Homeಮುಖಪುಟಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

ಕ್ರಿಕೆಟಿಗರು, ಬಾಲಿವುಡ್ ತಾರೆಯರು ಸರ್ಕಾರದ ಪರವಾಗಿ ಟ್ವೀಟ್ ಮಾಡುತ್ತಿರುವ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಯಾವ ಅಳುಕೂ ಇಲ್ಲದೇ ಸರ್ಕಾರದ ವಿರುದ್ಧ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಎರಡು ತಿಂಗಳಿನಿಂದಲೂ ನಡೆಯುತ್ತಿರುವ ರೈತ ಪ್ರತಿಭಟನೆ ಮತ್ತು ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಭಾರತ ಸರ್ಕಾರದ ವಿರುದ್ಧ ಅಂತರರಾಷ್ಟ್ರೀಯ ಟೀಕೆಗಳು ಕೇಳಿಬಂದಿವೆ. ಆದರೆ ಅವುಗಳ ವಿರುದ್ಧ ಇಲ್ಲಿನ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದಾರೆ. ಆದರೆ ನಟಿ ಸೋನಾಕ್ಷಿ ಸಿನ್ಹಾ ಈ ಸಂಘಟಿತ ಅಭಿಯಾನದ ವಿರುದ್ಧ ಮಾತನಾಡಿದ ಸಾರ್ವಜನಿಕ ವ್ಯಕ್ತಿಗಳೊಂದಿಗೆ ಸೇರಿಕೊಂಡಿದ್ದಾರೆ.

‘ಹಸ್ತಕ್ಷೇಪ ಎನ್ನುತ್ತೀರಿ ಏಕೆ? ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ ಇದು’ ಎಂದಿರುವ ಸೋನಾಕ್ಷಿ, ರಿಹಾನ್ನ, ಗ್ರೇಟಾ ಅವರ ನಿಲುವನ್ನು ಸಮರ್ಥಿಸಿದ್ದಾರೆ.

“ಮಾನವ ಹಕ್ಕುಗಳ ಉಲ್ಲಂಘನೆ, ಇಂಟರ್ನೆಟ್ ಸ್ಥಗಿತ ಮತ್ತು ಅಭಿವ್ಯಕ್ತಿಯ ನಿಗ್ರಹಗಳು, ಪ್ರಭುತ್ವದ ಪ್ರೊಪಗಂಡಾ, ದ್ವೇಷದ ಮಾತು ಮತ್ತು ಅಧಿಕಾರ ದುರುಪಯೋಗದ ವಿರುದ್ಧ ಈ ಧ್ವನಿಗಳು ವ್ಯಕ್ತವಾಗಿವೆ” ಎಂದು ಸೋನಾಕ್ಷಿ ಸಿನ್ಹಾ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದಾರೆ.

ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ.. ಎಂದು ಸೋನಾಕ್ಷಿ ಬರೆದಿದ್ದಾರೆ.

“ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಅಂತರ್ಜಾಲವನ್ನು ನಿಷೇಧಿಸಲಾಗಿದೆ. ಪ್ರಭುತ್ವ ಮತ್ತು ಮಾಧ್ಯಮಗಳ ಪ್ರೊಪಗಂಡಾ ಮೂಲಕ ಪ್ರತಿಭಟನಾಕಾರರನ್ನು ಕೆಣಕಲಾಗುತ್ತಿದೆ. ದ್ವೇಷದ ಮಾತು (ದೇಶ್ ಕೆ ಗದ್ದಾರೊಂ ಕೊ, ಗೋಲಿ ಮಾರೊ ಸರ್ದಾರೊ ಕೊ ಈಗ ಚಾಲ್ತಿಗೆ ಬಂದಿದೆ) ಪ್ರವರ್ಧಮಾನಕ್ಕೆ ಬರುತ್ತಿದೆ. ಈ ವಿಷಯವೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ನಟರು, ಕ್ರಿಕೆಟಿಗರು, ಮಂತ್ರಿಗಳು, ವಿದೇಶದಲ್ಲಿರುವ ಭಾರತೀಯ ನಿಯೋಗಗಳು ಮತ್ತು ಆಡಳಿತರೂಢ ಬಿಜೆಪಿಯ ನಾಯಕರು ಮತ್ತು ಬೆಂಬಲಿಗರು ಮಾಡಿದ ಟ್ವೀಟ್‌ಗಳ ಹಿಮಪಾತಕ್ಕೆ ಪ್ರತಿಕ್ರಿಯೆಯಾಗಿ ಸೋನಾಕ್ಷಿ ಅವರು ತಮ್ಮ ಪೋಸ್ಟ್ ಹಾಕಿದ್ದಾರೆ.

ಇಂಟರ್ನೆಟ್ ಸ್ಥಗಿತಗೊಳಿಸುವಿಕೆ, ಮುಳ್ಳುತಂತಿ, ಕಾಂಕ್ರೀಟ್ ಗೋಡೆಗಳು ಮತ್ತು ಮಾಧ್ಯಮ ದಿಗ್ಬಂಧನದೊಂದಿಗೆ ರೈತರ ಪ್ರತಿಭಟನೆಯನ್ನು ನಿಲ್ಲಿಸುವ ಸರ್ಕಾರದ ಪ್ರಯತ್ನಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಒಳಗಾದ ನಂತರ ಸರ್ಕಾರವನ್ನು ಬೆಂಬಲಿಸುವ ಟ್ವೀಟ್ ಅಭಿಯಾನ ಶುರುವಾಗಿದೆ. ಈ ಅಭಿಯಾನವು ಪ್ರಮುಖವಾಗಿ ಪಾಪ್ ತಾರೆ ರಿಹಾನ್ನಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ನಡೆದಿದೆ.

ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಎರಡು ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರವು ಈ ಪ್ರತಿಭಟನೆಯನ್ನು ಮುರಿಯಲು ವಾಮಮಾರ್ಗಗಳನ್ನು, ದೌರ್ಜನ್ಯದ ಕ್ರಮಗಳನ್ನು ಅನುಸರಿಸುತ್ತಿದೆ ಎಂಬ ಟೀಕೆಗಳು ವ್ಯಾಪಕವಾಗಿ ವ್ಯಕ್ತವಾಗಿವೆ.

ಭಾರತದ ಅಧಿಕಾರಸ್ಥರ ಕ್ರಮ, ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆಗಳು ಮತ್ತು ಅಶ್ಲೀಲತೆಗಳಿಗೆ ಗುರಿಯಾಗುವ ಸಾಧ್ಯತೆ, ಸರ್ಕಾರದ ಮತಾಂಧ ಬೆಂಬಲಿಗರ ಪ್ರತೀಕಾರದ ನಿಲುವಿನ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಗಣ್ಯರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ವಿರುದ್ಧ ನಿಲುವು ಪ್ರಕಟಿಸದೇ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಧೈರ್ಯ ಮೆರೆದಿದ್ದಾರೆ.


ಇದನ್ನೂ ಓದಿ; ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...