Homeಮುಖಪುಟರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದ ಡೆರೆಕ್ ಒ’ಬ್ರಿಯೆನ್ ಗಂಭೀರ ಟೀಕೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸುವ ಕೇಂದ್ರದ ತಂಡಕ್ಕೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರವೇಶಿಸದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆದಿದ್ದಾರೆ.

ತನಿಖಾ ತಂಡ ಆರು ಜನರಲ್ಲಿ ರಾಜ್ಯದ ಒಬ್ಬರನ್ನು ಅನುಮತಿಸಿದ ಕಾರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರದ ತಂಡವನ್ನು ಅನುಮತಿಸಲು ನಿರಾಕರಿಸಿದೆ. ಕೇಂದ್ರ ತಂಡಗಳನ್ನು ವಿರೋಧ ಪಕ್ಷಗಳು ಆಳುತ್ತಿರುವ ಮೂರು ರಾಜ್ಯಗಳು ಸೇರಿದಂತೆ ನಾಲ್ಕು ರಾಜ್ಯಗಳಿಗೆ ಕಳುಹಿಸಲಾಗಿದೆ.

ಕೇಂದ್ರವೂ ತಂಡಗಳನ್ನು ಮಹಾರಾಷ್ಟ್ರದ ಪುಣೆ, ರಾಜಸ್ಥಾನದ ಜೈಪುರ, ಕೋಲ್ಕತಾ, ಹೌರಾ, ಮಿಡ್ನಾಪುರ ಪೂರ್ವ, 24 ಪರಗಣಗಳು ಉತ್ತರ, ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ಮಧ್ಯಪ್ರದೇಶದ ಇಂದೋರ್‌ಗೆ ಕಳುಹಿಸಲಾಗಿದೆ.

ಈ ಬಗ್ಗೆ ಬಂಗಾಳದ ಕೋಲ್ಕತ್ತಾದ ತಂಡದ ಸದಸ್ಯರೊಬ್ಬರು ತಮ್ಮ ಕೆಲಸವನ್ನು ಮಾಡಲು ಅನುಮತಿ ನೀಡಿಲ್ಲ ಎಂದು ಆರೋಪಿಸಿದ್ದಾರೆ. “ಇಂದು ಸ್ಥಳಗಳಿಗೆ ಭೇಟಿ ನೀಡಬಹುದೆಂದು ನಮಗೆ ಭರವಸೆ ನೀಡಲಾಯಿತಾದರೂ, ನಂತರ ಕೆಲವು ಸಮಸ್ಯೆಗಳಿವೆ ಹಾಗು ನಾವು ಹೊರಗೆ ಹೋಗುವಂತಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಕೋಲ್ಕತಾ ತಂಡದ ಮುಖ್ಯಸ್ಥ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ಅಪೂರ್ವಾ ಚಂದ್ರ ಹೇಳಿದ್ದಾರೆ.

“ತಂಡಗಳು ಇತರ ರಾಜ್ಯಗಳಿಗೆ ಹೋಗಿವೆ, ಅಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರಿಗೆ ಪಶ್ಚಿಮ ಬಂಗಾಳದಂತೆಯೇ ನೋಟಿಸ್ ನೀಡಲಾಗಿದೆ ಆದರೆ ನಿನ್ನೆಯಿಂದ ಅವರಿಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂದ್ರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲ್ಕತ್ತಾಗೆ ತನಿಖಾ ತಂಡ ಆಗಮಿಸುವ ಬಗ್ಗೆ ಪತ್ರ ಬರೆದಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಔಪಚಾರಿಕವಾಗಿ ಫೋನ್‌ನಲ್ಲಿ ತಿಳಿಸುವ ಮುನ್ನವೆ “ಜಿಲ್ಲೆಗಳ ಆಯ್ಕೆ ಮತ್ತು ಏಕಪಕ್ಷೀಯವಾಗಿ ತಂಡದ ಆಯ್ಕೆ ಮಾಡಿರುವುದು  ದುರದೃಷ್ಟಕರವಾಗಿದೆ” ಎಂದು ಅವರು ಕೆರಳಿದ್ದಾರೆ. ಹಾಗಾಗಿ ತಂಡದ ಆಗಮನ ಪ್ರೋಟೋಕಾಲ್ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ತಂಡದ ವೀಕ್ಷಣಾ ಪಟ್ಟಿಯಲ್ಲಿ ಬಂಗಾಳದ ಏಳು ಜಿಲ್ಲೆಗಳನ್ನು ಹೊಂದಿದೆ. ನಾಲ್ಕು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳು 14 ದಿನದಿಂದ ಒಂದೇ ವೈರಸ್ ಪ್ರಕರಣ ವರದಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಮತ್ತು ದೆಹಲಿಗೆ ಕೇಂದ್ರದ ಯಾವುದೇ ತಂಡಗಳನ್ನು ಯಾಕೆ ಕಳುಹಿಸಲಿಲ್ಲ ಎಂದು ರಾಜ್ಯದ ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ ಪ್ರಶ್ನಿಸಿದೆ.

