Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮತಾಂಧರ ಸಮಾಜ ಒಡೆಯುವ ಕೆಲಸವನ್ನು ನಿಯಂತ್ರಿಸುತ್ತಿಲ್ಲ: ಎಚ್. ಎಸ್. ದೊರೆಸ್ವಾಮಿ

ಮತಾಂಧರ ಸಮಾಜ ಒಡೆಯುವ ಕೆಲಸವನ್ನು ನಿಯಂತ್ರಿಸುತ್ತಿಲ್ಲ: ಎಚ್. ಎಸ್. ದೊರೆಸ್ವಾಮಿ

ಭಾರತ ಈಗ ಸ್ವತಂತ್ರ ದೇಶವಾಗಿದೆ. ರಾಜ್ಯಾಂಗ ರಚನೆ ಮಾಡಿಕೊಂಡಿದ್ದೇವೆ. ನಮ್ಮದು ಜಾತ್ಯತೀತ ರಾಷ್ಟ್ರ. ಭಾರತೀಯರ ಮೂಲಭೂತ ಹಕ್ಕುಗಳನ್ನೂ ಸಮಾನತೆ, ಸಹಿಷ್ಣುತೆಗಳನ್ನೂ ನಮ್ಮ ರಾಜ್ಯಾಂಗ ಎತ್ತಿ ಹಿಡಿದಿದೆ.

- Advertisement -
- Advertisement -

ಈ ಮತಾಂಧರು ಸಮಾಜ ಒಡೆಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಲ್ಲಣಗೊಳಿಸುವ ವಿಚಾರ. ಪ್ರಸ್ತುತ ಭಾರತದ ಸ್ಥಿತಿಯ ಬಗ್ಗೆ ಎಚ್. ಎಸ್. ದೊರೆಸ್ವಾಮಿಯವರು ಹೀಗೆ ಬರೆಯುತ್ತಾರೆ.

ಅಂದು ದೇಶದ ಸ್ವಾತಂತ್ರಕ್ಕಾಗಿ ದುಡಿದ ಕ್ರಾಂತಿವೀರರು ಇಂದಿನ ಯುವಕರ ಹೀರೋಗಳಾಗಲಿ ಎಂದು ದಿಶಾಭಾರತ್ ಕೈಗೊಂಡಿರುವ ‘ನನ್ನ ಭಾರತ’ ಅಭಿಯಾನದ ಅಂಗವಾಗಿ ಫೇಸ್‌ಬುಕ್‌ನಲ್ಲಿ ದಿಶಾಭಾರತ್ ಪದಾಧಿಕಾರಿ ಗೋಖಲೆ ಉಪನ್ಯಾಸ ಮಾಡಿದರೆಂದು ಪ್ರಜಾವಾಣಿ ಪ್ರಕಟಿಸಿದೆ. ಬ್ರಿಟಿಷರನ್ನು ಮಣಿಸಲು ಶ್ಯಾಮಜಿ ಕೆ ವರ್ಮ ಯುವಕರನ್ನು ಲಂಡನ್ನಿಗೆ ಕಳಿಸಿ ಶಿಕ್ಷಣ ಕೊಡಿಸಿದರು. ಸಾವರ್ಕರ್ ಯುವಕರಲ್ಲಿ ಕ್ರಾಂತಿಯ ಕಿಡಿ ಹಚ್ಚಿದರು. ಮದನ್‌ಲಾಲ್ ಡಿಂಗ್ರಾ ಬ್ರಿಟಿಷ್ ಅಧಿಕಾರಿಯನ್ನು ಹತ್ಯೆಗೈದರು.

ಜಲಿಯನ್‌ವಾಲಾಬಾಗ್ ಹತ್ಯಾಕಾಂಡದ ಸೇಡುತೀರಿಸಿಕೊಳ್ಳಲು ಭಗತ್‌ಸಿಂಗ್, ಚಂದ್ರಶೇಖರ್ ಅಜಾದ್ ಮುಂತಾದವರು ಮುಂದಾದರು. ಭಗತ್‌ಸಿಂಗ್ ಸೆಂಟ್ರಲ್ ಅಸೆಂಬ್ಲಿಯಲ್ಲಿ ಬಾಂಬ್ ಎಸೆದು ಬ್ರಿಟಿಷ್ ಅಧಿಕಾರಿಯೊಬ್ಬ ಸತ್ತ. ಭಗತ್‌ಸಿಂಗ್ ಮತ್ತು ಅವನ ಇಬ್ಬರು ಸಹಚರರನ್ನು ಬ್ರಿಟಿಷರು ಗಲ್ಲಿಗೇರಿಸಿದರು.

