Homeಮುಖಪುಟರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದ ಡೆರೆಕ್ ಒ’ಬ್ರಿಯೆನ್ ಗಂಭೀರ ಟೀಕೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸುವ ಕೇಂದ್ರದ ತಂಡಕ್ಕೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರವೇಶಿಸದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆದಿದ್ದಾರೆ.

ತನಿಖಾ ತಂಡ ಆರು ಜನರಲ್ಲಿ ರಾಜ್ಯದ ಒಬ್ಬರನ್ನು ಅನುಮತಿಸಿದ ಕಾರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರದ ತಂಡವನ್ನು ಅನುಮತಿಸಲು ನಿರಾಕರಿಸಿದೆ. ಕೇಂದ್ರ ತಂಡಗಳನ್ನು ವಿರೋಧ ಪಕ್ಷಗಳು ಆಳುತ್ತಿರುವ ಮೂರು ರಾಜ್ಯಗಳು ಸೇರಿದಂತೆ ನಾಲ್ಕು ರಾಜ್ಯಗಳಿಗೆ ಕಳುಹಿಸಲಾಗಿದೆ.

ಕೇಂದ್ರವೂ ತಂಡಗಳನ್ನು ಮಹಾರಾಷ್ಟ್ರದ ಪುಣೆ, ರಾಜಸ್ಥಾನದ ಜೈಪುರ, ಕೋಲ್ಕತಾ, ಹೌರಾ, ಮಿಡ್ನಾಪುರ ಪೂರ್ವ, 24 ಪರಗಣಗಳು ಉತ್ತರ, ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ಮಧ್ಯಪ್ರದೇಶದ ಇಂದೋರ್‌ಗೆ ಕಳುಹಿಸಲಾಗಿದೆ.

ಈ ಬಗ್ಗೆ ಬಂಗಾಳದ ಕೋಲ್ಕತ್ತಾದ ತಂಡದ ಸದಸ್ಯರೊಬ್ಬರು ತಮ್ಮ ಕೆಲಸವನ್ನು ಮಾಡಲು ಅನುಮತಿ ನೀಡಿಲ್ಲ ಎಂದು ಆರೋಪಿಸಿದ್ದಾರೆ. “ಇಂದು ಸ್ಥಳಗಳಿಗೆ ಭೇಟಿ ನೀಡಬಹುದೆಂದು ನಮಗೆ ಭರವಸೆ ನೀಡಲಾಯಿತಾದರೂ, ನಂತರ ಕೆಲವು ಸಮಸ್ಯೆಗಳಿವೆ ಹಾಗು ನಾವು ಹೊರಗೆ ಹೋಗುವಂತಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಕೋಲ್ಕತಾ ತಂಡದ ಮುಖ್ಯಸ್ಥ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ಅಪೂರ್ವಾ ಚಂದ್ರ ಹೇಳಿದ್ದಾರೆ.

“ತಂಡಗಳು ಇತರ ರಾಜ್ಯಗಳಿಗೆ ಹೋಗಿವೆ, ಅಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರಿಗೆ ಪಶ್ಚಿಮ ಬಂಗಾಳದಂತೆಯೇ ನೋಟಿಸ್ ನೀಡಲಾಗಿದೆ ಆದರೆ ನಿನ್ನೆಯಿಂದ ಅವರಿಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂದ್ರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲ್ಕತ್ತಾಗೆ ತನಿಖಾ ತಂಡ ಆಗಮಿಸುವ ಬಗ್ಗೆ ಪತ್ರ ಬರೆದಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಔಪಚಾರಿಕವಾಗಿ ಫೋನ್‌ನಲ್ಲಿ ತಿಳಿಸುವ ಮುನ್ನವೆ “ಜಿಲ್ಲೆಗಳ ಆಯ್ಕೆ ಮತ್ತು ಏಕಪಕ್ಷೀಯವಾಗಿ ತಂಡದ ಆಯ್ಕೆ ಮಾಡಿರುವುದು  ದುರದೃಷ್ಟಕರವಾಗಿದೆ” ಎಂದು ಅವರು ಕೆರಳಿದ್ದಾರೆ. ಹಾಗಾಗಿ ತಂಡದ ಆಗಮನ ಪ್ರೋಟೋಕಾಲ್ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ತಂಡದ ವೀಕ್ಷಣಾ ಪಟ್ಟಿಯಲ್ಲಿ ಬಂಗಾಳದ ಏಳು ಜಿಲ್ಲೆಗಳನ್ನು ಹೊಂದಿದೆ. ನಾಲ್ಕು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳು 14 ದಿನದಿಂದ ಒಂದೇ ವೈರಸ್ ಪ್ರಕರಣ ವರದಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಮತ್ತು ದೆಹಲಿಗೆ ಕೇಂದ್ರದ ಯಾವುದೇ ತಂಡಗಳನ್ನು ಯಾಕೆ ಕಳುಹಿಸಲಿಲ್ಲ ಎಂದು ರಾಜ್ಯದ ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ ಪ್ರಶ್ನಿಸಿದೆ.

