Homeಅಂತರಾಷ್ಟ್ರೀಯಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ..

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೇಲೆ ಡೆಮಾಕ್ರೆಟಿಕ್ ಪಾರ್ಟಿಯ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್  ವಾಗ್ದಾಳಿ ನಡೆಸಿದ್ದಾರೆ. ಕಳೆದ ಅಧ್ಯಕ್ಷೀಯ ಚರ್ಚೆಯಲ್ಲಿ ಉಭಯ ನಾಯಕರ ಎರಡನೇ ಸುತ್ತಿನ ಸಂವಾದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು “ಹೊಲಸು” ಎಂದು ಕರೆದಿದ್ದುದ್ದಕ್ಕೆ ಪ್ರಜಾಪ್ರಭುತ್ವವಾದಿ ಜೋ ಬಿಡನ್ ಟೀಕಿಸಿದ್ದಾರೆ.

ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದರು. ಈ ಮೂಲಕ ಟ್ರಂಪ್ ಭಾರತೀಯರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಪ್ರತಿಸ್ಫರ್ಧಿ ಜೋ ಬಿಡೆನ್ ಕೂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಈ ಕುರಿತು ಟ್ವೀಟ್ ಮಾಡಿರುವ ಜೋ ಬಿಡೆನ್ “ಅಧ್ಯಕ್ಷ ಟ್ರಂಪ್ ಭಾರತವನ್ನು ‘ಹೊಲಸು’ ಎಂದಿದ್ದಾರೆ. ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಕಮಲ ಹ್ಯಾರಿಸ್ ಮತ್ತು ನಾನು ನಮ್ಮ ಸಹಭಾಗಿತ್ವವನ್ನು ಗೌರವಿಸುತ್ತೇವೆ ಮತ್ತು ವಿದೇಶಾಂಗ ನೀತಿಯ ಗೌರವವನ್ನು ಮತ್ತೆ ಮುನ್ನೆಲೆಗೆ ತರುತ್ತೇವೆ” ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರಿಂದ, “ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ ಎಂದು ಟ್ರಂಪ್ ಹೇಳಿದ್ದರು.

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗಿತ್ತು. ಆದರೆ ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಜೋ ಬಿಡೆನ್ ಭಾರತೀಯ ಅಮೆರಿಕನ್ ಸಮುದಾಯದೊಂದಿಗಿನ ತಮ್ಮ ಸಂಪರ್ಕವನ್ನು ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದಾರೆ. ಜೊತೆಗೆ ಈಗಿನ ವಿನಾಶಕಾರಿ ಮತ್ತು ಕರಾಳ ಚುನಾವಣೆಯ ನೆರಳಿನಲ್ಲಿ, ನಾವು ದೀಪಗಳ ಹಬ್ಬ ಮತ್ತು ಹೊಸ ಆರಂಭಕ್ಕಾಗಿ ಒಟ್ಟುಗೂಡಿದ್ದೇವೆ “ಎಂದು ಹೇಳಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನವೆಂಬರ್‌ನಲ್ಲಿ, ಉಪಾಧ್ಯಕ್ಷರ ನಿವಾಸದಲ್ಲಿ ನಾನು ಆಯೋಜಿಸಿದ್ದ ಕೊನೆಯ ಕಾರ್ಯಕ್ರಮವೆಂದರೆ ದೀಪಾವಳಿ ಸ್ವಾಗತ. ಇಲ್ಲಿನ ಐರಿಶ್ ಕ್ಯಾಥೊಲಿಕ್ ಉಪಾಧ್ಯಕ್ಷರು ಹಿಂದೂಗಳು, ಬೌದ್ಧರು, ಸಿಖ್ಖರು ಮತ್ತು ಜೈನರು ಸಾಂಪ್ರದಾಯಿಕವಾಗಿ ಆಚರಿಸುವ ರಜಾದಿನಕ್ಕಾಗಿ ನನ್ನ ಮನೆಯನ್ನು ಮುಕ್ತವಾಗಿಸುತ್ತಿದ್ದರು. ಆ ರಾತ್ರಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಭಾರತೀಯ ಅಮೆರಿಕನ್ನರು ತಮ್ಮ ​​ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

ಅಮೆರಿಕ-ಇಂಡಿಯಾ ಸಂಬಂಧಗಳಿಗೆ “ಒಬಾಮಾ-ಬಿಡೆನ್ ಆಡಳಿತದ ಕೆಲವು ವರ್ಷಗಳು ಅತ್ಯುತ್ತಮವಾದವು” ಎಂದು ಹಂಚಿಕೊಂಡಿದ್ದಾರೆ. “ಬಿಡೆನ್-ಹ್ಯಾರಿಸ್ ಆಡಳಿತವು ಆ ಮಹತ್ತರವಾದ ಪ್ರಗತಿಯನ್ನು ನಿರ್ಮಿಸುತ್ತದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಗೆದ್ದರೆ ಭಾರತೀಯ-ಅಮೆರಿಕನ್ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.  ಅಮೆರಿಕದಲ್ಲಿ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...