Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...