Homeಅಂತರಾಷ್ಟ್ರೀಯಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ..

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೇಲೆ ಡೆಮಾಕ್ರೆಟಿಕ್ ಪಾರ್ಟಿಯ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್  ವಾಗ್ದಾಳಿ ನಡೆಸಿದ್ದಾರೆ. ಕಳೆದ ಅಧ್ಯಕ್ಷೀಯ ಚರ್ಚೆಯಲ್ಲಿ ಉಭಯ ನಾಯಕರ ಎರಡನೇ ಸುತ್ತಿನ ಸಂವಾದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು “ಹೊಲಸು” ಎಂದು ಕರೆದಿದ್ದುದ್ದಕ್ಕೆ ಪ್ರಜಾಪ್ರಭುತ್ವವಾದಿ ಜೋ ಬಿಡನ್ ಟೀಕಿಸಿದ್ದಾರೆ.

ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದರು. ಈ ಮೂಲಕ ಟ್ರಂಪ್ ಭಾರತೀಯರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಪ್ರತಿಸ್ಫರ್ಧಿ ಜೋ ಬಿಡೆನ್ ಕೂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಈ ಕುರಿತು ಟ್ವೀಟ್ ಮಾಡಿರುವ ಜೋ ಬಿಡೆನ್ “ಅಧ್ಯಕ್ಷ ಟ್ರಂಪ್ ಭಾರತವನ್ನು ‘ಹೊಲಸು’ ಎಂದಿದ್ದಾರೆ. ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಕಮಲ ಹ್ಯಾರಿಸ್ ಮತ್ತು ನಾನು ನಮ್ಮ ಸಹಭಾಗಿತ್ವವನ್ನು ಗೌರವಿಸುತ್ತೇವೆ ಮತ್ತು ವಿದೇಶಾಂಗ ನೀತಿಯ ಗೌರವವನ್ನು ಮತ್ತೆ ಮುನ್ನೆಲೆಗೆ ತರುತ್ತೇವೆ” ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರಿಂದ, “ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ ಎಂದು ಟ್ರಂಪ್ ಹೇಳಿದ್ದರು.

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗಿತ್ತು. ಆದರೆ ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಜೋ ಬಿಡೆನ್ ಭಾರತೀಯ ಅಮೆರಿಕನ್ ಸಮುದಾಯದೊಂದಿಗಿನ ತಮ್ಮ ಸಂಪರ್ಕವನ್ನು ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದಾರೆ. ಜೊತೆಗೆ ಈಗಿನ ವಿನಾಶಕಾರಿ ಮತ್ತು ಕರಾಳ ಚುನಾವಣೆಯ ನೆರಳಿನಲ್ಲಿ, ನಾವು ದೀಪಗಳ ಹಬ್ಬ ಮತ್ತು ಹೊಸ ಆರಂಭಕ್ಕಾಗಿ ಒಟ್ಟುಗೂಡಿದ್ದೇವೆ “ಎಂದು ಹೇಳಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನವೆಂಬರ್‌ನಲ್ಲಿ, ಉಪಾಧ್ಯಕ್ಷರ ನಿವಾಸದಲ್ಲಿ ನಾನು ಆಯೋಜಿಸಿದ್ದ ಕೊನೆಯ ಕಾರ್ಯಕ್ರಮವೆಂದರೆ ದೀಪಾವಳಿ ಸ್ವಾಗತ. ಇಲ್ಲಿನ ಐರಿಶ್ ಕ್ಯಾಥೊಲಿಕ್ ಉಪಾಧ್ಯಕ್ಷರು ಹಿಂದೂಗಳು, ಬೌದ್ಧರು, ಸಿಖ್ಖರು ಮತ್ತು ಜೈನರು ಸಾಂಪ್ರದಾಯಿಕವಾಗಿ ಆಚರಿಸುವ ರಜಾದಿನಕ್ಕಾಗಿ ನನ್ನ ಮನೆಯನ್ನು ಮುಕ್ತವಾಗಿಸುತ್ತಿದ್ದರು. ಆ ರಾತ್ರಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಭಾರತೀಯ ಅಮೆರಿಕನ್ನರು ತಮ್ಮ ​​ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

ಅಮೆರಿಕ-ಇಂಡಿಯಾ ಸಂಬಂಧಗಳಿಗೆ “ಒಬಾಮಾ-ಬಿಡೆನ್ ಆಡಳಿತದ ಕೆಲವು ವರ್ಷಗಳು ಅತ್ಯುತ್ತಮವಾದವು” ಎಂದು ಹಂಚಿಕೊಂಡಿದ್ದಾರೆ. “ಬಿಡೆನ್-ಹ್ಯಾರಿಸ್ ಆಡಳಿತವು ಆ ಮಹತ್ತರವಾದ ಪ್ರಗತಿಯನ್ನು ನಿರ್ಮಿಸುತ್ತದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಗೆದ್ದರೆ ಭಾರತೀಯ-ಅಮೆರಿಕನ್ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.  ಅಮೆರಿಕದಲ್ಲಿ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...