Homeಮುಖಪುಟರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದ ಡೆರೆಕ್ ಒ’ಬ್ರಿಯೆನ್ ಗಂಭೀರ ಟೀಕೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸುವ ಕೇಂದ್ರದ ತಂಡಕ್ಕೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರವೇಶಿಸದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆದಿದ್ದಾರೆ.

ತನಿಖಾ ತಂಡ ಆರು ಜನರಲ್ಲಿ ರಾಜ್ಯದ ಒಬ್ಬರನ್ನು ಅನುಮತಿಸಿದ ಕಾರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರದ ತಂಡವನ್ನು ಅನುಮತಿಸಲು ನಿರಾಕರಿಸಿದೆ. ಕೇಂದ್ರ ತಂಡಗಳನ್ನು ವಿರೋಧ ಪಕ್ಷಗಳು ಆಳುತ್ತಿರುವ ಮೂರು ರಾಜ್ಯಗಳು ಸೇರಿದಂತೆ ನಾಲ್ಕು ರಾಜ್ಯಗಳಿಗೆ ಕಳುಹಿಸಲಾಗಿದೆ.

ಕೇಂದ್ರವೂ ತಂಡಗಳನ್ನು ಮಹಾರಾಷ್ಟ್ರದ ಪುಣೆ, ರಾಜಸ್ಥಾನದ ಜೈಪುರ, ಕೋಲ್ಕತಾ, ಹೌರಾ, ಮಿಡ್ನಾಪುರ ಪೂರ್ವ, 24 ಪರಗಣಗಳು ಉತ್ತರ, ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ಮಧ್ಯಪ್ರದೇಶದ ಇಂದೋರ್‌ಗೆ ಕಳುಹಿಸಲಾಗಿದೆ.

ಈ ಬಗ್ಗೆ ಬಂಗಾಳದ ಕೋಲ್ಕತ್ತಾದ ತಂಡದ ಸದಸ್ಯರೊಬ್ಬರು ತಮ್ಮ ಕೆಲಸವನ್ನು ಮಾಡಲು ಅನುಮತಿ ನೀಡಿಲ್ಲ ಎಂದು ಆರೋಪಿಸಿದ್ದಾರೆ. “ಇಂದು ಸ್ಥಳಗಳಿಗೆ ಭೇಟಿ ನೀಡಬಹುದೆಂದು ನಮಗೆ ಭರವಸೆ ನೀಡಲಾಯಿತಾದರೂ, ನಂತರ ಕೆಲವು ಸಮಸ್ಯೆಗಳಿವೆ ಹಾಗು ನಾವು ಹೊರಗೆ ಹೋಗುವಂತಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಕೋಲ್ಕತಾ ತಂಡದ ಮುಖ್ಯಸ್ಥ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ಅಪೂರ್ವಾ ಚಂದ್ರ ಹೇಳಿದ್ದಾರೆ.

“ತಂಡಗಳು ಇತರ ರಾಜ್ಯಗಳಿಗೆ ಹೋಗಿವೆ, ಅಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರಿಗೆ ಪಶ್ಚಿಮ ಬಂಗಾಳದಂತೆಯೇ ನೋಟಿಸ್ ನೀಡಲಾಗಿದೆ ಆದರೆ ನಿನ್ನೆಯಿಂದ ಅವರಿಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂದ್ರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲ್ಕತ್ತಾಗೆ ತನಿಖಾ ತಂಡ ಆಗಮಿಸುವ ಬಗ್ಗೆ ಪತ್ರ ಬರೆದಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಔಪಚಾರಿಕವಾಗಿ ಫೋನ್‌ನಲ್ಲಿ ತಿಳಿಸುವ ಮುನ್ನವೆ “ಜಿಲ್ಲೆಗಳ ಆಯ್ಕೆ ಮತ್ತು ಏಕಪಕ್ಷೀಯವಾಗಿ ತಂಡದ ಆಯ್ಕೆ ಮಾಡಿರುವುದು  ದುರದೃಷ್ಟಕರವಾಗಿದೆ” ಎಂದು ಅವರು ಕೆರಳಿದ್ದಾರೆ. ಹಾಗಾಗಿ ತಂಡದ ಆಗಮನ ಪ್ರೋಟೋಕಾಲ್ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ತಂಡದ ವೀಕ್ಷಣಾ ಪಟ್ಟಿಯಲ್ಲಿ ಬಂಗಾಳದ ಏಳು ಜಿಲ್ಲೆಗಳನ್ನು ಹೊಂದಿದೆ. ನಾಲ್ಕು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳು 14 ದಿನದಿಂದ ಒಂದೇ ವೈರಸ್ ಪ್ರಕರಣ ವರದಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಮತ್ತು ದೆಹಲಿಗೆ ಕೇಂದ್ರದ ಯಾವುದೇ ತಂಡಗಳನ್ನು ಯಾಕೆ ಕಳುಹಿಸಲಿಲ್ಲ ಎಂದು ರಾಜ್ಯದ ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ ಪ್ರಶ್ನಿಸಿದೆ.