ಚಂದ್ರಶೇಖರ್ ಅಜಾದ್, ಜಲಿಯಾಲಾಲಾಬಾಗ್ ಪೊದೆಯಲ್ಲಿ ಅಡಗಿಕೊಂಡಿದ್ದಾಗ ಬ್ರಿಟಿಷ್ ಸೈನಿಕರ ಗುಂಡಿಗೆ ಬಲಿಯಾದರು. ಇವರೆಲ್ಲರೂ ದೇಶಭಕ್ತರು ಎಂಬುದರಲ್ಲಿ ಎರಡು ಮಾತಿಲ್ಲ. ಸಾರ್ವಕರ್ ಅವರು ಕ್ರಾಂತಿಕಾರರಾಗಿದ್ದು ಮಾಂಡಲೆ ಸೆರೆಮನೆಯಲ್ಲಿ ಕರಿನೀರಿನ ಶಿಕ್ಷೆ ಅನುಭವಿಸುತ್ತಿದ್ದವರು. ಹಠಾತ್ತನೆ ಬ್ರಿಟಿಷರ ಕ್ಷಮಾಪಣೆ ಕೇಳಿ ಅವರು ಹಾಕಿದ ಕರಾರುಗಳಿಗೆ ಒಪ್ಪಿಕೊಂಡು ಸೆರೆಮನೆಯಿಂದ ಹೊರಬಿದ್ದದ್ದು ಕ್ರಾಂತಿಕಾರಿಯ ಲಕ್ಷಣವಲ್ಲದಿದ್ದರೂ ಅವರು ದೇಶಭಕ್ತರೇ. ಇರಲಿ.

ಸ್ವಾತಂತ್ರ್ಯ ಸಂಗ್ರಾಮ ಒಂದು ಮಹಾ ಸಮುದ್ರ. ಆ ಮಹಾಸುಮದ್ರದಲ್ಲಿ ಗಾಂಧಿಯವರದ್ದು ಮತ್ತು ಕಾಂಗ್ರೆಸ್ಸಿನವರದ್ದು ಸಿಂಹಪಾಲು. ಉಳಿದ ನೂರಾರು ಸಣ್ಣ ದೊಡ್ಡ ತೊರೆಗಳು ಸ್ವಾತಂತ್ರ್ಯ ಸಂಗ್ರಾಮವೆಂಬ ಮಹಾಸಮುದ್ರದಲ್ಲಿ ಲೀನವಾಗಿ ಪಾಲ್ಗೊಂಡವು. ಇವರೆಲ್ಲರ ಒಟ್ಟಿನ ಶ್ರಮದಿಂದ ಸಮರ್ಪಣ ಮನೋಭಾವದಿಂದ ಈ ಹೋರಾಟದಲ್ಲಿ ಜಯ ಲಭಿಸಿತು. ಈ ಹೋರಾಟಗಾರರು ಮಾತ್ರವಲ್ಲ ಕೊನೆಯ ಘಟ್ಟದಲ್ಲಿ ನೌಕಾದಳದ ಭಾರತೀಯ ಯೋಧರು ಬ್ರಿಟಿಷರ ಮೇಲೆ ಬಂಡಾಯ ಹೂಡಿದರು. ಆಗ ಲೇಬರ್ ಪಕ್ಷದ ನಾಯಕ ಅಟ್ಲೀ ಬ್ರಿಟಿಷ್ ಪ್ರಧಾನಿಯಾಗಿದ್ದರು.

