Homeಕರ್ನಾಟಕಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

- Advertisement -
- Advertisement -

ಇದೇ ಅಂಕಣದಲ್ಲಿ ಹಲವು ಬಾರಿ ಹೊಸ ಮಾಧ್ಯಮದ ಕುರಿತು ಬರೆಯಲಾಗಿದೆ. ಪರ್ಯಾಯ ಮಾಧ್ಯಮ ಎಂದರೆ, ಅದು ಈಗಿನ ಟಿವಿ ಚಾನೆಲ್‌ಗಳು ಅಥವಾ ಪತ್ರಿಕೆಗಳಿಗಿಂತ ಹೂರಣ ಭಿನ್ನವಾಗಿದ್ದು ಸ್ವರೂಪ ಹಳೆಯದೇ ಇರುವುದಲ್ಲ ಎಂಬುದನ್ನು ಇಲ್ಲಿ ಪದೇ ಪದೇ ಪ್ರಸ್ತಾಪಿಸಲಾಗಿದೆ. ಇಂದಿನ ಮಾಧ್ಯಮಗಳ ಸ್ವರೂಪಕ್ಕೂ, ದೇಶದ ಇಂದಿನ ಆಡಳಿತದ ಸ್ವಭಾವಕ್ಕೂ ತಾಳೆಯಾದರೆ ಮಾತ್ರ ಅವು ಉಳಿದುಕೊಳ್ಳಲು ಸಾಧ್ಯವಿರುವ ಸ್ಥಿತಿಯಿದೆ. ಹಾಗಾಗಿಯೇ ಈಗಿನ ಮಾಧ್ಯಮಗಳ ಪ್ರಗತಿಪರ ನಕಲನ್ನು ಮಾಡುತ್ತೇವೆಂದು ಹೊರಟವರೂ ಚಿಂದಿಯಾಗಿ ಹೋಗುತ್ತಾರೆ, ಹೋಗಿದ್ದಾರೆ. ಅದಕ್ಕೆ ಪತ್ರಿಕೋದ್ಯಮ ಕಾರ್ಯನಿರ್ವಹಿಸಲು ಬೇಕಾದ ಎಕನಾಮಿಕ್ಸೂ ಕಾರಣ; ಹೊಸ ಸಂದರ್ಭವೂ ಕಾರಣ.

ಕ್ರೌಡ್ ಫಂಡಿಂಗ್ (ಜನರಿಂದಲೇ ಹಣ ಸಂಗ್ರಹಿಸುವುದರ) ಮೂಲಕವೇ ಪರ್ಯಾಯ ಮಾಧ್ಯಮ ಸಂಸ್ಥೆ ನಡೆಸುತ್ತೇವೆಂದು ಕೆಲವು ಹಿರಿಯ ಪತ್ರಕರ್ತರು ಅಖಿಲ ಭಾರತ ಮಟ್ಟದಲ್ಲೇ ದೊಡ್ಡ ಪ್ರಯತ್ನ ನಡೆಸಿದ್ದರು. ಅದೂ ಮುಂದುವರೆಯಲಿಲ್ಲ. ಇಂದು ಕ್ರೌಡ್‌ ಫಂಡಿಂಗ್‌ ಮಾತ್ರವಲ್ಲದೇ ಕ್ರೌಡ್ ಬೇಸ್ಡ್ ಆದ ಮತ್ತು ಹೊಸದೇ ಸ್ವರೂಪದ ಮಾಧ್ಯಮ ಮಾತ್ರ ಉಳಿದುಕೊಳ್ಳಲು ಸಾಧ್ಯ. ಜನರನ್ನು ಆ ಪಾಟಿ ಸಂಘಟಿಸಿ ಪರಿಣಾಮಕಾರಿಯಾಗಿ ನೆಲೆ ನಿಂತು ಬೆಳವಣಿಗೆಯ ದಿಕ್ಕಿನಲ್ಲಿರುವ ಆಂದೋಲನವೂ ಇಲ್ಲದಾಗ, ಜನರನ್ನು ಆಧರಿಸಿದ ಮಾಧ್ಯಮ ಹೇಗೆ ಬೆಳೆಯಲು ಸಾಧ್ಯ ಎಂಬುದು ಮುಂದಿನ ಪ್ರಶ್ನೆ.

