Homeಮುಖಪುಟಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಗೆ ಸಂಬಂಧಿಸಿದಂತೆ ಇತ್ತೀಚಿನ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 3) ನಿರಾಕರಿಸಿದೆ. ಪ್ರತಿ ಮತಾಂತರಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ತಿಳಿಸಿರಬೇಕು ಎಂದು ಹೇಳಿದ ಕಾಯಿದೆಯ ನಿಬಂಧನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

“ಎಲ್ಲಾ ಮತಾಂತರಗಳು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಹೇಳಿದೆ ಎಂದು ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನವೆಂಬರ್ 2022ರಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ಸೂಚನೆ ನೀಡಿತ್ತು. “ಮತಾಂತರಕ್ಕೂ ಮುನ್ನವೇ ಕಡ್ಡಾಯ ಘೋಷಣೆ ಮಾಡಬೇಕೆಂಬ ನಿಬಂಧನೆಗೆ ಬದ್ಧವಾಗಿರಲು ವಿಫಲರಾದ ಯಾರ ವಿರುದ್ಧವೂ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಸೂಚಿಸಿತ್ತು.

“ಮತಾಂತರವನ್ನು ಬಯಸುವ ನಾಗರಿಕನು ಈ ವಿಷಯದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಘೋಷಣೆಯನ್ನು ನೀಡಬೇಕಿರುವುದು ಕಡ್ಡಾಯಗೊಳಿಸುತ್ತದೆ ಎಂದು ಕಾನೂನಿನ ಪರಿಚ್ಛೇದ 10 ಹೇಳುತ್ತದೆ. ಇದು ನಮ್ಮ ಅಭಿಪ್ರಾಯದಲ್ಲಿ ಅಸಾಂವಿಧಾನಿಕವಾಗಿದೆ. 21ರ ಕಾಯಿದೆಯ ಸೆಕ್ಷನ್ 10ರ ಉಲ್ಲಂಘನೆಗಾಗಿ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡದೆ ತಮ್ಮ ಧರ್ಮವನ್ನು ಮತಾಂತರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಹೈಕೋರ್ಟ್ ತಡೆದಿದ್ದನ್ನು ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಂಡಿದೆ.

ಕಾಯಿದೆಯ ಸೆಕ್ಷನ್ 10ರ ಪ್ರಕಾರ, “ಬೇರೆಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು, ಅವರು ಯಾವುದೇ ಬಲ, ಬಲವಂತ, ಅನಗತ್ಯ ಪ್ರಭಾವ ಅಥವಾ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿರಬೇಕು.”

ನಿಬಂಧನೆಯನ್ನು ಪಾಲಿಸದವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ವಿಧಿಸಲಾಗುವುದೆಂದು ಕಾನೂನು ಹೇಳಿದೆ.

ಮಂಗಳವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪದೇ ಪದೇ ಮನವಿ ಮಾಡಿದರು ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ಇದಕ್ಕೆ ಸುಪ್ರೀಂ ಕೋರ್ಟ್, “ಎಲ್ಲಾ ಧಾರ್ಮಿಕ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಮದುವೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಲಾಗುತ್ತದೆ. ಇದನ್ನು ನೋಡುತ್ತಾ ನಾವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಮೆಹ್ತಾ ವಾದಿಸಿದ್ದಾರೆ.

ನ್ಯಾಯಪೀಠವು ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಜಾರಿಗೊಳಿಸಿತು. ಇದೀಗ ನ್ಯಾಯಾಲಯವು ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ತಪ್ಪು ನಿರೂಪಣೆ, ಬಲಪ್ರಯೋಗ, ಅನಗತ್ಯ ಪ್ರಭಾವ, ಬಲಾತ್ಕಾರ, ಯಾವುದೇ ಇತರ ಮೋಸದ ವಿಧಾನ, ಆಮಿಷ ಅಥವಾ ಮದುವೆಯ ಭರವಸೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಬಾರದು ಎಂದು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ಹೇಳುತ್ತದೆ.

ಬಲಪಂಥೀಯರ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್’ (ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳನ್ನು ಮದುವೆಯಾಗಿ ಮತಾಂತರ ಮಾಡುತ್ತಾರೆಂಬ ವಾದ) ಪ್ರಸ್ತಾಪವನ್ನು ಬಿಜೆಪಿ ನಾಯಕರು ಆಗಾಗ್ಗೆ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೇಂದ್ರ ಗೃಹ ಸಚಿವಾಲಯವು ಲವ್ ಜಿಹಾದ್‌ನಂತಹ ಯಾವುದೇ ಪ್ರಕರಣಗಳ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಆದರೂ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳು ‘ಲವ್ ಜಿಹಾದ್’ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The right answer for love ziyad , if BJP people’s have the strong dum & thakat(guts) is love pankthi (bhojana)for all Hindus with together(poor&rich) in all over India……

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...