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಆರೋಪಿಸಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರವು ತಂಡವನ್ನು ಕಳುಹಿಸಿದೆ. ಅದು ಮಧ್ಯಪ್ರದೇಶವಾಗಿದೆ. ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವ ಗುಜರಾತ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಅಲ್ಲಿ 1939 ಪ್ರಕರಣಗಳು ಹಾಗೂ 71 ಸಾವುಗಳು ಸೇರಿದಂತೆ ದೇಶದಲ್ಲಿ ಮೂರನೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳಿವೆ.

ಪರಿಸ್ಥಿತಿ ಗಂಭೀರವಾಗಿದೆ ಹಾಗೂ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿರುವ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದೆ ಎಂದು ಕೇಂದ್ರ ಹೇಳಿಕೊಂಡಿದೆ. ರಾಜ್ಯ ಆಡಳಿತವು ಕೊರೊನಾ ವೈರಸ್‌ ಪ್ರಕರಣಗಳನ್ನು ಕಡಿಮೆ ವರದಿ ಮಾಡಿದ ಉದಾಹರಣೆಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿ, ನಿರ್ದಿಷ್ಟವಾಗಿ ಬಂಗಾಳವನ್ನು ಉಲ್ಲೇಖಿಸದೆ ನಿಜವಾದ ಸಂಖ್ಯೆಯ ಕೊರೊನಾ ವೈರಸ್ ರೋಗಿಗಳನ್ನು ಮರೆಮಾಡಿದೆ ಎಂದು ಆರೋಪಿಸಲಾಗಿದೆ.

ಗೃಹ ಸಚಿವಾಲಯದ ಆಂತರಿಕ ಮೌಲ್ಯಮಾಪನವು ಬಂಗಾಳದಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ ವರದಿಯಾಗುವುದಕ್ಕಿಂತ ಹೆಚ್ಚಾಗಿದೆ ಎಂದು ಪರಿಗಣಿಸುತ್ತದೆ; ಸಾವಿನ ಕಾರಣವನ್ನು ತಪ್ಪಾಗಿ ವರದಿ ಮಾಡಲಾಗಿದೆಯೆಂದು ಅದು ಹೇಳಿದೆ.

ಲಾಕ್‌ಡೌನ್ ಕ್ರಮಗಳ ಅನುಷ್ಠಾನ, ಅಗತ್ಯ ಸರಕುಗಳ ಪೂರೈಕೆ, ಸಾಮಾಜಿಕ ದೂರ, ಆರೋಗ್ಯ ಮೂಲಸೌಕರ್ಯ, ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಪರಿಹಾರ ಶಿಬಿರಗಳ ಪರಿಸ್ಥಿತಿಗಳ ಕುರಿತು ದೂರುಗಳ ಬಗ್ಗೆ ಅಂತರ್‌-ಸಚಿವಾಲಯದ ತಂಡಗಳು ಗಮನ ಹರಿಸಲಿವೆ ಎಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ: ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ವಿಶಮ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...