ಪತ್ರಿಕೆ ಮತ್ತು ಟಿವಿಗಳಷ್ಟೇ ಅಲ್ಲದೇ ಸಾಮಾಜಿಕ ಮಾಧ್ಯಮಗಳೂ ಸಹಾ ಇಂದು ದುಷ್ಟ ಹಿತಾಸಕ್ತಿಗಳ ಕೈಯ್ಯಲ್ಲಿನ ಶಕ್ತಿಶಾಲಿಯಾದ ಆಯುಧವಾಗಿ ಝಳಪಿಸಲ್ಪಡುತ್ತಿವೆ. ಆದರೆ ಅದು ಕೇವಲ ಉಪಕರಣ ಮಾತ್ರವಾಗಿಲ್ಲ; ಬದಲಿಗೆ ಈ ಮೂರನ್ನೂ ಸೇರಿಸಿ ಜನರ ಮನೋಲೋಕವನ್ನು ಬೇಕೆಂದ ಹಾಗೆ ರೂಪಿಸುವ ದೊಡ್ಡ ಯಂತ್ರಾಂಗವನ್ನು ನಿರ್ಮಿಸಲಾಗಿದೆ. ಹಲವರು ಭಾವಿಸುತ್ತಿರುವ ರೀತಿ ಈ ಯಂತ್ರಾಂಗವನ್ನು ಮೋದಿ ಬ್ರ್ಯಾಂಡ್ ರಾಜಕಾರಣ ಅಥವಾ ಅವರ ಟೀಂ ರೂಪಿಸಿದ್ದಲ್ಲ. ಹಾಗೆ ನೋಡಿದರೆ ಆ ಬ್ರ್ಯಾಂಡ್‌ ರಾಜಕಾರಣವನ್ನು ಮತ್ತು ಮೋದಿ ಟೀಂ ಅನ್ನು ರೂಪಿಸಲು ಈ ಯಂತ್ರಾಂಗವೇ ಕೊಡುಗೆ ಕೊಡುಗೆ ನೀಡಿದೆ. ಇದು ಈ ಕಾಲದ ಒಂದು ವಿದ್ಯಮಾನ; ಜಾಗತಿಕ ವಿದ್ಯಮಾನ. ಒಂದು ಹಂತದ ಬೆಳವಣಿಗೆಯ ನಂತರ ಸಾಮಾಜಿಕ ಜಾಲತಾಣಗಳನ್ನೂ ಸಹಾ ತಮಗೆ ಬೇಕಾದ ಹಾಗೆ ಆಡಿಸಲು, ಬಳಸಿಕೊಳ್ಳಲು ಮೋದಿ ಥರದವರು ಚೆನ್ನಾಗಿ ಅರಿತಿದ್ದಾರೆ. ಅದೊಂದು ದೊಡ್ಡ ಕಾರ್ಪೋರೇಟ್‌ ಉದ್ದಿಮೆಯಾಗಿದೆ. ಹಾಗಾಗಿ ಕೇವಲ ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡು ಪರ್ಯಾಯವನ್ನು ಕಟ್ಟುವುದೂ ಸಾಧ್ಯವಿಲ್ಲ.


ಇದನ್ನೂ ಓದಿ: ಮಾಧ್ಯಮಗಳೇ ಸಂದೇಶವಾದರೆ ಸಂವಿಧಾನದ ಆಶಯಗಳೇ ಪತನ!


