Homeಕರ್ನಾಟಕಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು - ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು – ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಸರ್ಕಾರದ ಈ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಪ್ರಧಾನವಾಗಿ ಬೆಳೆಯಲಾಗುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅಧಿಕ ಭೂಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದು ಈಗ ಕಟಾವಿಗೆ ಬಂದಿದೆ. ಮಳೆ ಕಾಲ ಕಾಲಕ್ಕೆ ಸುರಿದ ಪರಿಣಾಮ ಮೆಕ್ಕೆಜೋಳ ಉತ್ತಮ ಇಳುವಳಿ ಬಂದಿದೆ. ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯೂ ಸಿಗದೆ ರೈತರು ಕಂಗಾಲಾಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ರೈತರಿಂದ ನೇರವಾಗಿ ಮೆಕ್ಕೆಜೋಳ ಕೊಳ್ಳಲು ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯ ಕೇಳಿಬಂದಿದೆ.

ಉತ್ತರ ಕರ್ನಾಟಕದ ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ, ಬೆಳಗಾವಿ ಜಿಲ್ಲೆಯ ಹಾವೇರಿ, ಮಧ್ಯಕರ್ನಾಟಕದ ಶಿವಮೊಗ್ಗ ಭಾಗದಲ್ಲಿ ವ್ಯಾಪಕವಾಗಿ ಮೆಕ್ಕೆಜೋಳ ಬೆಳೆಯಲಾಗಿದೆ. ಕಡಿಮೆ ನೀರಿನಲ್ಲಿ, ಕಡಿಮೆ ಸಮಯದಲ್ಲಿ ಬೆಳೆ ಕೈಬರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ರೈತರು ಮೆಕ್ಕೆಜೋಳದ ಮೊರೆಹೋಗಿದ್ದರು. ಎಲ್ಲಾ ಕಡೆ ಬೆಳೆ ಚೆನ್ನಾಗಿ ಬಂದಿದ್ದು ಕಟಾವು ಕೂಡ ಮಾಡಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಮತ್ತು ವೈಜ್ಞಾನಿಕ ಬೆಲೆ ಇಲ್ಲದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಶಾಸಕ ಆರ್‌‌. ವಿ. ದೇಶಪಾಂಡೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಅವರಿಗೆ ಬರೆದಿರುವ ಪತ್ರ

ಕ್ವಿಂಟಾಲ್ ಮೆಕ್ಕೆಜೋಳ ಕೇವಲ 1300 ರೂಗಳಿಗೆ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1860 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೂ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಷ್ಟದ ಕಾಲದಲ್ಲಿ ಸ್ವಲ್ಪಮಟ್ಟಿನ ಲಾಭವಾದರೂ ಬರಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದು ನಿರಾಸೆ ತರಿಸಿದೆ. ರಾಜ್ಯದ ಒಂದೊಂದು ಜಿಲ್ಲೆಯಲ್ಲೂ ಒಂದೊಂದು ಬೆಲೆಯಡಿ ಮೆಕ್ಕೆಜೋಳ ಖರೀದಿ ನಡೆಯುತ್ತಿದೆ.