ಅಟ್ಲೀ ಭಾರತ ಸ್ವಾತಂತ್ರ್ಯ ಘೋಷಿಸಿದಾಗ ಹಿಂದಿನ ಪ್ರಧಾನಿ ಚರ್ಚಿಲ್ ‘ಅನಾಯಾಸವಾಗಿ ಭಾರತದ ರಾಸ್ಕಲ್ಸ್ ಮತ್ತು ಸ್ಕೌಂಡ್ರೆಲ್‌ಗಳ ಕೈಲಿ ಅಧಿಕಾರ ನೀಡಿ ಹೊರಬಂದೆ’ ಎಂದು ಅಟ್ಲೀಯವರನ್ನು ಟೀಕಿಸಿದರು. ಆಗ ಅಟ್ಲೀ ‘ಭಾರತ ನೌಕಾಪಡೆ ಬಂಡಾಯ ಎದ್ದ ಮೇಲೆ ಅಲ್ಲಿ ಅಧಿಕಾರ ಮುಂದುವರೆಸುವುದು ವಿವೇಕವಲ್ಲ ಅದಕ್ಕಾಗಿ ಅಧಿಕಾರ ಹಸ್ತಾಂತರ ಮಾಡಿದೆ’ ಎಂದು ಉತ್ತರಿಸಿದರು. ಹೀಗಾಗಿ ಭಾರತೀಯ ಸೈನಿಕರೂ ಸ್ವರಾಜ್ಯ ಪ್ರಾಪ್ತಿಗೆ ಕೆಲಸ ಮಾಡಿದವರೇ.

ಇನ್ನು ಈ ಕ್ರಾಂತಿಕಾರಿಗಳ ಹೋರಾಟದ ಇತಿಹಾಸವನ್ನು ಕೆದಕೋಣ. ಕ್ರಾಂತಿಕಾರಿಗಳು ಬ್ರಿಟಿಷರ ಮೇಲೆ ಅಲ್ಲೊಂದು ಇಲ್ಲೊಂದು ಗೆರಿಲ್ಲಾ ಯುದ್ಧಗಳನ್ನು ನಡೆಸಿದರಾದರೂ ಅನೇಕ ಯುವಕರು ವಿದ್ಯಾರ್ಥಿಗಳು ಬ್ರಿಟಿಷ್ ಅಧಿಕಾರಿಗಳನ್ನು ಒಬ್ಬೊಬ್ಬರಾನ್ನಾಗಿ ಕೊಂದರೆ, ಅವರೇ ಗಂಟುಮೂಟೆ ಕಟ್ಟಿಕೊಂಡು ಬ್ರಿಟನ್‌ಗೆ ಓಡಿ ಹೋಗುತ್ತಾರೆ ಆಗ ದೇಶ ಸ್ವಾತಂತ್ರವಾಗುತ್ತದೆ, ನಮ್ಮದೇ ಆಗುತ್ತದೆ ಎಂದು ಭಾವಿಸಿದ್ದರು. ಅದರಂತೆ ನಾಲ್ಕಾರು ಬ್ರಿಟಿಷ್ ಅಧಿಕಾರಿಗಳ ಕೊಲೆಯೂ ಆಯಿತು. ಆದರೆ ಬ್ರಿಟಿಷರು ಹೆದರಿ ಓಡಿ ಹೋದರೆ? ಅಂದಿನ ಬ್ರಿಟಿಷ್ ಸರ್ಕಾರ ವಸಾಹತುಶಾಹಿ ನೀತಿಯನ್ನು ಅನುಸರಿಸಿ ಪ್ರಪಂಚದ ಅನೇಕ ರಾಷ್ಟ್ರಗಳನ್ನು ತನ್ನ ಅಡಿಯಾಳಾಗಿ ಮಾಡಿಕೊಂಡಿತ್ತು. The Sun Never Sets On The British Empire ಎಂಬುದು ಅಂದಿನ Slogan ಆಗಿತ್ತು. ಇಷ್ಟು ಪ್ರಬಲರಾದ ಇಂಗ್ಲಿಷರು ನಾಲ್ಕು ಜನ ಬ್ರಿಟಿಷ್ ಅಧಿಕಾರಿಗಳನ್ನು ಗುಂಡಿಕ್ಕಿ ಕೊಂದ ಮಾತ್ರಕ್ಕೆ ಹೆದರಿ ಹೋಗುತ್ತಾರೆ ಎಂದು ಆ ಕ್ರಾಂತಿಕಾರಿ ಯುವಕರು ಭ್ರಮಾಧೀನರಾದದ್ದು ಒಂದು ದುರಂತವೇ ಸರಿ.

