Homeಕರ್ನಾಟಕಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು - ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು – ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಸರ್ಕಾರದ ಈ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಪ್ರಧಾನವಾಗಿ ಬೆಳೆಯಲಾಗುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅಧಿಕ ಭೂಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದು ಈಗ ಕಟಾವಿಗೆ ಬಂದಿದೆ. ಮಳೆ ಕಾಲ ಕಾಲಕ್ಕೆ ಸುರಿದ ಪರಿಣಾಮ ಮೆಕ್ಕೆಜೋಳ ಉತ್ತಮ ಇಳುವಳಿ ಬಂದಿದೆ. ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯೂ ಸಿಗದೆ ರೈತರು ಕಂಗಾಲಾಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ರೈತರಿಂದ ನೇರವಾಗಿ ಮೆಕ್ಕೆಜೋಳ ಕೊಳ್ಳಲು ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯ ಕೇಳಿಬಂದಿದೆ.

ಉತ್ತರ ಕರ್ನಾಟಕದ ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ, ಬೆಳಗಾವಿ ಜಿಲ್ಲೆಯ ಹಾವೇರಿ, ಮಧ್ಯಕರ್ನಾಟಕದ ಶಿವಮೊಗ್ಗ ಭಾಗದಲ್ಲಿ ವ್ಯಾಪಕವಾಗಿ ಮೆಕ್ಕೆಜೋಳ ಬೆಳೆಯಲಾಗಿದೆ. ಕಡಿಮೆ ನೀರಿನಲ್ಲಿ, ಕಡಿಮೆ ಸಮಯದಲ್ಲಿ ಬೆಳೆ ಕೈಬರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ರೈತರು ಮೆಕ್ಕೆಜೋಳದ ಮೊರೆಹೋಗಿದ್ದರು. ಎಲ್ಲಾ ಕಡೆ ಬೆಳೆ ಚೆನ್ನಾಗಿ ಬಂದಿದ್ದು ಕಟಾವು ಕೂಡ ಮಾಡಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಮತ್ತು ವೈಜ್ಞಾನಿಕ ಬೆಲೆ ಇಲ್ಲದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಶಾಸಕ ಆರ್‌‌. ವಿ. ದೇಶಪಾಂಡೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಅವರಿಗೆ ಬರೆದಿರುವ ಪತ್ರ

ಕ್ವಿಂಟಾಲ್ ಮೆಕ್ಕೆಜೋಳ ಕೇವಲ 1300 ರೂಗಳಿಗೆ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1860 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೂ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಷ್ಟದ ಕಾಲದಲ್ಲಿ ಸ್ವಲ್ಪಮಟ್ಟಿನ ಲಾಭವಾದರೂ ಬರಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದು ನಿರಾಸೆ ತರಿಸಿದೆ. ರಾಜ್ಯದ ಒಂದೊಂದು ಜಿಲ್ಲೆಯಲ್ಲೂ ಒಂದೊಂದು ಬೆಲೆಯಡಿ ಮೆಕ್ಕೆಜೋಳ ಖರೀದಿ ನಡೆಯುತ್ತಿದೆ.

