Homeಕರ್ನಾಟಕಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು - ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು – ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಸರ್ಕಾರದ ಈ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಪ್ರಧಾನವಾಗಿ ಬೆಳೆಯಲಾಗುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅಧಿಕ ಭೂಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದು ಈಗ ಕಟಾವಿಗೆ ಬಂದಿದೆ. ಮಳೆ ಕಾಲ ಕಾಲಕ್ಕೆ ಸುರಿದ ಪರಿಣಾಮ ಮೆಕ್ಕೆಜೋಳ ಉತ್ತಮ ಇಳುವಳಿ ಬಂದಿದೆ. ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯೂ ಸಿಗದೆ ರೈತರು ಕಂಗಾಲಾಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ರೈತರಿಂದ ನೇರವಾಗಿ ಮೆಕ್ಕೆಜೋಳ ಕೊಳ್ಳಲು ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯ ಕೇಳಿಬಂದಿದೆ.

ಉತ್ತರ ಕರ್ನಾಟಕದ ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ, ಬೆಳಗಾವಿ ಜಿಲ್ಲೆಯ ಹಾವೇರಿ, ಮಧ್ಯಕರ್ನಾಟಕದ ಶಿವಮೊಗ್ಗ ಭಾಗದಲ್ಲಿ ವ್ಯಾಪಕವಾಗಿ ಮೆಕ್ಕೆಜೋಳ ಬೆಳೆಯಲಾಗಿದೆ. ಕಡಿಮೆ ನೀರಿನಲ್ಲಿ, ಕಡಿಮೆ ಸಮಯದಲ್ಲಿ ಬೆಳೆ ಕೈಬರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ರೈತರು ಮೆಕ್ಕೆಜೋಳದ ಮೊರೆಹೋಗಿದ್ದರು. ಎಲ್ಲಾ ಕಡೆ ಬೆಳೆ ಚೆನ್ನಾಗಿ ಬಂದಿದ್ದು ಕಟಾವು ಕೂಡ ಮಾಡಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಮತ್ತು ವೈಜ್ಞಾನಿಕ ಬೆಲೆ ಇಲ್ಲದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಶಾಸಕ ಆರ್‌‌. ವಿ. ದೇಶಪಾಂಡೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಅವರಿಗೆ ಬರೆದಿರುವ ಪತ್ರ

ಕ್ವಿಂಟಾಲ್ ಮೆಕ್ಕೆಜೋಳ ಕೇವಲ 1300 ರೂಗಳಿಗೆ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1860 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೂ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಷ್ಟದ ಕಾಲದಲ್ಲಿ ಸ್ವಲ್ಪಮಟ್ಟಿನ ಲಾಭವಾದರೂ ಬರಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದು ನಿರಾಸೆ ತರಿಸಿದೆ. ರಾಜ್ಯದ ಒಂದೊಂದು ಜಿಲ್ಲೆಯಲ್ಲೂ ಒಂದೊಂದು ಬೆಲೆಯಡಿ ಮೆಕ್ಕೆಜೋಳ ಖರೀದಿ ನಡೆಯುತ್ತಿದೆ.

