಾಲಯವು ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ತಪ್ಪು ನಿರೂಪಣೆ, ಬಲಪ್ರಯೋಗ, ಅನಗತ್ಯ ಪ್ರಭಾವ, ಬಲಾತ್ಕಾರ, ಯಾವುದೇ ಇತರ ಮೋಸದ ವಿಧಾನ, ಆಮಿಷ ಅಥವಾ ಮದುವೆಯ ಭರವಸೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಬಾರದು ಎಂದು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ಹೇಳುತ್ತದೆ.

ಬಲಪಂಥೀಯರ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್’ (ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳನ್ನು ಮದುವೆಯಾಗಿ ಮತಾಂತರ ಮಾಡುತ್ತಾರೆಂಬ ವಾದ) ಪ್ರಸ್ತಾಪವನ್ನು ಬಿಜೆಪಿ ನಾಯಕರು ಆಗಾಗ್ಗೆ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೇಂದ್ರ ಗೃಹ ಸಚಿವಾಲಯವು ಲವ್ ಜಿಹಾದ್‌ನಂತಹ ಯಾವುದೇ ಪ್ರಕರಣಗಳ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಆದರೂ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳು ‘ಲವ್ ಜಿಹಾದ್’ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The right answer for love ziyad , if BJP people’s have the strong dum & thakat(guts) is love pankthi (bhojana)for all Hindus with together(poor&rich) in all over India……

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...