Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮತಾಂಧರ ಸಮಾಜ ಒಡೆಯುವ ಕೆಲಸವನ್ನು ನಿಯಂತ್ರಿಸುತ್ತಿಲ್ಲ: ಎಚ್. ಎಸ್. ದೊರೆಸ್ವಾಮಿ

ಮತಾಂಧರ ಸಮಾಜ ಒಡೆಯುವ ಕೆಲಸವನ್ನು ನಿಯಂತ್ರಿಸುತ್ತಿಲ್ಲ: ಎಚ್. ಎಸ್. ದೊರೆಸ್ವಾಮಿ

ಭಾರತ ಈಗ ಸ್ವತಂತ್ರ ದೇಶವಾಗಿದೆ. ರಾಜ್ಯಾಂಗ ರಚನೆ ಮಾಡಿಕೊಂಡಿದ್ದೇವೆ. ನಮ್ಮದು ಜಾತ್ಯತೀತ ರಾಷ್ಟ್ರ. ಭಾರತೀಯರ ಮೂಲಭೂತ ಹಕ್ಕುಗಳನ್ನೂ ಸಮಾನತೆ, ಸಹಿಷ್ಣುತೆಗಳನ್ನೂ ನಮ್ಮ ರಾಜ್ಯಾಂಗ ಎತ್ತಿ ಹಿಡಿದಿದೆ.

- Advertisement -
- Advertisement -

ಈ ಮತಾಂಧರು ಸಮಾಜ ಒಡೆಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಲ್ಲಣಗೊಳಿಸುವ ವಿಚಾರ. ಪ್ರಸ್ತುತ ಭಾರತದ ಸ್ಥಿತಿಯ ಬಗ್ಗೆ ಎಚ್. ಎಸ್. ದೊರೆಸ್ವಾಮಿಯವರು ಹೀಗೆ ಬರೆಯುತ್ತಾರೆ.

ಅಂದು ದೇಶದ ಸ್ವಾತಂತ್ರಕ್ಕಾಗಿ ದುಡಿದ ಕ್ರಾಂತಿವೀರರು ಇಂದಿನ ಯುವಕರ ಹೀರೋಗಳಾಗಲಿ ಎಂದು ದಿಶಾಭಾರತ್ ಕೈಗೊಂಡಿರುವ ‘ನನ್ನ ಭಾರತ’ ಅಭಿಯಾನದ ಅಂಗವಾಗಿ ಫೇಸ್‌ಬುಕ್‌ನಲ್ಲಿ ದಿಶಾಭಾರತ್ ಪದಾಧಿಕಾರಿ ಗೋಖಲೆ ಉಪನ್ಯಾಸ ಮಾಡಿದರೆಂದು ಪ್ರಜಾವಾಣಿ ಪ್ರಕಟಿಸಿದೆ. ಬ್ರಿಟಿಷರನ್ನು ಮಣಿಸಲು ಶ್ಯಾಮಜಿ ಕೆ ವರ್ಮ ಯುವಕರನ್ನು ಲಂಡನ್ನಿಗೆ ಕಳಿಸಿ ಶಿಕ್ಷಣ ಕೊಡಿಸಿದರು. ಸಾವರ್ಕರ್ ಯುವಕರಲ್ಲಿ ಕ್ರಾಂತಿಯ ಕಿಡಿ ಹಚ್ಚಿದರು. ಮದನ್‌ಲಾಲ್ ಡಿಂಗ್ರಾ ಬ್ರಿಟಿಷ್ ಅಧಿಕಾರಿಯನ್ನು ಹತ್ಯೆಗೈದರು.

ಜಲಿಯನ್‌ವಾಲಾಬಾಗ್ ಹತ್ಯಾಕಾಂಡದ ಸೇಡುತೀರಿಸಿಕೊಳ್ಳಲು ಭಗತ್‌ಸಿಂಗ್, ಚಂದ್ರಶೇಖರ್ ಅಜಾದ್ ಮುಂತಾದವರು ಮುಂದಾದರು. ಭಗತ್‌ಸಿಂಗ್ ಸೆಂಟ್ರಲ್ ಅಸೆಂಬ್ಲಿಯಲ್ಲಿ ಬಾಂಬ್ ಎಸೆದು ಬ್ರಿಟಿಷ್ ಅಧಿಕಾರಿಯೊಬ್ಬ ಸತ್ತ. ಭಗತ್‌ಸಿಂಗ್ ಮತ್ತು ಅವನ ಇಬ್ಬರು ಸಹಚರರನ್ನು ಬ್ರಿಟಿಷರು ಗಲ್ಲಿಗೇರಿಸಿದರು.