ಈ ಕ್ರಾಂತಿಕಾರಿಗಳ ಅವಿವೇಕ ಯಾವ ಮಟ್ಟ ಮುಟ್ಟಿತು ಅಂದರೆ ಓಬ್ಬ ಕೈಗಾರಿಕೋದ್ಯಮಿಯ ಪುತ್ರ ಕೆಲ ಬ್ರಿಟಿಷ್ ಅಧಿಕಾರಿಗಳನ್ನು ಚಹಾಪಾನಕ್ಕೆ ಆಹ್ವಾನಿಸಿದ. ಆಹ್ವಾನಿತರೆಲ್ಲ ಬಂದು ಚಹಾಪಾನದಲ್ಲಿ ಪಾಲ್ಗೊಂಡರು. ಆಗ ಆ ಯುವಕ ಹಠಾತ್ತಾಗಿ ಬಂದೂಕು ತೆಗೆದು ಇಬ್ಬರು ಆಹ್ವಾನಿತ ಅಧಿಕಾರಿಗಳನ್ನು ಕೊಂದು ಹಾಕಿದ.

ಈ ಘಟನೆಯನ್ನು ತಿಳಿದುಕೊಂಡ ಮಹಾತ್ಮಾಗಾಂಧಿ, “ಚಹಾ ಪಾನಕ್ಕೆಂದು ಆಹ್ವಾನಿಸಿ ಅವರನ್ನು ಕೊಲೆ ಮಾಡಿದ್ದು ಹೀನಾಯ ಕೃತ್ಯ. ಅದರ ಬದಲು ಅವರ ಕೈಗೂ ಒಂದೊಂದು ಬಂದೂಕ ಕೊಟ್ಟು ಈ ಯುವಕ ಹೋರಾಟ ಮಾಡಿದ್ದರೆ ನಾನು ಅವನನ್ನು ಮೆಚ್ಚಿಕೊಳ್ಳುತ್ತಿದೆ” ಎಂದರು. ಇದು ಕ್ರಾಂತಿಕಾರಿ ಹುಡುಗರ ಇತಿಹಾಸ.

ಭಾರತ ಈಗ ಸ್ವತಂತ್ರ ದೇಶವಾಗಿದೆ. ರಾಜ್ಯಾಂಗ ರಚನೆ ಮಾಡಿಕೊಂಡಿದ್ದೇವೆ. ನಮ್ಮದು ಜಾತ್ಯತೀತ ರಾಷ್ಟ್ರ.

,

ಭಾರತೀಯರ ಮೂಲಭೂತ ಹಕ್ಕುಗಳನ್ನೂ ಸಮಾನತೆ, ಸಹಿಷ್ಣುತೆಗಳನ್ನೂ ನಮ್ಮ ರಾಜ್ಯಾಂಗ ಎತ್ತಿ ಹಿಡಿದಿದೆ.

ಈ ಸಂದರ್ಭದಲ್ಲಿ ಹಿಂದೂ ಮತಾಂಧ ಸಂಸ್ಥೆಗಳು, ಆರ್‌ಎಸ್‌ಎಸ್, ಬಿಜೆಪಿಗಳು ಈ ಸೆಕ್ಯುಲರ್ ಭಾರತವನ್ನು ಹಿಂದೂರಾಷ್ಟ್ರವನ್ನಾಗಿ ಘೋಷಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಈ ಸಂದರ್ಭದಲ್ಲಿ ಯುವಕರಿಗೆ ಹಿಂದಿನ ಕ್ರಾಂತಿವೀರರನ್ನು ನಿಮ್ಮ ಆದರ್ಶವಾಗಿ ಮಾಡಿಕೊಳ್ಳಿರಿ ಎಂದು ಬೋಧಿಸುತ್ತಾರೆ ಮತಾಂಧ ಗೋಖಲೆ ಅವರು.

