Homeಮುಖಪುಟಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಕ್ರಿಕೆಟಿಗರು, ಬಾಲಿವುಡ್ ತಾರೆಯರು ಸರ್ಕಾರದ ಪರವಾಗಿ ಟ್ವೀಟ್ ಮಾಡುತ್ತಿರುವ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಯಾವ ಅಳುಕೂ ಇಲ್ಲದೇ ಸರ್ಕಾರದ ವಿರುದ್ಧ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಎರಡು ತಿಂಗಳಿನಿಂದಲೂ ನಡೆಯುತ್ತಿರುವ ರೈತ ಪ್ರತಿಭಟನೆ ಮತ್ತು ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಭಾರತ ಸರ್ಕಾರದ ವಿರುದ್ಧ ಅಂತರರಾಷ್ಟ್ರೀಯ ಟೀಕೆಗಳು ಕೇಳಿಬಂದಿವೆ. ಆದರೆ ಅವುಗಳ ವಿರುದ್ಧ ಇಲ್ಲಿನ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದಾರೆ. ಆದರೆ ನಟಿ ಸೋನಾಕ್ಷಿ ಸಿನ್ಹಾ ಈ ಸಂಘಟಿತ ಅಭಿಯಾನದ ವಿರುದ್ಧ ಮಾತನಾಡಿದ ಸಾರ್ವಜನಿಕ ವ್ಯಕ್ತಿಗಳೊಂದಿಗೆ ಸೇರಿಕೊಂಡಿದ್ದಾರೆ.

‘ಹಸ್ತಕ್ಷೇಪ ಎನ್ನುತ್ತೀರಿ ಏಕೆ? ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ ಇದು’ ಎಂದಿರುವ ಸೋನಾಕ್ಷಿ, ರಿಹಾನ್ನ, ಗ್ರೇಟಾ ಅವರ ನಿಲುವನ್ನು ಸಮರ್ಥಿಸಿದ್ದಾರೆ.

“ಮಾನವ ಹಕ್ಕುಗಳ ಉಲ್ಲಂಘನೆ, ಇಂಟರ್ನೆಟ್ ಸ್ಥಗಿತ ಮತ್ತು ಅಭಿವ್ಯಕ್ತಿಯ ನಿಗ್ರಹಗಳು, ಪ್ರಭುತ್ವದ ಪ್ರೊಪಗಂಡಾ, ದ್ವೇಷದ ಮಾತು ಮತ್ತು ಅಧಿಕಾರ ದುರುಪಯೋಗದ ವಿರುದ್ಧ ಈ ಧ್ವನಿಗಳು ವ್ಯಕ್ತವಾಗಿವೆ” ಎಂದು ಸೋನಾಕ್ಷಿ ಸಿನ್ಹಾ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದಾರೆ.

ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ.. ಎಂದು ಸೋನಾಕ್ಷಿ ಬರೆದಿದ್ದಾರೆ.

“ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಅಂತರ್ಜಾಲವನ್ನು ನಿಷೇಧಿಸಲಾಗಿದೆ. ಪ್ರಭುತ್ವ ಮತ್ತು ಮಾಧ್ಯಮಗಳ ಪ್ರೊಪಗಂಡಾ ಮೂಲಕ ಪ್ರತಿಭಟನಾಕಾರರನ್ನು ಕೆಣಕಲಾಗುತ್ತಿದೆ. ದ್ವೇಷದ ಮಾತು (ದೇಶ್ ಕೆ ಗದ್ದಾರೊಂ ಕೊ, ಗೋಲಿ ಮಾರೊ ಸರ್ದಾರೊ ಕೊ ಈಗ ಚಾಲ್ತಿಗೆ ಬಂದಿದೆ) ಪ್ರವರ್ಧಮಾನಕ್ಕೆ ಬರುತ್ತಿದೆ. ಈ ವಿಷಯವೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ನಟರು, ಕ್ರಿಕೆಟಿಗರು, ಮಂತ್ರಿಗಳು, ವಿದೇಶದಲ್ಲಿರುವ ಭಾರತೀಯ ನಿಯೋಗಗಳು ಮತ್ತು ಆಡಳಿತರೂಢ ಬಿಜೆಪಿಯ ನಾಯಕರು ಮತ್ತು ಬೆಂಬಲಿಗರು ಮಾಡಿದ ಟ್ವೀಟ್‌ಗಳ ಹಿಮಪಾತಕ್ಕೆ ಪ್ರತಿಕ್ರಿಯೆಯಾಗಿ ಸೋನಾಕ್ಷಿ ಅವರು ತಮ್ಮ ಪೋಸ್ಟ್ ಹಾಕಿದ್ದಾರೆ.

ಇಂಟರ್ನೆಟ್ ಸ್ಥಗಿತಗೊಳಿಸುವಿಕೆ, ಮುಳ್ಳುತಂತಿ, ಕಾಂಕ್ರೀಟ್ ಗೋಡೆಗಳು ಮತ್ತು ಮಾಧ್ಯಮ ದಿಗ್ಬಂಧನದೊಂದಿಗೆ ರೈತರ ಪ್ರತಿಭಟನೆಯನ್ನು ನಿಲ್ಲಿಸುವ ಸರ್ಕಾರದ ಪ್ರಯತ್ನಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಒಳಗಾದ ನಂತರ ಸರ್ಕಾರವನ್ನು ಬೆಂಬಲಿಸುವ ಟ್ವೀಟ್ ಅಭಿಯಾನ ಶುರುವಾಗಿದೆ. ಈ ಅಭಿಯಾನವು ಪ್ರಮುಖವಾಗಿ ಪಾಪ್ ತಾರೆ ರಿಹಾನ್ನಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ನಡೆದಿದೆ.

ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಎರಡು ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರವು ಈ ಪ್ರತಿಭಟನೆಯನ್ನು ಮುರಿಯಲು ವಾಮಮಾರ್ಗಗಳನ್ನು, ದೌರ್ಜನ್ಯದ ಕ್ರಮಗಳನ್ನು ಅನುಸರಿಸುತ್ತಿದೆ ಎಂಬ ಟೀಕೆಗಳು ವ್ಯಾಪಕವಾಗಿ ವ್ಯಕ್ತವಾಗಿವೆ.

ಭಾರತದ ಅಧಿಕಾರಸ್ಥರ ಕ್ರಮ, ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆಗಳು ಮತ್ತು ಅಶ್ಲೀಲತೆಗಳಿಗೆ ಗುರಿಯಾಗುವ ಸಾಧ್ಯತೆ, ಸರ್ಕಾರದ ಮತಾಂಧ ಬೆಂಬಲಿಗರ ಪ್ರತೀಕಾರದ ನಿಲುವಿನ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಗಣ್ಯರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ವಿರುದ್ಧ ನಿಲುವು ಪ್ರಕಟಿಸದೇ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಧೈರ್ಯ ಮೆರೆದಿದ್ದಾರೆ.


ಇದನ್ನೂ ಓದಿ; ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...