ಚಂದ್ರಶೇಖರ್ ಅಜಾದ್, ಜಲಿಯಾಲಾಲಾಬಾಗ್ ಪೊದೆಯಲ್ಲಿ ಅಡಗಿಕೊಂಡಿದ್ದಾಗ ಬ್ರಿಟಿಷ್ ಸೈನಿಕರ ಗುಂಡಿಗೆ ಬಲಿಯಾದರು. ಇವರೆಲ್ಲರೂ ದೇಶಭಕ್ತರು ಎಂಬುದರಲ್ಲಿ ಎರಡು ಮಾತಿಲ್ಲ. ಸಾರ್ವಕರ್ ಅವರು ಕ್ರಾಂತಿಕಾರರಾಗಿದ್ದು ಮಾಂಡಲೆ ಸೆರೆಮನೆಯಲ್ಲಿ ಕರಿನೀರಿನ ಶಿಕ್ಷೆ ಅನುಭವಿಸುತ್ತಿದ್ದವರು. ಹಠಾತ್ತನೆ ಬ್ರಿಟಿಷರ ಕ್ಷಮಾಪಣೆ ಕೇಳಿ ಅವರು ಹಾಕಿದ ಕರಾರುಗಳಿಗೆ ಒಪ್ಪಿಕೊಂಡು ಸೆರೆಮನೆಯಿಂದ ಹೊರಬಿದ್ದದ್ದು ಕ್ರಾಂತಿಕಾರಿಯ ಲಕ್ಷಣವಲ್ಲದಿದ್ದರೂ ಅವರು ದೇಶಭಕ್ತರೇ. ಇರಲಿ.

ಸ್ವಾತಂತ್ರ್ಯ ಸಂಗ್ರಾಮ ಒಂದು ಮಹಾ ಸಮುದ್ರ. ಆ ಮಹಾಸುಮದ್ರದಲ್ಲಿ ಗಾಂಧಿಯವರದ್ದು ಮತ್ತು ಕಾಂಗ್ರೆಸ್ಸಿನವರದ್ದು ಸಿಂಹಪಾಲು. ಉಳಿದ ನೂರಾರು ಸಣ್ಣ ದೊಡ್ಡ ತೊರೆಗಳು ಸ್ವಾತಂತ್ರ್ಯ ಸಂಗ್ರಾಮವೆಂಬ ಮಹಾಸಮುದ್ರದಲ್ಲಿ ಲೀನವಾಗಿ ಪಾಲ್ಗೊಂಡವು. ಇವರೆಲ್ಲರ ಒಟ್ಟಿನ ಶ್ರಮದಿಂದ ಸಮರ್ಪಣ ಮನೋಭಾವದಿಂದ ಈ ಹೋರಾಟದಲ್ಲಿ ಜಯ ಲಭಿಸಿತು. ಈ ಹೋರಾಟಗಾರರು ಮಾತ್ರವಲ್ಲ ಕೊನೆಯ ಘಟ್ಟದಲ್ಲಿ ನೌಕಾದಳದ ಭಾರತೀಯ ಯೋಧರು ಬ್ರಿಟಿಷರ ಮೇಲೆ ಬಂಡಾಯ ಹೂಡಿದರು. ಆಗ ಲೇಬರ್ ಪಕ್ಷದ ನಾಯಕ ಅಟ್ಲೀ ಬ್ರಿಟಿಷ್ ಪ್ರಧಾನಿಯಾಗಿದ್ದರು.