ಆಗ ಆ ಕ್ರಾಂತಿವೀರರು ಬ್ರಿಟಿಷ್ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ಕೊಲ್ಲಲು ಸಂಚು ಮಾಡಿದರು. ಈಗ ಮತಾಂಧ ಗೋಖಲೆಯವರು ಸಹಜವಾಗಿ ಹಿಂದು ಮತಾಂಧತೆಯನ್ನು ಒಪ್ಪದ ಜನರ ಮೇಲೆ ಉಗ್ರದಾಳಿ ಮಾಡಿ ಎಂದು ಯುವಕರನ್ನು ಬಾಲಿಷ ಭಾಷೆಯಲ್ಲಿ ಪ್ರಚೋದನೆ ಮಾಡಲು ತೊಡಗಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಖಟ್ಳೆ ಹೂಡಬೇಕು.

ಬ್ರಿಟಿಷರ ಕಾಲದಲ್ಲಿ ಆ ಯುವಕರನ್ನು ಪ್ರಚೋದನೆ ಮಾಡಿ ಅವರ ಕೈಲಿ ದುಷ್ಕೃತ್ಯ ಮಾಡಿಸಿದ್ದನ್ನು ಅಲ್ಲಿಗೆ ಸಮಾಪ್ತಿಗೊಳಿಸಿ ಹಿಂದುತ್ವ ಪ್ರತಿಪಾದನೆಯ ಭರದಲ್ಲಿ ಭಾರತದಲ್ಲಿ ಅಶಾಂತಿ ಉಂಟು ಮಾಡಿ ಸಾಲ್ಗೊಲೆಗೆ ಪ್ರಚೋದನೆ ನೀಡುವ ಅಮಾನುಷ ಬರ್ಬರ ನೀತಿಯನ್ನು ಗೋಖಲೆಯಂತಹ ತಲೆಕೆಟ್ಟ ಹಿಂದು ಮತಾಂಧ ಮಾಡಬಯಸಿದ್ದಾರೇನೋ ಎಂಬ ಆತಂಕ ನನ್ನ ಮನಸ್ಸನ್ನು ಆವರಿಸಿದೆ. ಅಂಥ ಮನಸ್ಸುಗಳಿಗೆ ದೇವರು ಶ್ರೀರಾಮ ಸದ್ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಮೋದಿ, ಷಾಗಳ ಸರ್ಕಾರ ಹಿಂದುತ್ವ ಪ್ರತಿಪಾದಕರ ಮೇಟಿಯಾಗಿದೆ. ಆದರೆ ಅವರ ಕಣ್ಮುಂದೆಯೇ ಯುವಕರನ್ನು ಹಿಂಸಾವೃತ್ತಿಗೆ ಪ್ರಚೋದಿಸುವ ಭಾಷಣಗಳು ನಡೆಯುತ್ತಿದ್ದರೂ ಅದನ್ನು ತಡೆಗಟ್ಟುವ ನೀತಿಯನ್ನು ಪಾಲಿಸದಿದ್ದರೆ ಅವರು ಭಾರತೀಯರ ವಿಶ್ವಾಸ ಕಳೆದುಕೊಳ್ಳುತ್ತಾರೆ. ಸರ್ಕಾರ ಕೆಲ ಮತೀಯ ವಿಷ ಹರಡುವ ದುಷ್ಟ ಶಕ್ತಿಗಳನ್ನು ತಮ್ಮ ಸಂಪುಟದ ಮಂತ್ರಿಗಳನ್ನಾಗಿ, ಎಂಪಿಗಳನ್ನಾಗಿ, ರಾಜ್ಯಗಳ ಮೇಲ್ಮನೆ ಸದಸ್ಯರಾಗಿ ನೇಮಕ ಮಾಡುತ್ತಿದ್ದಾರೆ. ಈ ಮತಾಂಧರು ಸಮಾಜ ಒಡೆಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಲ್ಲಣಗೊಳಿಸುವ ವಿಚಾರ.

-ಎಚ್.ಎಸ್. ದೊರೆಸ್ವಾಮಿ


ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....