Homeಮುಖಪುಟರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದ ಡೆರೆಕ್ ಒ’ಬ್ರಿಯೆನ್ ಗಂಭೀರ ಟೀಕೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸುವ ಕೇಂದ್ರದ ತಂಡಕ್ಕೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರವೇಶಿಸದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆದಿದ್ದಾರೆ.

ತನಿಖಾ ತಂಡ ಆರು ಜನರಲ್ಲಿ ರಾಜ್ಯದ ಒಬ್ಬರನ್ನು ಅನುಮತಿಸಿದ ಕಾರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರದ ತಂಡವನ್ನು ಅನುಮತಿಸಲು ನಿರಾಕರಿಸಿದೆ. ಕೇಂದ್ರ ತಂಡಗಳನ್ನು ವಿರೋಧ ಪಕ್ಷಗಳು ಆಳುತ್ತಿರುವ ಮೂರು ರಾಜ್ಯಗಳು ಸೇರಿದಂತೆ ನಾಲ್ಕು ರಾಜ್ಯಗಳಿಗೆ ಕಳುಹಿಸಲಾಗಿದೆ.

ಕೇಂದ್ರವೂ ತಂಡಗಳನ್ನು ಮಹಾರಾಷ್ಟ್ರದ ಪುಣೆ, ರಾಜಸ್ಥಾನದ ಜೈಪುರ, ಕೋಲ್ಕತಾ, ಹೌರಾ, ಮಿಡ್ನಾಪುರ ಪೂರ್ವ, 24 ಪರಗಣಗಳು ಉತ್ತರ, ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ಮಧ್ಯಪ್ರದೇಶದ ಇಂದೋರ್‌ಗೆ ಕಳುಹಿಸಲಾಗಿದೆ.

ಈ ಬಗ್ಗೆ ಬಂಗಾಳದ ಕೋಲ್ಕತ್ತಾದ ತಂಡದ ಸದಸ್ಯರೊಬ್ಬರು ತಮ್ಮ ಕೆಲಸವನ್ನು ಮಾಡಲು ಅನುಮತಿ ನೀಡಿಲ್ಲ ಎಂದು ಆರೋಪಿಸಿದ್ದಾರೆ. “ಇಂದು ಸ್ಥಳಗಳಿಗೆ ಭೇಟಿ ನೀಡಬಹುದೆಂದು ನಮಗೆ ಭರವಸೆ ನೀಡಲಾಯಿತಾದರೂ, ನಂತರ ಕೆಲವು ಸಮಸ್ಯೆಗಳಿವೆ ಹಾಗು ನಾವು ಹೊರಗೆ ಹೋಗುವಂತಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಕೋಲ್ಕತಾ ತಂಡದ ಮುಖ್ಯಸ್ಥ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ಅಪೂರ್ವಾ ಚಂದ್ರ ಹೇಳಿದ್ದಾರೆ.

“ತಂಡಗಳು ಇತರ ರಾಜ್ಯಗಳಿಗೆ ಹೋಗಿವೆ, ಅಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರಿಗೆ ಪಶ್ಚಿಮ ಬಂಗಾಳದಂತೆಯೇ ನೋಟಿಸ್ ನೀಡಲಾಗಿದೆ ಆದರೆ ನಿನ್ನೆಯಿಂದ ಅವರಿಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂದ್ರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲ್ಕತ್ತಾಗೆ ತನಿಖಾ ತಂಡ ಆಗಮಿಸುವ ಬಗ್ಗೆ ಪತ್ರ ಬರೆದಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಔಪಚಾರಿಕವಾಗಿ ಫೋನ್‌ನಲ್ಲಿ ತಿಳಿಸುವ ಮುನ್ನವೆ “ಜಿಲ್ಲೆಗಳ ಆಯ್ಕೆ ಮತ್ತು ಏಕಪಕ್ಷೀಯವಾಗಿ ತಂಡದ ಆಯ್ಕೆ ಮಾಡಿರುವುದು  ದುರದೃಷ್ಟಕರವಾಗಿದೆ” ಎಂದು ಅವರು ಕೆರಳಿದ್ದಾರೆ. ಹಾಗಾಗಿ ತಂಡದ ಆಗಮನ ಪ್ರೋಟೋಕಾಲ್ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ತಂಡದ ವೀಕ್ಷಣಾ ಪಟ್ಟಿಯಲ್ಲಿ ಬಂಗಾಳದ ಏಳು ಜಿಲ್ಲೆಗಳನ್ನು ಹೊಂದಿದೆ. ನಾಲ್ಕು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳು 14 ದಿನದಿಂದ ಒಂದೇ ವೈರಸ್ ಪ್ರಕರಣ ವರದಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಮತ್ತು ದೆಹಲಿಗೆ ಕೇಂದ್ರದ ಯಾವುದೇ ತಂಡಗಳನ್ನು ಯಾಕೆ ಕಳುಹಿಸಲಿಲ್ಲ ಎಂದು ರಾಜ್ಯದ ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ ಪ್ರಶ್ನಿಸಿದೆ.