ಅಟ್ಲೀ ಭಾರತ ಸ್ವಾತಂತ್ರ್ಯ ಘೋಷಿಸಿದಾಗ ಹಿಂದಿನ ಪ್ರಧಾನಿ ಚರ್ಚಿಲ್ ‘ಅನಾಯಾಸವಾಗಿ ಭಾರತದ ರಾಸ್ಕಲ್ಸ್ ಮತ್ತು ಸ್ಕೌಂಡ್ರೆಲ್‌ಗಳ ಕೈಲಿ ಅಧಿಕಾರ ನೀಡಿ ಹೊರಬಂದೆ’ ಎಂದು ಅಟ್ಲೀಯವರನ್ನು ಟೀಕಿಸಿದರು. ಆಗ ಅಟ್ಲೀ ‘ಭಾರತ ನೌಕಾಪಡೆ ಬಂಡಾಯ ಎದ್ದ ಮೇಲೆ ಅಲ್ಲಿ ಅಧಿಕಾರ ಮುಂದುವರೆಸುವುದು ವಿವೇಕವಲ್ಲ ಅದಕ್ಕಾಗಿ ಅಧಿಕಾರ ಹಸ್ತಾಂತರ ಮಾಡಿದೆ’ ಎಂದು ಉತ್ತರಿಸಿದರು. ಹೀಗಾಗಿ ಭಾರತೀಯ ಸೈನಿಕರೂ ಸ್ವರಾಜ್ಯ ಪ್ರಾಪ್ತಿಗೆ ಕೆಲಸ ಮಾಡಿದವರೇ.

ಇನ್ನು ಈ ಕ್ರಾಂತಿಕಾರಿಗಳ ಹೋರಾಟದ ಇತಿಹಾಸವನ್ನು ಕೆದಕೋಣ. ಕ್ರಾಂತಿಕಾರಿಗಳು ಬ್ರಿಟಿಷರ ಮೇಲೆ ಅಲ್ಲೊಂದು ಇಲ್ಲೊಂದು ಗೆರಿಲ್ಲಾ ಯುದ್ಧಗಳನ್ನು ನಡೆಸಿದರಾದರೂ ಅನೇಕ ಯುವಕರು ವಿದ್ಯಾರ್ಥಿಗಳು ಬ್ರಿಟಿಷ್ ಅಧಿಕಾರಿಗಳನ್ನು ಒಬ್ಬೊಬ್ಬರಾನ್ನಾಗಿ ಕೊಂದರೆ, ಅವರೇ ಗಂಟುಮೂಟೆ ಕಟ್ಟಿಕೊಂಡು ಬ್ರಿಟನ್‌ಗೆ ಓಡಿ ಹೋಗುತ್ತಾರೆ ಆಗ ದೇಶ ಸ್ವಾತಂತ್ರವಾಗುತ್ತದೆ, ನಮ್ಮದೇ ಆಗುತ್ತದೆ ಎಂದು ಭಾವಿಸಿದ್ದರು. ಅದರಂತೆ ನಾಲ್ಕಾರು ಬ್ರಿಟಿಷ್ ಅಧಿಕಾರಿಗಳ ಕೊಲೆಯೂ ಆಯಿತು. ಆದರೆ ಬ್ರಿಟಿಷರು ಹೆದರಿ ಓಡಿ ಹೋದರೆ? ಅಂದಿನ ಬ್ರಿಟಿಷ್ ಸರ್ಕಾರ ವಸಾಹತುಶಾಹಿ ನೀತಿಯನ್ನು ಅನುಸರಿಸಿ ಪ್ರಪಂಚದ ಅನೇಕ ರಾಷ್ಟ್ರಗಳನ್ನು ತನ್ನ ಅಡಿಯಾಳಾಗಿ ಮಾಡಿಕೊಂಡಿತ್ತು. The Sun Never Sets On The British Empire ಎಂಬುದು ಅಂದಿನ Slogan ಆಗಿತ್ತು. ಇಷ್ಟು ಪ್ರಬಲರಾದ ಇಂಗ್ಲಿಷರು ನಾಲ್ಕು ಜನ ಬ್ರಿಟಿಷ್ ಅಧಿಕಾರಿಗಳನ್ನು ಗುಂಡಿಕ್ಕಿ ಕೊಂದ ಮಾತ್ರಕ್ಕೆ ಹೆದರಿ ಹೋಗುತ್ತಾರೆ ಎಂದು ಆ ಕ್ರಾಂತಿಕಾರಿ ಯುವಕರು ಭ್ರಮಾಧೀನರಾದದ್ದು ಒಂದು ದುರಂತವೇ ಸರಿ.