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಆರೋಪಿಸಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರವು ತಂಡವನ್ನು ಕಳುಹಿಸಿದೆ. ಅದು ಮಧ್ಯಪ್ರದೇಶವಾಗಿದೆ. ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವ ಗುಜರಾತ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಅಲ್ಲಿ 1939 ಪ್ರಕರಣಗಳು ಹಾಗೂ 71 ಸಾವುಗಳು ಸೇರಿದಂತೆ ದೇಶದಲ್ಲಿ ಮೂರನೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳಿವೆ.

ಪರಿಸ್ಥಿತಿ ಗಂಭೀರವಾಗಿದೆ ಹಾಗೂ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿರುವ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದೆ ಎಂದು ಕೇಂದ್ರ ಹೇಳಿಕೊಂಡಿದೆ. ರಾಜ್ಯ ಆಡಳಿತವು ಕೊರೊನಾ ವೈರಸ್‌ ಪ್ರಕರಣಗಳನ್ನು ಕಡಿಮೆ ವರದಿ ಮಾಡಿದ ಉದಾಹರಣೆಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿ, ನಿರ್ದಿಷ್ಟವಾಗಿ ಬಂಗಾಳವನ್ನು ಉಲ್ಲೇಖಿಸದೆ ನಿಜವಾದ ಸಂಖ್ಯೆಯ ಕೊರೊನಾ ವೈರಸ್ ರೋಗಿಗಳನ್ನು ಮರೆಮಾಡಿದೆ ಎಂದು ಆರೋಪಿಸಲಾಗಿದೆ.

ಗೃಹ ಸಚಿವಾಲಯದ ಆಂತರಿಕ ಮೌಲ್ಯಮಾಪನವು ಬಂಗಾಳದಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ ವರದಿಯಾಗುವುದಕ್ಕಿಂತ ಹೆಚ್ಚಾಗಿದೆ ಎಂದು ಪರಿಗಣಿಸುತ್ತದೆ; ಸಾವಿನ ಕಾರಣವನ್ನು ತಪ್ಪಾಗಿ ವರದಿ ಮಾಡಲಾಗಿದೆಯೆಂದು ಅದು ಹೇಳಿದೆ.

ಲಾಕ್‌ಡೌನ್ ಕ್ರಮಗಳ ಅನುಷ್ಠಾನ, ಅಗತ್ಯ ಸರಕುಗಳ ಪೂರೈಕೆ, ಸಾಮಾಜಿಕ ದೂರ, ಆರೋಗ್ಯ ಮೂಲಸೌಕರ್ಯ, ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಪರಿಹಾರ ಶಿಬಿರಗಳ ಪರಿಸ್ಥಿತಿಗಳ ಕುರಿತು ದೂರುಗಳ ಬಗ್ಗೆ ಅಂತರ್‌-ಸಚಿವಾಲಯದ ತಂಡಗಳು ಗಮನ ಹರಿಸಲಿವೆ ಎಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ: ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ವಿಶಮ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...