ಹಾಗಾಗಿ ನಾವು ಈ ಕಾಲಘಟ್ಟಕ್ಕೆ ಸೂಕ್ತವಾದ ಮಾಧ್ಯಮವನ್ನೇ ನಾವು ಕಟ್ಟಿಕೊಳ್ಳಬೇಕು. ಇದಕ್ಕಾಗಿ ಜಗತ್ತಿನ ವಿವಿಧೆಡೆಗಳ ಹಲವು ಪ್ರಯೋಗಗಳಿಂದಲೂ ಕಲಿಯಬೇಕು.. ಇದುವರೆಗಿನ ಮಾಧ್ಯಮಗಳೆಲ್ಲದರಿಂದಲೂ (ಪ್ರಿಂಟ್‌, ಟಿವಿ ಮತ್ತು ಸಾಮಾಜಿಕ ಮಾಧ್ಯಮಗಳಿಂದ) ಪಡೆದುಕೊಳ್ಳಲು ಇರುತ್ತದೆ, ಅವನ್ನೂ ಬಳಸಿಕೊಳ್ಳಬೇಕಿದೆ. ಆದರೆ ಅದ್ಯಾವುದೂ ಹೊಸ ಕಾಲದ ಮಾಧ್ಯಮ ಆಗಿರುವುದಿಲ್ಲ.

ಸಾಮಾಜಿಕ ಜಾಲತಾಣಗಳು ಅಸ್ತಿತ್ವಕ್ಕೆ ಬಂದ ನಂತರ ಮತ್ತು ಪ್ರಜಾತಂತ್ರವು ಈ ಪ್ರಮಾಣಕ್ಕೆ ವಿಸ್ತರಣೆಯಾದ ನಂತರ (ಪ್ರಜಾತಂತ್ರವು ಇನ್ನೊಂದು ಅರ್ಥದಲ್ಲಿ ಕುಗ್ಗುತ್ತಿದೆ ಎಂಬುದು ಬೇರೆ ಚರ್ಚೆ) ಮಾಧ್ಯಮದ ಅಸ್ತಿತ್ವದ ವಿಚಾರದಲ್ಲಿ ಒಂದು ದೊಡ್ಡ ಬದಲಾವಣೆ ಆಗಿದೆ. ಹೊಸ ಕಾಲದ ಮಾಧ್ಯಮವು ಪ್ರತ್ಯೇಕ ಅಸ್ತಿತ್ವವನ್ನು ಹೊಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಹೊಸ ಬಗೆಯ ಮಾಧ್ಯಮಕ್ಕೂ, ಹೊಸ ಕಾಲದ ರಾಜಕೀಯ ಆಂದೋಲನಕ್ಕೂ ಅವಿನಾಭಾವ ಸಂಬಂಧವಿರುತ್ತದೆ. ಅವು ಪ್ರತ್ಯೇಕವಾಗಿರಲು ಸಾಧ್ಯವಿಲ್ಲ. ಅಂತಹ ಆಂದೋಲನವನ್ನು ಕಟ್ಟುವುದೆಂದರೆ ಹೊಸ ಮಾಧ್ಯಮವನ್ನೂ ಕಟ್ಟಿದಂತೆಯೇ. ಹಾಗೆಯೇ ಇದಿಲ್ಲದೇ ಅದೂ ಇಲ್ಲ. ಮುಂದಿನ ದಿನಗಳಲ್ಲಿ ಕೇಂದ್ರೀಕೃತವಾದ, ಒಂದು ನಿರ್ದಿಷ್ಟ ಸಣ್ಣ ಗುಂಪಿನ ಹಿತಾಸಕ್ತಿಯನ್ನು ಕಾಯುವ ಪ್ರಗತಿಪರ ಜನಚಳವಳಿ ಸಾಧ್ಯವಿಲ್ಲ. ಹಾಗೆಯೇ ಕಳೆದ ಶತಮಾನದಲ್ಲಿ ಘನೀಭವಿಸಿದ ಯಾವುದೇ ಸಿದ್ಧಾಂತದ ಘನ ಎರಕದಲ್ಲೇ ಕೆಲಸ ಮಾಡುವ ಒಂದು ಚಳವಳಿಯೂ ಇಂದು ಸಾಧ್ಯವಿಲ್ಲ.