ಇದನ್ನೂ ಓದಿ: (ರೈತ) ಚಳುವಳಿಯ ಬಿಕ್ಕಟ್ಟು : ಕೆ. ಪಿ. ಸುರೇಶ್

ಉತ್ತರ ಕರ್ನಾಟಕದ ರಾಯಚೂರು, ಗದಗ, ಬಾಗಲಕೋಟೆ ಭಾಗದಲ್ಲಿ 1400 ರೂಗಳಿಗೆ ಮೆಕ್ಕೆಜೋಳಕ್ಕೆ ಬೆಲೆ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1300 ರೂ, ತುಮಕೂರು ಜಿಲ್ಲೆಯಲ್ಲಿ 1500 ರೂ ಹೀಗೆ ಥರಾವರಿ ಬೆಲೆಯಲ್ಲಿ ಖರೀದಿಸುತ್ತಿದ್ದರೂ ಬೆಂಬಲ ಬೆಲೆಗಿಂತ 400-500 ರೂಪಾಯಿ ಕಡಿಮೆ ಬೆಲೆಗೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಟದಿಂದಾಗಿ ಎಲ್ಲಾ ಬೆಳೆಗಳಲ್ಲೂ ನಷ್ಟ ಅನುಭವಿಸಿದ್ದ ರೈತರು ಈಗ ಬೆಂಬಲ ಬೆಲೆಯೂ ಸಿಗದೆ ತೊಂದರೆಗೆ ಸಿಲುಕಿದ್ದು ಸರ್ಕಾರ ರೈತರಿಂದ ನೇರ ಖರೀದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರಿಗೆ ಪತ್ರ ಬರೆದು ಮೆಕ್ಕೇಜೋಳವನ್ನು ಕೇವಲ 1300 ರೂಗಳಿಗೆ ಖರೀದಿ ಮಾಡುತ್ತಿದ್ದಾರೆ. ರೈತರಿಗೆ ಸೂಕ್ತ ಬೆಲೆಯೇ ಸಿಗುತ್ತಿಲ್ಲ. ಇದರಿಂದ ಮೆಕ್ಕೆಜೋಲ ಬೆಳೆದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ಮೆಕ್ಕೆಜೋಳವನ್ನು ಕೊಳ್ಳಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸಿರುವ 1860 ರೂಗಳಿಗೆ ಮೆಕ್ಕೇಜೋಳ ಖರೀದಿಸಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಪ್ರತಿಹೆಕ್ಟೇರ್ ಗೆ 37.50 ಕ್ವಿಂಟಾಲ್ ಬೆಳೆ ನಿರೀಕ್ಷಿಸಲಾಗಿದೆ. ಅಂದರೆ 3500 ಹೆಕ್ಟೇರ್ ಭೂಪ್ರದೇಶದಲ್ಲಿ 2,43,750 ಕ್ವಿಂಟಾಲ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಸಹಕಾರ ಸಚಿವರು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನೇ ಹೆಚ್ಚಾಗಿ ಬೆಳೆಯುವುದನ್ನು ರೈತರು ಅನುಸರಿಸಿಕೊಂಡು ಬಂದಿದ್ದಾರೆ. ಆದರೆ ರೈತರ ಬಗ್ಗೆ ಉತ್ತರ ಕರ್ನಾಟಕ ಭಾಗದ ಯಾವುದೇ ಜನ ಪ್ರತಿನಿಧಿಗಳು, ಶಾಸಕರು ಸಚಿವರು ಮತ್ತು ಸಂಸದರೂ ಕೂಡ ರೈತರ ಸಮಸ್ಯೆಗಳ ಕುರಿತು ದನಿ ಎತ್ತಿಲ್ಲ. ಮೆಕ್ಕೆಜೋಳವನ್ನು ಬೆಂಬಲ ಬೆಲೆಗೆ ಖರೀದಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನೂ ಯಾರೊಬ್ಬರೂ ಮಾಡಿಲ್ಲದಿರುವುದು ಶೋಚನೀಯ ಸಂಗತಿ ಎಂಬ ಟೀಕೆ ವ್ಯಕ್ತವಾಗಿದೆ.

ಶಾಸಕ ಆರ್‌‌. ವಿ. ದೇಶಪಾಂಡೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿರುವ ರೈತರಿಗೆ 5000 ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿದ್ದ ರೈತರು ಸರ್ಕಾರಕ್ಕೆ ಆನ್‌ಲೈನ್ ಮೂಲಕ ಎಲ್ಲಾ ದಾಖಲೆಗಳನ್ನೂ ನೀಡಿದ್ದರು. ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದು ರೈತರು ದೂರಿದ್ದಾರೆ. ಒಂದು ಕಡೆ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸರ್ಕಾರವೂ ನೇರವಾಗಿ ಖರೀದಿಸಿ ರೈತರ ಸಂಕಷ್ಟವನ್ನು ನಿವಾರಿಸುವ ಗೋಜಿಗೆ ಹೋಗುತ್ತಿಲ್ಲ. ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...