ಇದನ್ನೂ ಓದಿ: (ರೈತ) ಚಳುವಳಿಯ ಬಿಕ್ಕಟ್ಟು : ಕೆ. ಪಿ. ಸುರೇಶ್

ಉತ್ತರ ಕರ್ನಾಟಕದ ರಾಯಚೂರು, ಗದಗ, ಬಾಗಲಕೋಟೆ ಭಾಗದಲ್ಲಿ 1400 ರೂಗಳಿಗೆ ಮೆಕ್ಕೆಜೋಳಕ್ಕೆ ಬೆಲೆ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1300 ರೂ, ತುಮಕೂರು ಜಿಲ್ಲೆಯಲ್ಲಿ 1500 ರೂ ಹೀಗೆ ಥರಾವರಿ ಬೆಲೆಯಲ್ಲಿ ಖರೀದಿಸುತ್ತಿದ್ದರೂ ಬೆಂಬಲ ಬೆಲೆಗಿಂತ 400-500 ರೂಪಾಯಿ ಕಡಿಮೆ ಬೆಲೆಗೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಟದಿಂದಾಗಿ ಎಲ್ಲಾ ಬೆಳೆಗಳಲ್ಲೂ ನಷ್ಟ ಅನುಭವಿಸಿದ್ದ ರೈತರು ಈಗ ಬೆಂಬಲ ಬೆಲೆಯೂ ಸಿಗದೆ ತೊಂದರೆಗೆ ಸಿಲುಕಿದ್ದು ಸರ್ಕಾರ ರೈತರಿಂದ ನೇರ ಖರೀದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರಿಗೆ ಪತ್ರ ಬರೆದು ಮೆಕ್ಕೇಜೋಳವನ್ನು ಕೇವಲ 1300 ರೂಗಳಿಗೆ ಖರೀದಿ ಮಾಡುತ್ತಿದ್ದಾರೆ. ರೈತರಿಗೆ ಸೂಕ್ತ ಬೆಲೆಯೇ ಸಿಗುತ್ತಿಲ್ಲ. ಇದರಿಂದ ಮೆಕ್ಕೆಜೋಲ ಬೆಳೆದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ಮೆಕ್ಕೆಜೋಳವನ್ನು ಕೊಳ್ಳಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸಿರುವ 1860 ರೂಗಳಿಗೆ ಮೆಕ್ಕೇಜೋಳ ಖರೀದಿಸಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಪ್ರತಿಹೆಕ್ಟೇರ್ ಗೆ 37.50 ಕ್ವಿಂಟಾಲ್ ಬೆಳೆ ನಿರೀಕ್ಷಿಸಲಾಗಿದೆ. ಅಂದರೆ 3500 ಹೆಕ್ಟೇರ್ ಭೂಪ್ರದೇಶದಲ್ಲಿ 2,43,750 ಕ್ವಿಂಟಾಲ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಸಹಕಾರ ಸಚಿವರು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನೇ ಹೆಚ್ಚಾಗಿ ಬೆಳೆಯುವುದನ್ನು ರೈತರು ಅನುಸರಿಸಿಕೊಂಡು ಬಂದಿದ್ದಾರೆ. ಆದರೆ ರೈತರ ಬಗ್ಗೆ ಉತ್ತರ ಕರ್ನಾಟಕ ಭಾಗದ ಯಾವುದೇ ಜನ ಪ್ರತಿನಿಧಿಗಳು, ಶಾಸಕರು ಸಚಿವರು ಮತ್ತು ಸಂಸದರೂ ಕೂಡ ರೈತರ ಸಮಸ್ಯೆಗಳ ಕುರಿತು ದನಿ ಎತ್ತಿಲ್ಲ. ಮೆಕ್ಕೆಜೋಳವನ್ನು ಬೆಂಬಲ ಬೆಲೆಗೆ ಖರೀದಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನೂ ಯಾರೊಬ್ಬರೂ ಮಾಡಿಲ್ಲದಿರುವುದು ಶೋಚನೀಯ ಸಂಗತಿ ಎಂಬ ಟೀಕೆ ವ್ಯಕ್ತವಾಗಿದೆ.

ಶಾಸಕ ಆರ್‌‌. ವಿ. ದೇಶಪಾಂಡೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿರುವ ರೈತರಿಗೆ 5000 ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿದ್ದ ರೈತರು ಸರ್ಕಾರಕ್ಕೆ ಆನ್‌ಲೈನ್ ಮೂಲಕ ಎಲ್ಲಾ ದಾಖಲೆಗಳನ್ನೂ ನೀಡಿದ್ದರು. ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದು ರೈತರು ದೂರಿದ್ದಾರೆ. ಒಂದು ಕಡೆ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸರ್ಕಾರವೂ ನೇರವಾಗಿ ಖರೀದಿಸಿ ರೈತರ ಸಂಕಷ್ಟವನ್ನು ನಿವಾರಿಸುವ ಗೋಜಿಗೆ ಹೋಗುತ್ತಿಲ್ಲ. ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...