ಅದೇ ರೀತಿ ಕೇಂದ್ರೀಕೃತವಾದ ಒಂದು ಮಾಧ್ಯಮ ಸಂಸ್ಥೆಯು ಹೊಸ ಮಾಧ್ಯಮ ಆಂದೋಲನವನ್ನು ಕಟ್ಟುವುದೂ ಸಾಧ್ಯವಿಲ್ಲ.

ಇದುವರೆಗಿನ ಎಲ್ಲವೂ ತಮ್ಮ ಹಿತಾಸಕ್ತಿಗೆ ಪೂರಕವಾಗಿಲ್ಲವೆಂದೆನಿಸಿ ಅವನ್ನು ಕಿತ್ತೊಗೆಯುವಾಗ ಜನರು ತಮ್ಮ ಹಿತಾಸಕ್ತಿಯನ್ನು ಅತ್ಯಂತ ಹೆಚ್ಚು ಮಣ್ಣುಗೂಡಿಸುವ ನಾಯಕರಿಗೆ/ಪಕ್ಷಕ್ಕೆ ಓಟು ಹಾಕಿದಂತೆಯೇ, ಅವರ ಹಿತಾಸಕ್ತಿಗೆ ಅತ್ಯಂತ ವಿರುದ್ಧವಾದ ಮಾಧ್ಯಮದ ಟಿಆರ್‌ಪಿಯನ್ನೂ ಹೆಚ್ಚಿಸುತ್ತಾ ಕೂತಿದ್ದಾರೆ. ಆಳದಲ್ಲಿ ಅಪ್ಪಟ ಮಹಿಳಾ ವಿರೋಧಿಯಾದ ಟಿವಿ ಸೀರಿಯಲ್ಲುಗಳನ್ನು ಮಹಿಳೆಯರೇ ಹೆಚ್ಚು ನೋಡುವುದು ಅದಕ್ಕೆ ಒಂದು ಉದಾಹರಣೆ ಅಷ್ಟೇ. ತಮ್ಮ ವೀಕ್ಷಣೆಯನ್ನೇ ಒಂದು ಸರಕನ್ನಾಗಿ ಬಳಸುವ ಮಾಧ್ಯಮಸಂಸ್ಥೆಯು ತಮ್ಮ ವಿರುದ್ಧ ಸಂಚು ರೂಪಿಸುತ್ತಿರುವುದನ್ನು ಅರಿಯುತ್ತಿಲ್ಲವಷ್ಟೇ ಅಲ್ಲ, ತಾವೂ ಮೊಬೈಲ್ ಸ್ಕ್ರೀನ್‌ಅನ್ನು ಒತ್ತುತ್ತಾ ಆ ಮಾಧ್ಯಮ ಸಂಸ್ಥೆಯ ಉಪಕರಣವಾಗಿಯೂ ಕೆಲಸ ಮಾಡುತ್ತಿದ್ದಾರೆ. ಇದನ್ನು ಬದಲಿಸಬೇಕೆಂದರೆ ಅವರವರ ಹಿತಾಸಕ್ತಿಯ ಕುರಿತು ರೀ ಓರಿಯೆಂಟ್‌ ಮಾಡುವ ಅಗತ್ಯ ಇದೆ. ಇದು ಮಾಧ್ಯಮ ಮತ್ತು ರಾಜಕೀಯ ಆಂದೋಲನದ ಜಂಟಿ ಕರ್ತವ್ಯವಾಗಿದೆ.