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಆರೋಪಿಸಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರವು ತಂಡವನ್ನು ಕಳುಹಿಸಿದೆ. ಅದು ಮಧ್ಯಪ್ರದೇಶವಾಗಿದೆ. ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವ ಗುಜರಾತ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಅಲ್ಲಿ 1939 ಪ್ರಕರಣಗಳು ಹಾಗೂ 71 ಸಾವುಗಳು ಸೇರಿದಂತೆ ದೇಶದಲ್ಲಿ ಮೂರನೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳಿವೆ.

ಪರಿಸ್ಥಿತಿ ಗಂಭೀರವಾಗಿದೆ ಹಾಗೂ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿರುವ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದೆ ಎಂದು ಕೇಂದ್ರ ಹೇಳಿಕೊಂಡಿದೆ. ರಾಜ್ಯ ಆಡಳಿತವು ಕೊರೊನಾ ವೈರಸ್‌ ಪ್ರಕರಣಗಳನ್ನು ಕಡಿಮೆ ವರದಿ ಮಾಡಿದ ಉದಾಹರಣೆಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿ, ನಿರ್ದಿಷ್ಟವಾಗಿ ಬಂಗಾಳವನ್ನು ಉಲ್ಲೇಖಿಸದೆ ನಿಜವಾದ ಸಂಖ್ಯೆಯ ಕೊರೊನಾ ವೈರಸ್ ರೋಗಿಗಳನ್ನು ಮರೆಮಾಡಿದೆ ಎಂದು ಆರೋಪಿಸಲಾಗಿದೆ.

ಗೃಹ ಸಚಿವಾಲಯದ ಆಂತರಿಕ ಮೌಲ್ಯಮಾಪನವು ಬಂಗಾಳದಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ ವರದಿಯಾಗುವುದಕ್ಕಿಂತ ಹೆಚ್ಚಾಗಿದೆ ಎಂದು ಪರಿಗಣಿಸುತ್ತದೆ; ಸಾವಿನ ಕಾರಣವನ್ನು ತಪ್ಪಾಗಿ ವರದಿ ಮಾಡಲಾಗಿದೆಯೆಂದು ಅದು ಹೇಳಿದೆ.

ಲಾಕ್‌ಡೌನ್ ಕ್ರಮಗಳ ಅನುಷ್ಠಾನ, ಅಗತ್ಯ ಸರಕುಗಳ ಪೂರೈಕೆ, ಸಾಮಾಜಿಕ ದೂರ, ಆರೋಗ್ಯ ಮೂಲಸೌಕರ್ಯ, ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಪರಿಹಾರ ಶಿಬಿರಗಳ ಪರಿಸ್ಥಿತಿಗಳ ಕುರಿತು ದೂರುಗಳ ಬಗ್ಗೆ ಅಂತರ್‌-ಸಚಿವಾಲಯದ ತಂಡಗಳು ಗಮನ ಹರಿಸಲಿವೆ ಎಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ: ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ವಿಶಮ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...