Homeಅಂತರಾಷ್ಟ್ರೀಯಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ..

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೇಲೆ ಡೆಮಾಕ್ರೆಟಿಕ್ ಪಾರ್ಟಿಯ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್  ವಾಗ್ದಾಳಿ ನಡೆಸಿದ್ದಾರೆ. ಕಳೆದ ಅಧ್ಯಕ್ಷೀಯ ಚರ್ಚೆಯಲ್ಲಿ ಉಭಯ ನಾಯಕರ ಎರಡನೇ ಸುತ್ತಿನ ಸಂವಾದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು “ಹೊಲಸು” ಎಂದು ಕರೆದಿದ್ದುದ್ದಕ್ಕೆ ಪ್ರಜಾಪ್ರಭುತ್ವವಾದಿ ಜೋ ಬಿಡನ್ ಟೀಕಿಸಿದ್ದಾರೆ.

ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದರು. ಈ ಮೂಲಕ ಟ್ರಂಪ್ ಭಾರತೀಯರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಪ್ರತಿಸ್ಫರ್ಧಿ ಜೋ ಬಿಡೆನ್ ಕೂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಈ ಕುರಿತು ಟ್ವೀಟ್ ಮಾಡಿರುವ ಜೋ ಬಿಡೆನ್ “ಅಧ್ಯಕ್ಷ ಟ್ರಂಪ್ ಭಾರತವನ್ನು ‘ಹೊಲಸು’ ಎಂದಿದ್ದಾರೆ. ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಕಮಲ ಹ್ಯಾರಿಸ್ ಮತ್ತು ನಾನು ನಮ್ಮ ಸಹಭಾಗಿತ್ವವನ್ನು ಗೌರವಿಸುತ್ತೇವೆ ಮತ್ತು ವಿದೇಶಾಂಗ ನೀತಿಯ ಗೌರವವನ್ನು ಮತ್ತೆ ಮುನ್ನೆಲೆಗೆ ತರುತ್ತೇವೆ” ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರಿಂದ, “ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ ಎಂದು ಟ್ರಂಪ್ ಹೇಳಿದ್ದರು.

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗಿತ್ತು. ಆದರೆ ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಜೋ ಬಿಡೆನ್ ಭಾರತೀಯ ಅಮೆರಿಕನ್ ಸಮುದಾಯದೊಂದಿಗಿನ ತಮ್ಮ ಸಂಪರ್ಕವನ್ನು ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದಾರೆ. ಜೊತೆಗೆ ಈಗಿನ ವಿನಾಶಕಾರಿ ಮತ್ತು ಕರಾಳ ಚುನಾವಣೆಯ ನೆರಳಿನಲ್ಲಿ, ನಾವು ದೀಪಗಳ ಹಬ್ಬ ಮತ್ತು ಹೊಸ ಆರಂಭಕ್ಕಾಗಿ ಒಟ್ಟುಗೂಡಿದ್ದೇವೆ “ಎಂದು ಹೇಳಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನವೆಂಬರ್‌ನಲ್ಲಿ, ಉಪಾಧ್ಯಕ್ಷರ ನಿವಾಸದಲ್ಲಿ ನಾನು ಆಯೋಜಿಸಿದ್ದ ಕೊನೆಯ ಕಾರ್ಯಕ್ರಮವೆಂದರೆ ದೀಪಾವಳಿ ಸ್ವಾಗತ. ಇಲ್ಲಿನ ಐರಿಶ್ ಕ್ಯಾಥೊಲಿಕ್ ಉಪಾಧ್ಯಕ್ಷರು ಹಿಂದೂಗಳು, ಬೌದ್ಧರು, ಸಿಖ್ಖರು ಮತ್ತು ಜೈನರು ಸಾಂಪ್ರದಾಯಿಕವಾಗಿ ಆಚರಿಸುವ ರಜಾದಿನಕ್ಕಾಗಿ ನನ್ನ ಮನೆಯನ್ನು ಮುಕ್ತವಾಗಿಸುತ್ತಿದ್ದರು. ಆ ರಾತ್ರಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಭಾರತೀಯ ಅಮೆರಿಕನ್ನರು ತಮ್ಮ ​​ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

ಅಮೆರಿಕ-ಇಂಡಿಯಾ ಸಂಬಂಧಗಳಿಗೆ “ಒಬಾಮಾ-ಬಿಡೆನ್ ಆಡಳಿತದ ಕೆಲವು ವರ್ಷಗಳು ಅತ್ಯುತ್ತಮವಾದವು” ಎಂದು ಹಂಚಿಕೊಂಡಿದ್ದಾರೆ. “ಬಿಡೆನ್-ಹ್ಯಾರಿಸ್ ಆಡಳಿತವು ಆ ಮಹತ್ತರವಾದ ಪ್ರಗತಿಯನ್ನು ನಿರ್ಮಿಸುತ್ತದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಗೆದ್ದರೆ ಭಾರತೀಯ-ಅಮೆರಿಕನ್ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.  ಅಮೆರಿಕದಲ್ಲಿ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...