ಇದರ ಅರ್ಥ ಇಷ್ಟು. ಜನರ ಹಿತಾಸಕ್ತಿಯನ್ನು ಅತ್ಯಂತ ಸರಳ ರೀತಿಯಲ್ಲಿ ಅವರಿಗೇ ಅರ್ಥ ಮಾಡಿಸುವುದು ಒಂದು ಪೂರ್ವಶರತ್ತು. ಎರಡನೆಯದಾಗಿ ಇಂದು ಹೊಸ ಮಾಧ್ಯಮವನ್ನು ಕಟ್ಟುವುದೆಂದರೆ ಅದೊಂದು ಆಂದೋಲನ. ಜನರೇ ಸೃಷ್ಟಿಸುವ ಸುದ್ದಿಗಳನ್ನು ಸತ್ಯದ, ಸಮಾನತೆಯ ಮೌಲ್ಯದ ಮತ್ತು ಪ್ರೀತಿಯ ನೆಲೆಯಲ್ಲಿ ರೀ-ಪ್ಯಾಕೇಜ್ ಮಾಡಿ ಕೊಡುವುದಷ್ಟೇ ಮಾಧ್ಯಮ ಸಂಸ್ಥೆಯ ಕೆಲಸ. ಈ ರೀತಿ ರೀಪ್ಯಾಕೇಜ್‌ ಆದ ತಮ್ಮ ಹಿತಾಸಕ್ತಿಯನ್ನು ಕಾಪಾಡುವ ಸುದ್ದಿಗಳನ್ನು ಹರಡುವ ಕೆಲಸವನ್ನು ಅದೇ ಜನರೇ ಮಾಡುವ ಯಂತ್ರಾಂಗದ ಆರಂಭಿಕ ರಚನೆಗಳನ್ನು ಕಟ್ಟಲು ಒಂದು ತಂಡ ಕೆಲಸ ಮಾಡಬೇಕು. ಇಷ್ಟನ್ನು ಬಿಟ್ಟರೆ ಆಂದೋಲನವನ್ನು ರೂಪಿಸುವುದು ಜನರ ಕೆಲಸವೇ ಹೊರತು ಮಾಧ್ಯಮತಂಡದ್ದಲ್ಲ.

ಅದರ ಜೊತೆಗೆ ಈ ಸದ್ಯದಲ್ಲಿ ಸುಳ್ಳುಗಳನ್ನು ಬಯಲುಗೊಳಿಸುವುದು, ಸುಳ್ಳುಬುರುಕರ ಮುಂದಿನ ನಡೆಗಳನ್ನು ಮೊದಲೇ ಊಹಿಸಿ ಅದಕ್ಕೆ ಬೇಕಾದ ತಯಾರಿ ಮಾಡುವುದು, ಫೇಕ್ ಮಾಧ್ಯಮವನ್ನು ಅಮಾನ್ಯಗೊಳಿಸುವುದು ಮಾಡಬೇಕಾಗುತ್ತದೆ. ಆದರೆ, ಇರುವ ಸವಾಲು ಅದಲ್ಲ; ಸವಾಲಿರುವುದು ಕೋಟಿಗಟ್ಟಲೇ ಜನರಿಗೆ ನಿರಂತರವಾಗಿ ವಿಷಯ ತಲುಪಿಸುವ ಜಾಲವನ್ನು ಕಟ್ಟುವುದು ಹಾಗೂ ಪ್ರತೀ ಮೂಲೆಯಲ್ಲೂ ರೂಪುಗೊಳ್ಳುವ ಮಾಧ್ಯಮ ಕಾರ್ಯಕರ್ತರನ್ನು ನಿಭಾಯಿಸುವುದು. ವ್ಯಕ್ತಿ ಕೇಂದ್ರಿತ ಜಗತ್ತಿನಲ್ಲಿ, ತಮ್ಮ ಮುಖವೇ ಮುಂದೆ ಇರಬೇಕು ಎಂಬ ನಾರ್ಸಿಸಂಅನ್ನು ಸಾಮಾಜಿಕ ಜಾಲತಾಣಗಳೂ ಬೆಳೆಸಿರುವುದರಿಂದ ಅದನ್ನು ಮೀರುವುದು ಸುಲಭವಲ್ಲ. ಇಂತಹ ತಂಡದೊಳಗೇ ಬರುವ ಈಗೋ ಸಮಸ್ಯೆಗಳನ್ನು ನಿಭಾಯಿಸುವುದೂ ದೊಡ್ಡ ಚಾಲೆಂಜ್. ಆ ಸವಾಲನ್ನು ನಾವು ಎದುರಿಸುವುದಾದಲ್ಲಿ ಇಂದಿಗೂ ಬೃಹತ್‌ ಜನ ಮಾಧ್ಯಮವನ್ನು ಕಟ್ಟಲು ಬೇಕಾದ ಜನರು ಈಗಾಗಲೇ ಸಮಾಜದಲ್ಲಿದ್ದಾರೆ.

