Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...