Homeಅಂತರಾಷ್ಟ್ರೀಯಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ..

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೇಲೆ ಡೆಮಾಕ್ರೆಟಿಕ್ ಪಾರ್ಟಿಯ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್  ವಾಗ್ದಾಳಿ ನಡೆಸಿದ್ದಾರೆ. ಕಳೆದ ಅಧ್ಯಕ್ಷೀಯ ಚರ್ಚೆಯಲ್ಲಿ ಉಭಯ ನಾಯಕರ ಎರಡನೇ ಸುತ್ತಿನ ಸಂವಾದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು “ಹೊಲಸು” ಎಂದು ಕರೆದಿದ್ದುದ್ದಕ್ಕೆ ಪ್ರಜಾಪ್ರಭುತ್ವವಾದಿ ಜೋ ಬಿಡನ್ ಟೀಕಿಸಿದ್ದಾರೆ.

ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದರು. ಈ ಮೂಲಕ ಟ್ರಂಪ್ ಭಾರತೀಯರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಪ್ರತಿಸ್ಫರ್ಧಿ ಜೋ ಬಿಡೆನ್ ಕೂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಈ ಕುರಿತು ಟ್ವೀಟ್ ಮಾಡಿರುವ ಜೋ ಬಿಡೆನ್ “ಅಧ್ಯಕ್ಷ ಟ್ರಂಪ್ ಭಾರತವನ್ನು ‘ಹೊಲಸು’ ಎಂದಿದ್ದಾರೆ. ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಕಮಲ ಹ್ಯಾರಿಸ್ ಮತ್ತು ನಾನು ನಮ್ಮ ಸಹಭಾಗಿತ್ವವನ್ನು ಗೌರವಿಸುತ್ತೇವೆ ಮತ್ತು ವಿದೇಶಾಂಗ ನೀತಿಯ ಗೌರವವನ್ನು ಮತ್ತೆ ಮುನ್ನೆಲೆಗೆ ತರುತ್ತೇವೆ” ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರಿಂದ, “ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ ಎಂದು ಟ್ರಂಪ್ ಹೇಳಿದ್ದರು.

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗಿತ್ತು. ಆದರೆ ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಜೋ ಬಿಡೆನ್ ಭಾರತೀಯ ಅಮೆರಿಕನ್ ಸಮುದಾಯದೊಂದಿಗಿನ ತಮ್ಮ ಸಂಪರ್ಕವನ್ನು ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದಾರೆ. ಜೊತೆಗೆ ಈಗಿನ ವಿನಾಶಕಾರಿ ಮತ್ತು ಕರಾಳ ಚುನಾವಣೆಯ ನೆರಳಿನಲ್ಲಿ, ನಾವು ದೀಪಗಳ ಹಬ್ಬ ಮತ್ತು ಹೊಸ ಆರಂಭಕ್ಕಾಗಿ ಒಟ್ಟುಗೂಡಿದ್ದೇವೆ “ಎಂದು ಹೇಳಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನವೆಂಬರ್‌ನಲ್ಲಿ, ಉಪಾಧ್ಯಕ್ಷರ ನಿವಾಸದಲ್ಲಿ ನಾನು ಆಯೋಜಿಸಿದ್ದ ಕೊನೆಯ ಕಾರ್ಯಕ್ರಮವೆಂದರೆ ದೀಪಾವಳಿ ಸ್ವಾಗತ. ಇಲ್ಲಿನ ಐರಿಶ್ ಕ್ಯಾಥೊಲಿಕ್ ಉಪಾಧ್ಯಕ್ಷರು ಹಿಂದೂಗಳು, ಬೌದ್ಧರು, ಸಿಖ್ಖರು ಮತ್ತು ಜೈನರು ಸಾಂಪ್ರದಾಯಿಕವಾಗಿ ಆಚರಿಸುವ ರಜಾದಿನಕ್ಕಾಗಿ ನನ್ನ ಮನೆಯನ್ನು ಮುಕ್ತವಾಗಿಸುತ್ತಿದ್ದರು. ಆ ರಾತ್ರಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಭಾರತೀಯ ಅಮೆರಿಕನ್ನರು ತಮ್ಮ ​​ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

ಅಮೆರಿಕ-ಇಂಡಿಯಾ ಸಂಬಂಧಗಳಿಗೆ “ಒಬಾಮಾ-ಬಿಡೆನ್ ಆಡಳಿತದ ಕೆಲವು ವರ್ಷಗಳು ಅತ್ಯುತ್ತಮವಾದವು” ಎಂದು ಹಂಚಿಕೊಂಡಿದ್ದಾರೆ. “ಬಿಡೆನ್-ಹ್ಯಾರಿಸ್ ಆಡಳಿತವು ಆ ಮಹತ್ತರವಾದ ಪ್ರಗತಿಯನ್ನು ನಿರ್ಮಿಸುತ್ತದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಗೆದ್ದರೆ ಭಾರತೀಯ-ಅಮೆರಿಕನ್ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.  ಅಮೆರಿಕದಲ್ಲಿ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...