Homeಮುಖಪುಟಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಕ್ರಿಕೆಟಿಗರು, ಬಾಲಿವುಡ್ ತಾರೆಯರು ಸರ್ಕಾರದ ಪರವಾಗಿ ಟ್ವೀಟ್ ಮಾಡುತ್ತಿರುವ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಯಾವ ಅಳುಕೂ ಇಲ್ಲದೇ ಸರ್ಕಾರದ ವಿರುದ್ಧ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಎರಡು ತಿಂಗಳಿನಿಂದಲೂ ನಡೆಯುತ್ತಿರುವ ರೈತ ಪ್ರತಿಭಟನೆ ಮತ್ತು ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಭಾರತ ಸರ್ಕಾರದ ವಿರುದ್ಧ ಅಂತರರಾಷ್ಟ್ರೀಯ ಟೀಕೆಗಳು ಕೇಳಿಬಂದಿವೆ. ಆದರೆ ಅವುಗಳ ವಿರುದ್ಧ ಇಲ್ಲಿನ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದಾರೆ. ಆದರೆ ನಟಿ ಸೋನಾಕ್ಷಿ ಸಿನ್ಹಾ ಈ ಸಂಘಟಿತ ಅಭಿಯಾನದ ವಿರುದ್ಧ ಮಾತನಾಡಿದ ಸಾರ್ವಜನಿಕ ವ್ಯಕ್ತಿಗಳೊಂದಿಗೆ ಸೇರಿಕೊಂಡಿದ್ದಾರೆ.

‘ಹಸ್ತಕ್ಷೇಪ ಎನ್ನುತ್ತೀರಿ ಏಕೆ? ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ ಇದು’ ಎಂದಿರುವ ಸೋನಾಕ್ಷಿ, ರಿಹಾನ್ನ, ಗ್ರೇಟಾ ಅವರ ನಿಲುವನ್ನು ಸಮರ್ಥಿಸಿದ್ದಾರೆ.

“ಮಾನವ ಹಕ್ಕುಗಳ ಉಲ್ಲಂಘನೆ, ಇಂಟರ್ನೆಟ್ ಸ್ಥಗಿತ ಮತ್ತು ಅಭಿವ್ಯಕ್ತಿಯ ನಿಗ್ರಹಗಳು, ಪ್ರಭುತ್ವದ ಪ್ರೊಪಗಂಡಾ, ದ್ವೇಷದ ಮಾತು ಮತ್ತು ಅಧಿಕಾರ ದುರುಪಯೋಗದ ವಿರುದ್ಧ ಈ ಧ್ವನಿಗಳು ವ್ಯಕ್ತವಾಗಿವೆ” ಎಂದು ಸೋನಾಕ್ಷಿ ಸಿನ್ಹಾ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದಾರೆ.

ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ.. ಎಂದು ಸೋನಾಕ್ಷಿ ಬರೆದಿದ್ದಾರೆ.

“ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಅಂತರ್ಜಾಲವನ್ನು ನಿಷೇಧಿಸಲಾಗಿದೆ. ಪ್ರಭುತ್ವ ಮತ್ತು ಮಾಧ್ಯಮಗಳ ಪ್ರೊಪಗಂಡಾ ಮೂಲಕ ಪ್ರತಿಭಟನಾಕಾರರನ್ನು ಕೆಣಕಲಾಗುತ್ತಿದೆ. ದ್ವೇಷದ ಮಾತು (ದೇಶ್ ಕೆ ಗದ್ದಾರೊಂ ಕೊ, ಗೋಲಿ ಮಾರೊ ಸರ್ದಾರೊ ಕೊ ಈಗ ಚಾಲ್ತಿಗೆ ಬಂದಿದೆ) ಪ್ರವರ್ಧಮಾನಕ್ಕೆ ಬರುತ್ತಿದೆ. ಈ ವಿಷಯವೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ನಟರು, ಕ್ರಿಕೆಟಿಗರು, ಮಂತ್ರಿಗಳು, ವಿದೇಶದಲ್ಲಿರುವ ಭಾರತೀಯ ನಿಯೋಗಗಳು ಮತ್ತು ಆಡಳಿತರೂಢ ಬಿಜೆಪಿಯ ನಾಯಕರು ಮತ್ತು ಬೆಂಬಲಿಗರು ಮಾಡಿದ ಟ್ವೀಟ್‌ಗಳ ಹಿಮಪಾತಕ್ಕೆ ಪ್ರತಿಕ್ರಿಯೆಯಾಗಿ ಸೋನಾಕ್ಷಿ ಅವರು ತಮ್ಮ ಪೋಸ್ಟ್ ಹಾಕಿದ್ದಾರೆ.

ಇಂಟರ್ನೆಟ್ ಸ್ಥಗಿತಗೊಳಿಸುವಿಕೆ, ಮುಳ್ಳುತಂತಿ, ಕಾಂಕ್ರೀಟ್ ಗೋಡೆಗಳು ಮತ್ತು ಮಾಧ್ಯಮ ದಿಗ್ಬಂಧನದೊಂದಿಗೆ ರೈತರ ಪ್ರತಿಭಟನೆಯನ್ನು ನಿಲ್ಲಿಸುವ ಸರ್ಕಾರದ ಪ್ರಯತ್ನಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಒಳಗಾದ ನಂತರ ಸರ್ಕಾರವನ್ನು ಬೆಂಬಲಿಸುವ ಟ್ವೀಟ್ ಅಭಿಯಾನ ಶುರುವಾಗಿದೆ. ಈ ಅಭಿಯಾನವು ಪ್ರಮುಖವಾಗಿ ಪಾಪ್ ತಾರೆ ರಿಹಾನ್ನಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ನಡೆದಿದೆ.

ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಎರಡು ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರವು ಈ ಪ್ರತಿಭಟನೆಯನ್ನು ಮುರಿಯಲು ವಾಮಮಾರ್ಗಗಳನ್ನು, ದೌರ್ಜನ್ಯದ ಕ್ರಮಗಳನ್ನು ಅನುಸರಿಸುತ್ತಿದೆ ಎಂಬ ಟೀಕೆಗಳು ವ್ಯಾಪಕವಾಗಿ ವ್ಯಕ್ತವಾಗಿವೆ.

ಭಾರತದ ಅಧಿಕಾರಸ್ಥರ ಕ್ರಮ, ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆಗಳು ಮತ್ತು ಅಶ್ಲೀಲತೆಗಳಿಗೆ ಗುರಿಯಾಗುವ ಸಾಧ್ಯತೆ, ಸರ್ಕಾರದ ಮತಾಂಧ ಬೆಂಬಲಿಗರ ಪ್ರತೀಕಾರದ ನಿಲುವಿನ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಗಣ್ಯರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ವಿರುದ್ಧ ನಿಲುವು ಪ್ರಕಟಿಸದೇ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಧೈರ್ಯ ಮೆರೆದಿದ್ದಾರೆ.


ಇದನ್ನೂ ಓದಿ; ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...