ಈ ಕ್ರಾಂತಿಕಾರಿಗಳ ಅವಿವೇಕ ಯಾವ ಮಟ್ಟ ಮುಟ್ಟಿತು ಅಂದರೆ ಓಬ್ಬ ಕೈಗಾರಿಕೋದ್ಯಮಿಯ ಪುತ್ರ ಕೆಲ ಬ್ರಿಟಿಷ್ ಅಧಿಕಾರಿಗಳನ್ನು ಚಹಾಪಾನಕ್ಕೆ ಆಹ್ವಾನಿಸಿದ. ಆಹ್ವಾನಿತರೆಲ್ಲ ಬಂದು ಚಹಾಪಾನದಲ್ಲಿ ಪಾಲ್ಗೊಂಡರು. ಆಗ ಆ ಯುವಕ ಹಠಾತ್ತಾಗಿ ಬಂದೂಕು ತೆಗೆದು ಇಬ್ಬರು ಆಹ್ವಾನಿತ ಅಧಿಕಾರಿಗಳನ್ನು ಕೊಂದು ಹಾಕಿದ.

ಈ ಘಟನೆಯನ್ನು ತಿಳಿದುಕೊಂಡ ಮಹಾತ್ಮಾಗಾಂಧಿ, “ಚಹಾ ಪಾನಕ್ಕೆಂದು ಆಹ್ವಾನಿಸಿ ಅವರನ್ನು ಕೊಲೆ ಮಾಡಿದ್ದು ಹೀನಾಯ ಕೃತ್ಯ. ಅದರ ಬದಲು ಅವರ ಕೈಗೂ ಒಂದೊಂದು ಬಂದೂಕ ಕೊಟ್ಟು ಈ ಯುವಕ ಹೋರಾಟ ಮಾಡಿದ್ದರೆ ನಾನು ಅವನನ್ನು ಮೆಚ್ಚಿಕೊಳ್ಳುತ್ತಿದೆ” ಎಂದರು. ಇದು ಕ್ರಾಂತಿಕಾರಿ ಹುಡುಗರ ಇತಿಹಾಸ.

ಭಾರತ ಈಗ ಸ್ವತಂತ್ರ ದೇಶವಾಗಿದೆ. ರಾಜ್ಯಾಂಗ ರಚನೆ ಮಾಡಿಕೊಂಡಿದ್ದೇವೆ. ನಮ್ಮದು ಜಾತ್ಯತೀತ ರಾಷ್ಟ್ರ.

,

ಭಾರತೀಯರ ಮೂಲಭೂತ ಹಕ್ಕುಗಳನ್ನೂ ಸಮಾನತೆ, ಸಹಿಷ್ಣುತೆಗಳನ್ನೂ ನಮ್ಮ ರಾಜ್ಯಾಂಗ ಎತ್ತಿ ಹಿಡಿದಿದೆ.

ಈ ಸಂದರ್ಭದಲ್ಲಿ ಹಿಂದೂ ಮತಾಂಧ ಸಂಸ್ಥೆಗಳು, ಆರ್‌ಎಸ್‌ಎಸ್, ಬಿಜೆಪಿಗಳು ಈ ಸೆಕ್ಯುಲರ್ ಭಾರತವನ್ನು ಹಿಂದೂರಾಷ್ಟ್ರವನ್ನಾಗಿ ಘೋಷಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಈ ಸಂದರ್ಭದಲ್ಲಿ ಯುವಕರಿಗೆ ಹಿಂದಿನ ಕ್ರಾಂತಿವೀರರನ್ನು ನಿಮ್ಮ ಆದರ್ಶವಾಗಿ ಮಾಡಿಕೊಳ್ಳಿರಿ ಎಂದು ಬೋಧಿಸುತ್ತಾರೆ ಮತಾಂಧ ಗೋಖಲೆ ಅವರು.

