Homeಮುಖಪುಟ‘ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯ ವಿರೋಧಿ’ - ರಾಹುಲ್ ಗಾಂಧಿ

‘ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯ ವಿರೋಧಿ’ – ರಾಹುಲ್ ಗಾಂಧಿ

- Advertisement -
- Advertisement -

ತಾನು ಏಕಸ್ವಾಮ್ಯ ವಿರೋಧಿಯೆ ಹೊರತು ವ್ಯಾಪಾರ ವಿರೋಧಿ ಅಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ದಿನದ ಹಿಂದೆ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ಅವರ ‘ಎ ನ್ಯೂ ಡೀಲ್ ಫಾರ್ ಇಂಡಿಯನ್ ಬ್ಯುಸಿನೆಸ್’ ಎಂಬ ಶೀರ್ಷಿಕೆಯ ಸಂಪಾದಕೀಯ ಲೇಖನಕ್ಕೆ ವ್ಯಕ್ತವಾದ ಟೀಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿನ ನನ್ನ ವಿರೋಧಿಗಳು ನನ್ನನ್ನು ವ್ಯಾಪಾರ ವಿರೋಧಿ ಎಂದು ಬಿಂಬಿಸಿದ್ದಾರೆ. ಆದರೆ ನಾನು ಕೆಲವೆ ಕೆಲವರು ಮಾರುಕಟ್ಟೆಯನ್ನು ನಿಯಂತ್ರಿಸುವುದರ ವಿರೋಧಿ. ಒಬ್ಬ ಅಥವಾ ಎರಡು ಅಥವಾ ಮೂರು ಅಥವಾ ಐದು ಜನರ ವ್ಯವಹಾರದ ಪ್ರಾಬಲ್ಯವನ್ನು ನಾನು ವಿರೋಧಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ವ್ಯವಹಾರಗಳಿಗೆ ಮುಕ್ತ ಮತ್ತು ನ್ಯಾಯಯುತ ಸ್ಥಳವಿದ್ದರೆ ಆರ್ಥಿಕತೆಯು ಅಭಿವೃದ್ಧಿ ಹೊಂದುತ್ತದೆ ಎಂದು ರಾಹುಲ್ ಹೇಳಿದ್ದು, ತಾನು ”ಉದ್ಯೋಗಗಳ ಪರ, ವ್ಯಾಪಾರದ ಪರ, ನಾವೀನ್ಯತೆ ಪರ, ಸ್ಪರ್ಧೆಯ ಪರ” ಎಂದು ಹೇಳಿದ್ದಾರೆ.

ದಿಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯ ಬರಹದಲ್ಲಿ ರಾಹುಲ್ ಗಾಂಧಿ ಅವರು, “ಎಲ್ಲಾ ವ್ಯವಹಾರಗಳ ಖರ್ಚಿನಲ್ಲಿ ಒಂದೇ ವ್ಯಾಪಾರವನ್ನು ಬೆಂಬಲಿಸಲು ಸರ್ಕಾರ ಅನುಮತಿ ನೀಡಬಾರದು. ನಮ್ಮ ಸಂಸ್ಥೆಗಳು ಇನ್ನು ಮುಂದೆ ನಮ್ಮ ಜನರದ್ದಾಗಿ ಇರಲ್ಲ. ಅವರು ಏಕಸ್ವಾಮ್ಯ ವ್ಯಾಪಾರಿಗಳಿಗೆ ಹರಾಜು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಲೇಖನಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ “ಮತ್ತೊಂದು ಆಧಾರರಹಿತ ಆರೋಪ” ಎಂದು ಕರೆದಿದೆ. “ಮ್ಯಾಚ್-ಫಿಕ್ಸಿಂಗ್ ಏಕಸ್ವಾಮ್ಯ ಗುಂಪುಗಳು ವರ್ಸಸ್ ಫೇರ್-ಪ್ಲೇ ವ್ಯವಹಾರಗಳು” ಸರಳವಾಗಿ ದಾರಿತಪ್ಪಿಸುವಂತಿದೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಪಕ್ಷವು ಹೇಳಿದೆ.

ಬುಧವಾರದ ಸಂಪಾದಕೀಯ ಬರಹದಲ್ಲಿ, ಏಕಸ್ವಾಮ್ಯ ಸಂಸ್ಥೆಗಳು “ಬೃಹತ್ ಸಂಪತ್ತನ್ನು” ಸಂಗ್ರಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೇಶದ ಉಳಿದ ಜನಸಂಖ್ಯೆ ಹೆಚ್ಚು ಅಸಮಾನತೆ ಹೊಂದಿದ್ದು, ಅವರ ವಿರುದ್ಧದ ಅನ್ಯಾಯ ಹೆಚ್ಚಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ಏಕಸ್ವಾಮ್ಯದ ಕಂಪೆನಿಗಳ ವಿರುದ್ಧ ಸ್ಪರ್ಧಿಸಲು ಬೇರೆ ಸಂಸ್ಥೆಗಳು ಕೇವಲ ಅವರ ಜೊತೆಗೆ ಮಾತ್ರವಲ್ಲ, ‘ಭಾರತದ ಆಡಳಿತ ಯಂತ್ರದ’ ಜೊತೆಗೆ ಕೂಡಾ ಸ್ಪರ್ಧಿಸಬೇಕು ಎಂದು ಅವರು ಹೇಳಿದ್ದಾರೆ.

ಲೇಖನದಲ್ಲಿ ರಾಹುಲ್ ಗಾಂಧಿ ಯಾವ ಉದ್ಯಮಿಯನ್ನು ಉಲ್ಲೇಖಿಸಿ ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಒಡೆತನದ ಕಂಪೆನಿಗಳಿಗೆ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ಆಗಾಗ್ಗೆ ಆರೋಪಿಸುತ್ತಲೆ ಇದೆ.

ಅದಾನಿ ಗ್ರೂಪ್ ಭಾರತದ ನಾಗರಿಕ ವಿಮಾನಯಾನ, ಹಡಗು, ಸಿಮೆಂಟ್, ವಿದ್ಯುತ್ ಮತ್ತು ರಕ್ಷಣಾ ಉದ್ಯಮಗಳಲ್ಲಿ ಏಕಸ್ವಾಮ್ಯವನ್ನು ಪಡೆಯಲು ಪ್ರಯತ್ನಿಸುತ್ತಿರುವ “ಸಿಂಡಿಕೇಟ್” ನಿಂದ ಲಾಭ ಪಡೆಯುತ್ತಿದೆ ಎಂದು ರಾಹುಲ್ ಗಾಂಧಿ ಅಕ್ಟೋಬರ್ 29 ರಂದು ಆರೋಪಿಸಿದ್ದರು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...