ಅಮೆರಿಕಾ ಯೂರೋಪ್‌ ಮಾತ್ರವಲ್ಲದೇ, ಲ್ಯಾಟಿನ್‌ ಅಮೆರಿಕಾ ದೇಶಗಳು ಹಾಗೂ ನಮ್ಮ ದೇಶದಲ್ಲೂ ನಡೆಯುತ್ತಿರುವ ಪ್ರಯೋಗಗಳ ಆಧಾರದ ಮೇಲೆ ಹೊಸ ಮಾಧ್ಯಮದ ಪರಿಕಲ್ಪನೆಯ ಈ ಚೌಕಟ್ಟನ್ನು ನಿಮ್ಮ ಮುಂದಿಡಲಾಗಿದೆ.


ಇದನ್ನೂ ಓದಿ:  ಮಾಧ್ಯಮಗಳೇ, ಧರ್ಮವೀರರೇ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?


ಈಗ ಅಂತಹ ಬೃಹತ್‌ (ಹೊಸ) ಮಾಧ್ಯಮ ನೆಟ್ವರ್ಕ್‌ಗೆ ಬೇಕಾದ ಆರಂಭಿಕ ರಚನೆಗಳನ್ನು ಕಟ್ಟುವ, ಸುದ್ದಿಯ ಸಂಸ್ಕರಣೆ ಮತ್ತು ಜನರಿಂದ ಬರುವ ಸುದ್ದಿಗಳನ್ನು ಸಂಸ್ಕರಿಸುವ ಘಟಕವನ್ನು ಕಟ್ಟುವ ಕೆಲಸಕ್ಕೆ ಬೇಕಾದ ಬುನಾದಿಯನ್ನು ಕಟ್ಟಲು ನಾವು ಪ್ರಯತ್ನಿಸುತ್ತಿದ್ದೇವೆ. ಲಕ್ಷಗಟ್ಟಲೇ ಜನರನ್ನು ಒಮ್ಮೆಗೇ ತಲುಪುವ ನೆಟ್‌ವರ್ಕ್ ರೂಪುಗೊಳ್ಳುತ್ತಿದೆ. ವಿಕೇಂದ್ರೀಕೃತವಾಗಿ, ಸ್ವಾಯತ್ತವಾಗಿ ಇದರ ಜೊತೆಗೂಡಬಹುದಾದ ಸಹಯೋಗಿಗಳ ಜೊತೆಗೆ ಒಪ್ಪಂದಗಳು ಆಗುತ್ತಿವೆ. ಕೇಂದ್ರ ತಂಡದ ಜೊತೆಗೆ ಕೆಲಸ ಮಾಡಲು ಸಿದ್ಧವಿರುವವರ ವಾಲಂಟಿಯರ್‌ಗಳ ಹುಡುಕಾಟದಲ್ಲಿದ್ದೇವೆ.

ಈ ಹೊಸ ಮಾಧ್ಯಮದ ಭಾಗವಾಗಿ ನೀವಿರಲು ಸಾಧ್ಯವೇ?