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಆರೋಪಿಸಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರವು ತಂಡವನ್ನು ಕಳುಹಿಸಿದೆ. ಅದು ಮಧ್ಯಪ್ರದೇಶವಾಗಿದೆ. ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವ ಗುಜರಾತ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಅಲ್ಲಿ 1939 ಪ್ರಕರಣಗಳು ಹಾಗೂ 71 ಸಾವುಗಳು ಸೇರಿದಂತೆ ದೇಶದಲ್ಲಿ ಮೂರನೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳಿವೆ.

ಪರಿಸ್ಥಿತಿ ಗಂಭೀರವಾಗಿದೆ ಹಾಗೂ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿರುವ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದೆ ಎಂದು ಕೇಂದ್ರ ಹೇಳಿಕೊಂಡಿದೆ. ರಾಜ್ಯ ಆಡಳಿತವು ಕೊರೊನಾ ವೈರಸ್‌ ಪ್ರಕರಣಗಳನ್ನು ಕಡಿಮೆ ವರದಿ ಮಾಡಿದ ಉದಾಹರಣೆಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿ, ನಿರ್ದಿಷ್ಟವಾಗಿ ಬಂಗಾಳವನ್ನು ಉಲ್ಲೇಖಿಸದೆ ನಿಜವಾದ ಸಂಖ್ಯೆಯ ಕೊರೊನಾ ವೈರಸ್ ರೋಗಿಗಳನ್ನು ಮರೆಮಾಡಿದೆ ಎಂದು ಆರೋಪಿಸಲಾಗಿದೆ.

ಗೃಹ ಸಚಿವಾಲಯದ ಆಂತರಿಕ ಮೌಲ್ಯಮಾಪನವು ಬಂಗಾಳದಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ ವರದಿಯಾಗುವುದಕ್ಕಿಂತ ಹೆಚ್ಚಾಗಿದೆ ಎಂದು ಪರಿಗಣಿಸುತ್ತದೆ; ಸಾವಿನ ಕಾರಣವನ್ನು ತಪ್ಪಾಗಿ ವರದಿ ಮಾಡಲಾಗಿದೆಯೆಂದು ಅದು ಹೇಳಿದೆ.

ಲಾಕ್‌ಡೌನ್ ಕ್ರಮಗಳ ಅನುಷ್ಠಾನ, ಅಗತ್ಯ ಸರಕುಗಳ ಪೂರೈಕೆ, ಸಾಮಾಜಿಕ ದೂರ, ಆರೋಗ್ಯ ಮೂಲಸೌಕರ್ಯ, ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಪರಿಹಾರ ಶಿಬಿರಗಳ ಪರಿಸ್ಥಿತಿಗಳ ಕುರಿತು ದೂರುಗಳ ಬಗ್ಗೆ ಅಂತರ್‌-ಸಚಿವಾಲಯದ ತಂಡಗಳು ಗಮನ ಹರಿಸಲಿವೆ ಎಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ: ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ವಿಶಮ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ.

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...