ಇದನ್ನೂ ಓದಿ: (ರೈತ) ಚಳುವಳಿಯ ಬಿಕ್ಕಟ್ಟು : ಕೆ. ಪಿ. ಸುರೇಶ್

ಉತ್ತರ ಕರ್ನಾಟಕದ ರಾಯಚೂರು, ಗದಗ, ಬಾಗಲಕೋಟೆ ಭಾಗದಲ್ಲಿ 1400 ರೂಗಳಿಗೆ ಮೆಕ್ಕೆಜೋಳಕ್ಕೆ ಬೆಲೆ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1300 ರೂ, ತುಮಕೂರು ಜಿಲ್ಲೆಯಲ್ಲಿ 1500 ರೂ ಹೀಗೆ ಥರಾವರಿ ಬೆಲೆಯಲ್ಲಿ ಖರೀದಿಸುತ್ತಿದ್ದರೂ ಬೆಂಬಲ ಬೆಲೆಗಿಂತ 400-500 ರೂಪಾಯಿ ಕಡಿಮೆ ಬೆಲೆಗೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಟದಿಂದಾಗಿ ಎಲ್ಲಾ ಬೆಳೆಗಳಲ್ಲೂ ನಷ್ಟ ಅನುಭವಿಸಿದ್ದ ರೈತರು ಈಗ ಬೆಂಬಲ ಬೆಲೆಯೂ ಸಿಗದೆ ತೊಂದರೆಗೆ ಸಿಲುಕಿದ್ದು ಸರ್ಕಾರ ರೈತರಿಂದ ನೇರ ಖರೀದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರಿಗೆ ಪತ್ರ ಬರೆದು ಮೆಕ್ಕೇಜೋಳವನ್ನು ಕೇವಲ 1300 ರೂಗಳಿಗೆ ಖರೀದಿ ಮಾಡುತ್ತಿದ್ದಾರೆ. ರೈತರಿಗೆ ಸೂಕ್ತ ಬೆಲೆಯೇ ಸಿಗುತ್ತಿಲ್ಲ. ಇದರಿಂದ ಮೆಕ್ಕೆಜೋಲ ಬೆಳೆದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ಮೆಕ್ಕೆಜೋಳವನ್ನು ಕೊಳ್ಳಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸಿರುವ 1860 ರೂಗಳಿಗೆ ಮೆಕ್ಕೇಜೋಳ ಖರೀದಿಸಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಪ್ರತಿಹೆಕ್ಟೇರ್ ಗೆ 37.50 ಕ್ವಿಂಟಾಲ್ ಬೆಳೆ ನಿರೀಕ್ಷಿಸಲಾಗಿದೆ. ಅಂದರೆ 3500 ಹೆಕ್ಟೇರ್ ಭೂಪ್ರದೇಶದಲ್ಲಿ 2,43,750 ಕ್ವಿಂಟಾಲ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಸಹಕಾರ ಸಚಿವರು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನೇ ಹೆಚ್ಚಾಗಿ ಬೆಳೆಯುವುದನ್ನು ರೈತರು ಅನುಸರಿಸಿಕೊಂಡು ಬಂದಿದ್ದಾರೆ. ಆದರೆ ರೈತರ ಬಗ್ಗೆ ಉತ್ತರ ಕರ್ನಾಟಕ ಭಾಗದ ಯಾವುದೇ ಜನ ಪ್ರತಿನಿಧಿಗಳು, ಶಾಸಕರು ಸಚಿವರು ಮತ್ತು ಸಂಸದರೂ ಕೂಡ ರೈತರ ಸಮಸ್ಯೆಗಳ ಕುರಿತು ದನಿ ಎತ್ತಿಲ್ಲ. ಮೆಕ್ಕೆಜೋಳವನ್ನು ಬೆಂಬಲ ಬೆಲೆಗೆ ಖರೀದಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನೂ ಯಾರೊಬ್ಬರೂ ಮಾಡಿಲ್ಲದಿರುವುದು ಶೋಚನೀಯ ಸಂಗತಿ ಎಂಬ ಟೀಕೆ ವ್ಯಕ್ತವಾಗಿದೆ.

ಶಾಸಕ ಆರ್‌‌. ವಿ. ದೇಶಪಾಂಡೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿರುವ ರೈತರಿಗೆ 5000 ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿದ್ದ ರೈತರು ಸರ್ಕಾರಕ್ಕೆ ಆನ್‌ಲೈನ್ ಮೂಲಕ ಎಲ್ಲಾ ದಾಖಲೆಗಳನ್ನೂ ನೀಡಿದ್ದರು. ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದು ರೈತರು ದೂರಿದ್ದಾರೆ. ಒಂದು ಕಡೆ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸರ್ಕಾರವೂ ನೇರವಾಗಿ ಖರೀದಿಸಿ ರೈತರ ಸಂಕಷ್ಟವನ್ನು ನಿವಾರಿಸುವ ಗೋಜಿಗೆ ಹೋಗುತ್ತಿಲ್ಲ. ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...