Homeಮುಖಪುಟ‘ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯ ವಿರೋಧಿ’ - ರಾಹುಲ್ ಗಾಂಧಿ

‘ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯ ವಿರೋಧಿ’ – ರಾಹುಲ್ ಗಾಂಧಿ

- Advertisement -
- Advertisement -

ತಾನು ಏಕಸ್ವಾಮ್ಯ ವಿರೋಧಿಯೆ ಹೊರತು ವ್ಯಾಪಾರ ವಿರೋಧಿ ಅಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ದಿನದ ಹಿಂದೆ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ಅವರ ‘ಎ ನ್ಯೂ ಡೀಲ್ ಫಾರ್ ಇಂಡಿಯನ್ ಬ್ಯುಸಿನೆಸ್’ ಎಂಬ ಶೀರ್ಷಿಕೆಯ ಸಂಪಾದಕೀಯ ಲೇಖನಕ್ಕೆ ವ್ಯಕ್ತವಾದ ಟೀಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿನ ನನ್ನ ವಿರೋಧಿಗಳು ನನ್ನನ್ನು ವ್ಯಾಪಾರ ವಿರೋಧಿ ಎಂದು ಬಿಂಬಿಸಿದ್ದಾರೆ. ಆದರೆ ನಾನು ಕೆಲವೆ ಕೆಲವರು ಮಾರುಕಟ್ಟೆಯನ್ನು ನಿಯಂತ್ರಿಸುವುದರ ವಿರೋಧಿ. ಒಬ್ಬ ಅಥವಾ ಎರಡು ಅಥವಾ ಮೂರು ಅಥವಾ ಐದು ಜನರ ವ್ಯವಹಾರದ ಪ್ರಾಬಲ್ಯವನ್ನು ನಾನು ವಿರೋಧಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ವ್ಯವಹಾರಗಳಿಗೆ ಮುಕ್ತ ಮತ್ತು ನ್ಯಾಯಯುತ ಸ್ಥಳವಿದ್ದರೆ ಆರ್ಥಿಕತೆಯು ಅಭಿವೃದ್ಧಿ ಹೊಂದುತ್ತದೆ ಎಂದು ರಾಹುಲ್ ಹೇಳಿದ್ದು, ತಾನು ”ಉದ್ಯೋಗಗಳ ಪರ, ವ್ಯಾಪಾರದ ಪರ, ನಾವೀನ್ಯತೆ ಪರ, ಸ್ಪರ್ಧೆಯ ಪರ” ಎಂದು ಹೇಳಿದ್ದಾರೆ.

ದಿಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯ ಬರಹದಲ್ಲಿ ರಾಹುಲ್ ಗಾಂಧಿ ಅವರು, “ಎಲ್ಲಾ ವ್ಯವಹಾರಗಳ ಖರ್ಚಿನಲ್ಲಿ ಒಂದೇ ವ್ಯಾಪಾರವನ್ನು ಬೆಂಬಲಿಸಲು ಸರ್ಕಾರ ಅನುಮತಿ ನೀಡಬಾರದು. ನಮ್ಮ ಸಂಸ್ಥೆಗಳು ಇನ್ನು ಮುಂದೆ ನಮ್ಮ ಜನರದ್ದಾಗಿ ಇರಲ್ಲ. ಅವರು ಏಕಸ್ವಾಮ್ಯ ವ್ಯಾಪಾರಿಗಳಿಗೆ ಹರಾಜು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಲೇಖನಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ “ಮತ್ತೊಂದು ಆಧಾರರಹಿತ ಆರೋಪ” ಎಂದು ಕರೆದಿದೆ. “ಮ್ಯಾಚ್-ಫಿಕ್ಸಿಂಗ್ ಏಕಸ್ವಾಮ್ಯ ಗುಂಪುಗಳು ವರ್ಸಸ್ ಫೇರ್-ಪ್ಲೇ ವ್ಯವಹಾರಗಳು” ಸರಳವಾಗಿ ದಾರಿತಪ್ಪಿಸುವಂತಿದೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಪಕ್ಷವು ಹೇಳಿದೆ.

ಬುಧವಾರದ ಸಂಪಾದಕೀಯ ಬರಹದಲ್ಲಿ, ಏಕಸ್ವಾಮ್ಯ ಸಂಸ್ಥೆಗಳು “ಬೃಹತ್ ಸಂಪತ್ತನ್ನು” ಸಂಗ್ರಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೇಶದ ಉಳಿದ ಜನಸಂಖ್ಯೆ ಹೆಚ್ಚು ಅಸಮಾನತೆ ಹೊಂದಿದ್ದು, ಅವರ ವಿರುದ್ಧದ ಅನ್ಯಾಯ ಹೆಚ್ಚಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ಏಕಸ್ವಾಮ್ಯದ ಕಂಪೆನಿಗಳ ವಿರುದ್ಧ ಸ್ಪರ್ಧಿಸಲು ಬೇರೆ ಸಂಸ್ಥೆಗಳು ಕೇವಲ ಅವರ ಜೊತೆಗೆ ಮಾತ್ರವಲ್ಲ, ‘ಭಾರತದ ಆಡಳಿತ ಯಂತ್ರದ’ ಜೊತೆಗೆ ಕೂಡಾ ಸ್ಪರ್ಧಿಸಬೇಕು ಎಂದು ಅವರು ಹೇಳಿದ್ದಾರೆ.

ಲೇಖನದಲ್ಲಿ ರಾಹುಲ್ ಗಾಂಧಿ ಯಾವ ಉದ್ಯಮಿಯನ್ನು ಉಲ್ಲೇಖಿಸಿ ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಒಡೆತನದ ಕಂಪೆನಿಗಳಿಗೆ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ಆಗಾಗ್ಗೆ ಆರೋಪಿಸುತ್ತಲೆ ಇದೆ.

ಅದಾನಿ ಗ್ರೂಪ್ ಭಾರತದ ನಾಗರಿಕ ವಿಮಾನಯಾನ, ಹಡಗು, ಸಿಮೆಂಟ್, ವಿದ್ಯುತ್ ಮತ್ತು ರಕ್ಷಣಾ ಉದ್ಯಮಗಳಲ್ಲಿ ಏಕಸ್ವಾಮ್ಯವನ್ನು ಪಡೆಯಲು ಪ್ರಯತ್ನಿಸುತ್ತಿರುವ “ಸಿಂಡಿಕೇಟ್” ನಿಂದ ಲಾಭ ಪಡೆಯುತ್ತಿದೆ ಎಂದು ರಾಹುಲ್ ಗಾಂಧಿ ಅಕ್ಟೋಬರ್ 29 ರಂದು ಆರೋಪಿಸಿದ್ದರು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...