ಆಗ ಆ ಕ್ರಾಂತಿವೀರರು ಬ್ರಿಟಿಷ್ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ಕೊಲ್ಲಲು ಸಂಚು ಮಾಡಿದರು. ಈಗ ಮತಾಂಧ ಗೋಖಲೆಯವರು ಸಹಜವಾಗಿ ಹಿಂದು ಮತಾಂಧತೆಯನ್ನು ಒಪ್ಪದ ಜನರ ಮೇಲೆ ಉಗ್ರದಾಳಿ ಮಾಡಿ ಎಂದು ಯುವಕರನ್ನು ಬಾಲಿಷ ಭಾಷೆಯಲ್ಲಿ ಪ್ರಚೋದನೆ ಮಾಡಲು ತೊಡಗಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಖಟ್ಳೆ ಹೂಡಬೇಕು.

ಬ್ರಿಟಿಷರ ಕಾಲದಲ್ಲಿ ಆ ಯುವಕರನ್ನು ಪ್ರಚೋದನೆ ಮಾಡಿ ಅವರ ಕೈಲಿ ದುಷ್ಕೃತ್ಯ ಮಾಡಿಸಿದ್ದನ್ನು ಅಲ್ಲಿಗೆ ಸಮಾಪ್ತಿಗೊಳಿಸಿ ಹಿಂದುತ್ವ ಪ್ರತಿಪಾದನೆಯ ಭರದಲ್ಲಿ ಭಾರತದಲ್ಲಿ ಅಶಾಂತಿ ಉಂಟು ಮಾಡಿ ಸಾಲ್ಗೊಲೆಗೆ ಪ್ರಚೋದನೆ ನೀಡುವ ಅಮಾನುಷ ಬರ್ಬರ ನೀತಿಯನ್ನು ಗೋಖಲೆಯಂತಹ ತಲೆಕೆಟ್ಟ ಹಿಂದು ಮತಾಂಧ ಮಾಡಬಯಸಿದ್ದಾರೇನೋ ಎಂಬ ಆತಂಕ ನನ್ನ ಮನಸ್ಸನ್ನು ಆವರಿಸಿದೆ. ಅಂಥ ಮನಸ್ಸುಗಳಿಗೆ ದೇವರು ಶ್ರೀರಾಮ ಸದ್ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಮೋದಿ, ಷಾಗಳ ಸರ್ಕಾರ ಹಿಂದುತ್ವ ಪ್ರತಿಪಾದಕರ ಮೇಟಿಯಾಗಿದೆ. ಆದರೆ ಅವರ ಕಣ್ಮುಂದೆಯೇ ಯುವಕರನ್ನು ಹಿಂಸಾವೃತ್ತಿಗೆ ಪ್ರಚೋದಿಸುವ ಭಾಷಣಗಳು ನಡೆಯುತ್ತಿದ್ದರೂ ಅದನ್ನು ತಡೆಗಟ್ಟುವ ನೀತಿಯನ್ನು ಪಾಲಿಸದಿದ್ದರೆ ಅವರು ಭಾರತೀಯರ ವಿಶ್ವಾಸ ಕಳೆದುಕೊಳ್ಳುತ್ತಾರೆ. ಸರ್ಕಾರ ಕೆಲ ಮತೀಯ ವಿಷ ಹರಡುವ ದುಷ್ಟ ಶಕ್ತಿಗಳನ್ನು ತಮ್ಮ ಸಂಪುಟದ ಮಂತ್ರಿಗಳನ್ನಾಗಿ, ಎಂಪಿಗಳನ್ನಾಗಿ, ರಾಜ್ಯಗಳ ಮೇಲ್ಮನೆ ಸದಸ್ಯರಾಗಿ ನೇಮಕ ಮಾಡುತ್ತಿದ್ದಾರೆ. ಈ ಮತಾಂಧರು ಸಮಾಜ ಒಡೆಯುವ ಕೆಲಸವನ್ನು ಅವ್ಯಾಹತವಾಗಿ ಮಾಡುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಲ್ಲಣಗೊಳಿಸುವ ವಿಚಾರ.

-ಎಚ್.ಎಸ್. ದೊರೆಸ್ವಾಮಿ


ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...