ಈ ಬಗ್ಗೆ ಸಂದೇಹ ಬೇಡ. ಇದನ್ನು ಒಂದು ದೊಡ್ಡ ಆಂದೋಲನವಾಗಿ ಕಟ್ಟಬೇಕಿರುವುದರಿಂದ ಇದಕ್ಕೆ ಎಷ್ಟು ಜನರಿದ್ದರೂ ಸಾಲದು. ಕನಿಷ್ಠ ಶಿಸ್ತು, ವ್ಯಕ್ತಿಗತ ಕನ್ನಡಕಗಳನ್ನು ಪಕ್ಕಕ್ಕಿಟ್ಟು ಬೃಹತ್ ಸವಾಲನ್ನು ಎದುರಿಸುವ ಉದ್ದೇಶಕ್ಕೆ ಬದ್ಧವಾಗಿದ್ದು ಸ್ವಲ್ಪ ಸಮಯ ಕೊಡಬಲ್ಲವರಾಗಿದ್ದರೆ ಇದರ ಜೊತೆಗೂಡಬಹುದು. ಜನರನ್ನಾಧರಿಸಿದ ನಿಜವಾದ ಮಾಧ್ಯಮ ಆಂದೋಲನವೊಂದು ಬೆಳೆದುನಿಂತಾಗ ನಕಲಿ ಮಾಧ್ಯಮಗಳನ್ನು ಓದು/ನೋಡುವವರಿಲ್ಲದೇ ಅಥವಾ ಅತ್ಯಂತ ಸೀಮಿತ ಸಂಖ್ಯೆಯ ಜನರು ಮಾತ್ರ ನೋಡುವುದರೊಂದಿಗೆ ಅವು ಅಪ್ರಸ್ತುತವಾಗುತ್ತವೆ. ಹೊಸ ಮುಖ್ಯವಾಹಿನಿಯೊಂದು ತಯಾರಾಗಿರುತ್ತದೆ. ಹೌದು ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ. ನಿಜವಾದ ಮುಖ್ಯವಾಹಿನಿ ಮಾಧ್ಯಮವನ್ನು.

ಇದಕ್ಕೆ ಸಿದ್ಧರಿರುವುದಾದಲ್ಲಿ, ನಮ್ಮ ನಿರ್ದಿಷ್ಟ ಯೋಜನೆ ಏನು ಎಂಬುದನ್ನು ನಿಮ್ಮೊಡನೆ ಚರ್ಚಿಸಲು ನಾವು ಉತ್ಸುಕರಾಗಿದ್ದೇವೆ. ಹಾಗೆಯೇ ಹೊಸ ಮಾಧ್ಯಮದ ಪರಿಕಲ್ಪನೆಯ ಬೆಳವಣಿಗೆಗೆ ನಿಮ್ಮ ಅನಿಸಿಕೆಗಳನ್ನು ಒಳಗೊಳ್ಳಲು ನಾವು ಮುಕ್ತ ಮನಸ್ಸು ಹೊಂದಿದ್ದೇವೆ.


ವಿಡಿಯೋ ನೋಡಿ: ದಯವಿಟ್ಟು ಇದನ್ನು ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉತ್ತಮ ಒಳನೋಟಗಳು. ಇದನ್ನು ಇನ್ನಷ್ಟು ಸಾಂದ್ರೀಕರಿಸಬೇಕು ಮತ್ತು ವಿಷದೀಕರಿಸಬೇಕು- ಸರಳವಾಗಿ ಮಾಡಬೇಕಾಗಿರುವುದು ಏನು, ಏಕೆ, ಹೇಗೆ ಎಂಬ ಬಗ್ಗೆ ಪಾಯಿಂಟ್ ಟು ಪಾಯಿಂಟ್ ವಿವರ ಕ್ರೋಢೀಕರಿಸಬೇಕು. ಸ್ವರೂಪ ರೂಪಿಸಲು ನಂತರವಷ್ಟೇ ಸಾಧ್ಯ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...