Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...